ಇಂದು ರಾಜಕೀಯ ಅತ್ಯಂತ ಕಲಸು ಮೇಲೋಗರವಾಗಿದೆ. ಬ್ರಷ್ಟಾಚಾರ ಮಿತಿ ಮೀರಿದೆ. ಇದನ್ನು ತಡೆಯುವುದು ಹೇಗೆ? ಪ್ರಾಮಾಣಿಕರಿಗೆ ಮತ ಹಾಕಿ ಎಂದು ಎಲ್ಲರು ಹೇಳುತ್ತಾರೆ. ಆದರೆ ನಾವು ಪ್ರಾಮಾಣಿಕರಿಗೆ ಮತ ಹಾಕಿದರೂ ಅವರು ಗೆದ್ದ ನಂತರ ಪ್ರಮನಿಕರಗಿಯೇ ಇರುತ್ತಾರೆಂದು ಹೇಗೆ ಹೇಳುವುದು? ಮೊದಲು ಉತ್ತಮನಗಿದ್ದ ರಾಜಕಾರಣಿ ನಂತರ ಬ್ರಷ್ಟನದ ಉದಾಹರಣೆಗಳು ಇವೆಯಲ್ಲ? ಇದಕ್ಕೆ ಒಂದೇ ದಾರಿಯೆಂದರೆ ಮೊದಲನೆಯದಾಗಿ ಪಕ್ಷ, ಜಾತಿ ಯಾವುದನ್ನು ನೋಡದೆ ಪ್ರಾಮಾಣಿಕರಿಗೆ ಮತ ಹಾಕಬೇಕೆಂಬುದೇನೋ ನಿಜ. ಆದರೆ ಅದಕ್ಕಿಂತಲೂ ಮುಖ್ಯವಾಗಿ ಇನ್ನೊಂದು ಕೆಲಸ ಆಗಬೇಕಾಗಿದೆ. ಅದೇನೆಂದರೆ, ಭ್ರಷ್ಟರಾದವರನ್ನು ಮೊದಲು ಮತ್ತ ಹಾಕುವ ಕಾರ್ಯ ನಡೆಯಬೇಕು. ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡವರಿಗೆ ಕಠಿಣ ಶಿಕ್ಷೆ ಆಗಬೇಕು. ಅವರನ್ನು ಒದ್ದು ಜ್ಯ್ಲಿಗೆ ತಳ್ಳಬೇಕು. ಅಂತವರಿಗೆ ಕಂಡಲ್ಲಿ ಬೂಟು ಎಸೆಯಬೇಕು. ಆಗ ಮಾತ್ರ ರಾಜಕಾರಣ ಶುದ್ದಿ ಆದೀತು.
ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್ನ ಟಾಪ್ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...
ಕಾಮೆಂಟ್ಗಳು