ವಿಷಯಕ್ಕೆ ಹೋಗಿ

ಮೈ ಲಾರ್ಡ್ ನನ್ನ ವಾದ....

"ದೇಶವನ್ನು ಒಡೆಯಲು ಯತ್ನಿಸಬೇಡಿ" - ಇದು ಮೊನ್ನೆ ನೀವು ಹೇಳಿದ ಮಾತು. ಒಂದು ಪ್ರತಿಮೆಯ ಅನಾವರಣವನ್ನು ತಡೆಯುವುದರಿಂದ ದೇಶ ಒಡೆಯುತ್ತದೆಯೇ? ಇಷ್ಟಕ್ಕೂ ದೇಶ ಒಡೆಯದಿರಲೆಂದು ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆಯೇ? ಇವೆರಡೂ ಅಲ್ಲ ಅನ್ನುವುದು ಎಲ್ಲರಿಗೂ ತಿಳಿದ ವಿಷಯ. ಮೊದಲಿಗೆ ಎರಡು ರಾಜ್ಯಗಳ ಸೌಹಾರ್ಧತೆಗಾಗಿ ತಿರುವಳ್ಳುವರ್ ಪ್ರತಿಮೆ ಬೆಂಗಳೂರಿಗೆ ಬರಲಿಲ್ಲ ಅನ್ನುವುದನ್ನು ತಿಳಿಯಪಡಿಸುತ್ತೇನೆ ಯುವರ್ ಆನರ್. ಅದನ್ನು ತಮಿಳರು ಮೊದಲು ಇಲ್ಲಿ ಸ್ಥಾಪಿಸಲು ಹೊಂಚು ಹಾಕಿದರು. ಅದಾದ ಎಷ್ಟೋ ವರ್ಷಗಳ ನಂತರ ತಿರುವಳ್ಳುವರ್ ಪ್ರತಿಮೆಗೆ ಪ್ರತಿಯಾಗಿ ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆ ಸ್ಥಾಪಿಸಬೇಕು ಅನ್ನುವ ಹೊಸ ವಾದ ಹುಟ್ಟಿಕೊಂಡಿತು ಅಷ್ಟೇ.
ನಾವು ಯಾರನ್ನು ಬೇಕಾದರೂ ನಿಯಂತ್ರಿಸಬಹುದು ಅನ್ನುವುದು ಮೊದಲಿಗೆ ರಾಜಕಾರಣಿಗಳಿಗೆ, ನಂತರ ಪೊಲೀಸರಿಗೆ, ತದ ನಂತರ ಪತ್ರಕರ್ತರಿಗೆ ಹಾಗೂ ಇದೀಗ ನಿಮಗೆ ಅಂಟಿದ ಜಾಡ್ಯ. "ಯಾರೂ ಪ್ರತಿಮೆ ಅನಾವರಣವನ್ನು ತಡೆಯಬಾರದು, ಅಷ್ಟೇ ಅಲ್ಲ, ಪ್ರತಿಭಟನೆಯನ್ನೂ ಮಾಡಬಾರದು" ಅನ್ನುವ ಮೂಲಕ ಪ್ರಜಾಪ್ರಭುತ್ವದಲ್ಲಿ ನಾವು ಬದುಕುತ್ತಿದ್ದೇವೆ ಅನ್ನುವ ಅಂಶವನ್ನೇ ನೀವು ಅಳಿಸಿ ಹಾಕಿದಿರಿ. ನಿಜವಾಗಿಯೂ ನ್ಯಾಯದಾನ ನೀಡುವುದಾಗಿದ್ದರೆ "ಚೆನ್ನೈನಲ್ಲಿಯೂ ಸರ್ವಜ್ಞನ ಪ್ರತಿಮೆಯನ್ನು ಸೂಕ್ತ ಸ್ಥಳದಲ್ಲಿ ಸ್ಥಾಪಿಸುವಂತೆ ಸೂಚಿಸಬುದಾಗಿತ್ತು. ಒಂದೇ ದಿನ ಎರಡೂ ಕಡೆ ಅನಾವರಣ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬಹುದಾಗಿತ್ತು. ಆದರೆ ಅದನ್ನು ನೀವು ಮಾಡಲಿಲ್ಲ.
ಕೆಲವು ವರ್ಷದ ಹಿಂದೆ ಕೋಲಾರದಲ್ಲಿ ತಮಿಳು ಶಾಸಕನೊಬ್ಬ ಎಂಜಿಆರ್ ಪ್ರತಿಮೆಯನ್ನು ಸ್ಥಾಪಿಸಲು ಹೊರಟಿದ್ದ. ಅದನ್ನು ಕನ್ನಡ ಮುಖಂಡರು ತಡೆದರು. ಬಹುಶಃ ಅದರ ದೂರು ನಿಮ್ಮ ಬಳಿ ಬಂದಿದ್ದರೆ ನೀವು ಹೇಳಿರುತ್ತಿದ್ದಿರಿ.. "ದೇಶ ಒಡೆಯಬೇಡಿ, ಎಂಜಿಆರ್ ಪ್ರತಿಮೆ ಸ್ಥಾಪಿಸಲು ಬಿಡಿ" ಎಂದು! ಏಕೆಂದರೆ ತಮಿಳರ ಪಾಲಿಗೆ ಎಂಜಿಆರ್ ಸಹ ಮಹಾನ್ ವ್ಯಕ್ತಿಯೇ.
ಇದೇ ತಮಿಳನೊಬ್ಬ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ನೀಡಬಾರದು ಎಂದು ನಿಮ್ಮ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದಾಗ ಖಂಡಿತಾ ನಿಮ್ಮ ನ್ಯಾಯಾಲಯ ಅವನಿಗೆ "ದೇಶ ಒಡೆಯಲು ಯತ್ನಿಸಬೇಡಿ" ಎಂದು ಎಚ್ಚರಿಕೆ ನೀಡಲೇ ಇಲ್ಲ. ಕಾವೇರಿ ನೀರಿಗಾಗಿ ಜಯಲಲಿತ ಸುಪ್ರೀಂ ಕೋರ್ಟ್‌‍ಗೆ ಹೋದಾಗ ಆಕೆಗೂ ಕೂಡಾ "ದೇಶ ಒಡೆಯಲು ಯತ್ನಿಸಬೇಡಿ" ಎಂದು ಹೇಳಲಿಲ್ಲ. ಏಕೆಂದರೆ ದೇಶ ಒಡೆಯಲು ಕನ್ನಡಿಗರಲ್ಲದೇ ಇನ್ಯಾರು ಯತ್ನಿಸಲು ಸಾಧ್ಯ ಅನ್ನುವುದು ನಿಮ್ಮ ಅಭಿಪ್ರಾಯ.
ಅವರು ನೀರು ಬಿಡಿ ಅಂದಾಗೆಲ್ಲಾ ನಾವು ಬಿಡಬೇಕು. ಇಲ್ಲಾಂದರೆ ನಿಮ್ಮ ಪ್ರಕಾರ ದೇಶ ಒಡೆದು ಚೂರಾಗಿ ಹೋಗುತ್ತದೆ. ಅವರು ಹೇಳಿದ ಜಾಗದಲ್ಲಿ, ಅವರು ಹೇಳಿದ ಪ್ರತಿಮೆಯನ್ನು ಸ್ಥಾಪಿಸಬೇಕು. ಇಲ್ಲಾಂದರೆ ದೇಶ ನಮ್ಮಿಂದ ಒಡೆದು ಹೋಗುತ್ತದೆ. ಇದೆಲ್ಲಿಯ ನ್ಯಾಯ ಸ್ವಾಮಿ?
ತಿರುವಳ್ಳುವರ್ ದೊಡ್ಡ ಕವಿ ಇರಬಹುದು. ಆದರೆ ಅದೇ ತಮಿಳು ಸರ್ಕಾರ ಕವಿಯ ನುಡಿಗಳನ್ನು ಕನ್ನಡದಲ್ಲಿ ಮುದ್ರಿಸಿ ಕಡಿಮೆ ಬೆಲೆಗೆ ನಮಗೆಲ್ಲಾ ನೀಡಿದ್ದಿದ್ದರೆ ನಮಗೂ ಆ ಕವಿಯ ದೊಡ್ಡ ಜ್ಞಾನ ತಿಳಿದಿರುತ್ತಿತ್ತು. ತಮಿಳರು ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಪುಸ್ತಕ ಮುದ್ರಿಸುತ್ತಾರೆ. ಆದರೆ ಅವರ ಸಾಹಿತ್ಯದ ಬಗ್ಗೆ ಕನ್ನಡದಲ್ಲಿ ಮುದ್ರಿಸುವ ಪ್ರಯತ್ನ ಮಾಡುವುದಿಲ್ಲ.
ಅದೆಲ್ಲಾ ಇರಲಿ, ಈಗ ನಿಮ್ಮ ಬಗ್ಗೆಯೇ ಒಂದೆರಡು ಪ್ರಶ್ನೆ.
ಸರ್ಕಾರಿ ಅಧಿಕಾರಿಗಳು, ರಾಜಕಾರಣಿಗಳು ತಂತಮ್ಮ ಆಸ್ತಿ ವಿವರವನ್ನು ಭಹಿರಂಗಪಡಿಸುತ್ತಾರೆ. ಆದರೆ ನಿವ್ಯಾಕೆ ಅದನ್ನು ಮಾಡಲು ಹಿಂಜರಿಯುತ್ತೀರಿ ಸ್ವಾಮಿ? ಒಂದು ವಿಧದಲ್ಲಿ ನೀವೂ ಕೂಡಾ ಸರಕಾರಿ ನೌಕರರೇ ಹೊರತೂ ಬೇರೇನಲ್ಲ. ಹಾಗಿದ್ದರೆ ನಿಮಗೇಕೆ ವಿಷೇಶ ಸೂತ್ರ? ಸರ್ಕಾರದಿಂದ ಪಡೆವ ಸಂಬಳದ ಲೆಕ್ಕವನ್ನು ಸರಕಾರಕ್ಕೆ ನೀಡಲು ನಿಮಗೇಕೆ ಹಿಂಜರಿಕೆ? ಉಳಿದವರೆಲ್ಲಾ ಸಾಧಾರಣ ಪ್ರಜೆಗಳು, ನೀವು ಮಾತ್ರ ಎಲ್ಲರಿಗಿಂತಲೂ ಮಿಗಿಲು ಅನ್ನುವ ಭ್ರಮೆಯೇ?
ದಟ್ಸಾಲ್ ಯುವರ್ ಆನರ್...

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...