ವಿಷಯಕ್ಕೆ ಹೋಗಿ

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು.
ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು.

2. "ನೀನು ತುಂಬಾ ಸುಂದರಿ"
"ನೀನು ತುಂಬಾ ತುಂಟ"

3."ನಿನಗೆ ವಯಸ್ಸಾಯ್ತು ಕಣೆ"
"ನಿಮಗೆ ಕೈಲಾಗಲ್ಲ"

4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ.
ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ"

5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ.

6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು.
ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ.

7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು.

8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ.


9. ಎರಡು ಸಾಲಿನ ಕಥೆ ಹೇಳಲೆಂದು ಅವನು ಅಣಿಯಾದ.
ಅವಳ ನೆನಪಾಯ್ತು...... ಮೊದಲ ಸಾಲೇ ಮರೆತು ಹೋಯ್ತು.

10. ತ್ಸುನಾಮಿ ಹೊಡೆದು ಊರು, ಮನೆ, ಕಟ್ಟಡಗಳ ಜೊತೆ ಎಲ್ಲರನ್ನೂ ಕೊಚ್ಚಿಕೊಂಡು ಹೋಗಿತ್ತು. ಒಬ್ಬಾತನ ಮೊದಲ ಹೆಂಡತಿಯ ಆರು ವರ್ಷದ ಮಗು ಅದು ಹೇಗೋ ಬದುಕುಳಿದು ತನ್ನ ಆಟದ ಸಾಮಾನುಗಳನ್ನು ಹುಡುಕುತ್ತಿತ್ತು.
 
11. ದಿನವೂ ಪ್ರೇಮ ಪತ್ರವನ್ನು ನನ್ನಿಂದಲೇ ಬರೆಸಿಕೊಂಡು ಹೋಗುತ್ತಿದ್ದ.
ಕೊನೆಗೊಂದು ದಿನ ಆತ್ಮಹತ್ಯ ಪತ್ರವನ್ನು ಮಾತ್ರ ತಾನೇ ಬರೆದ.

12. ಒಂದು ಎತ್ತು ಇನ್ನೊಂದು ಎತ್ತಿಗೆ ಹೇಳಿತು "ಈ ಮನುಷ್ಯನ ಗಾಡಿ ಎಳೆದುಕೊಂಡು ಎಷ್ಟು ದಿನ ಅಂತ ಬದುಕೋದು? ಆ ಬೆಟ್ಟದಲ್ಲಿ ತುಂಬಾ ಹುಲ್ಲು ಬೆಳೆದಿದೆ, ಅಲ್ಲಿ ಹೋಗಿ ತಿಂದುಕೊಂಡು ಆರಾಮಾಗಿ ಇರೋಣವೇ?"
ಇನ್ನೊಂದು ಎತ್ತು ಹೇಳಿತು "ಅಲ್ಲಿ ಸಂಜೆಯಾದ ನಂತರ ನಮ್ಮನ್ನು ಕಟ್ಟಿ ಹಾಕಲು ಯಾರೂ ಇರಲ್ಲ, ಏನು ಮಾಡೋದು ?"

13. ಅಳುತ್ತಾ ಕುಳಿತಿದ್ದ ಮಗನನ್ನು ಸಮಾಧಾನ ಪಡಿಸುತ್ತಾ ಅಪ್ಪ ಹೇಳಿದ.. "ಅಳಬೇಡ ಕಂದ, ಅವಳು ಹೋದರೆ ಏನಂತೆ. ಇನ್ನೊಬ್ಬಳನ್ನು ಮನೆಗೆ ತಂದರಾಯ್ತು."
ಮಗ ಅಳುತ್ತಾ ನುಡಿದ.. "ತರಬಹುದು ಅಪ್ಪಾ.. ಆದರೆ ಆಕೆ ನನಗೆ ಚಿಕ್ಕಮ್ಮ ಆಗುತ್ತಾಳೆಯೇ ಹೊರತೂ ಹೆತ್ತಮ್ಮ ಆಗುವುದಿಲ್ಲವಲ್ಲ?"

14. ಹದಿನೈದು ವರ್ಷದ ಹಿಂದೆ ನಾನು ಬಾಲಕನಾಗಿದ್ದಾಗ ಆ ದೀಪಾವಳಿಯನ್ನು ತುಂಬಾ ಖುಶಿಯಿಂದ ಪಟಾಕಿ ಸಿಡಿಸಿ ಕೊಂಡಾಡಿದೆ. ಎಷ್ಟೊಂದು ಕೊಂಡಾಡಿದೆನೆಂದರೆ ಇಂದಿಗೂ ನನಗೆ ದೃಷ್ಟಿ ಬಂದಿಲ್ಲ.

ಕಾಮೆಂಟ್‌ಗಳು

ಅನಾಮಧೇಯಹೇಳಿದ್ದಾರೆ…
ಲೇಖಕರು ಈ ಕಾಮೆಂಟ್‌ ಅನ್ನು ತೆಗೆದು ಹಾಕಿದ್ದಾರೆ.
ಗುಡುಗು ಮಿಂಚು ಹೇಳಿದ್ದಾರೆ…
@ Bharath S Gowda

ನಿಜ, ಅವ್ಯಾವೂ ಕವಿತೆಗಳಲ್ಲ. ಕವಿತೆ ಅಂತ ನಿಮಗೆ ಯಾರು ಹೇಳಿದರು ? ಸರಿಯಾಗಿ ಕಣ್ಣು ಬಿಟ್ಟು ನೋಡಿ. ಅವು "ನಾಲ್ಕು ಎರಡು ಸಾಲಿನ ಕತೆಗಳು"
ಅನಾಮಧೇಯಹೇಳಿದ್ದಾರೆ…
ನೀವು ಬರೆದಿರೋದು ಯಾವುದು ನಾಲ್ಕು ಎರಡು ಸಾಲಿನ ಕತೆಗಳು ಅಲ್ಲ ಸುಮ್ನೆ ಟೈಮ್ ಪಾಸುಗೆ ಏನ್ ಏನೋ ಪೋಸ್ಟ್ ಮಾಡಬೇಡಿ
ಗುಡುಗು ಮಿಂಚು ಹೇಳಿದ್ದಾರೆ…
ನಮಗೆ ಬರೆಯಲು ಬರಲ್ಲ ಗುರುವೆ. ಟೈಂ ಪಾಸ್‌ಗೆ ಏನೇನೋ ಬರೀತಿರ್ತೀವಿ. ಇಷ್ಟ ಇಲ್ಲಾಂದ್ರೆ ಓದಬೇಡಿ ಬಿಡಿ.

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...