ವಿಷಯಕ್ಕೆ ಹೋಗಿ

ಕನ್ನಡದವರು ಕನ್ನಡ ಓದಲ್ಲ

ಅದು ಜಗಜ್ಜಾಹೀರು. ನಮ್ಮ ಕನ್ನಡದವರು ಕಲಿಯೋದು ಕೋಟಿ ಭಾಷೆ. ಆಡೋದು ಕನ್ನಡ ಒಂದು ಬಿಟ್ಟು ಬೇರೆಲ್ಲಾ ಭಾಷೆ. ಓದೋದಂತೂ ಕನ್ನಡ ಇಲ್ಲವೇ ಇಲ್ಲ. ಈ ವಿಷಯ ಏನು ಹುಡುಕಿದರೂ ಸಿಗುವ ಗೂಗಲ್‌ನವರಿಗೂ ತಿಳಿದು ಹೋಗಿದೆ. ಅದಕ್ಕಾಗಿಯೇ ಅವರ ಸುದ್ಧಿ ಪೋರ್ಟಲ್‌ನಲ್ಲಿ [ http://news.google.co.in/ ] ಕನ್ನಡಕ್ಕೆ ಸ್ಥಾನವಿಲ್ಲ.

ಇಲ್ಲಿ ಆಂಗ್ಲದ ಜೊತೆ ಭಾರತೀಯ ಭಾಷೆಗಳಾದ  हिन्दी | தமிழ் | മലയാളം | తెలుగు - ಗಳಿಗೆ ಅವಕಾಶವಿದೆ. ಅಂದರೆ ಅವರೆಲ್ಲಾ ತಮ್ಮ ಭಾಷೆಯನ್ನು ಹೆಚ್ಚು ಪ್ರಿತಿಸುತ್ತಾರೆ ಮತ್ತು ಬಳಸುತ್ತಾರೆ. ನಮ್ಮವರು ನಮ್ಮ ಭಾಷೆಯನ್ನು ಪ್ರೀತಿಸುತ್ತಾರೆ... ಆದರೆ ಬಳಸುವುದಿಲ್ಲ. ಅದು ಗೂಗಲ್‌ನವರಿಗೆ ತಿಳಿದಿರುವುದರಿಂದಲೇ ಅವರು ಕನ್ನಡದ ಸುದ್ಧಿಗೆ ಬಂದಿಲ್ಲ.

ಮೊನ್ನೆ ಮೊನ್ನೆ "ಕುಬುಂಟು - ಲಿನಕ್ಸ್" ಅನ್ನು ನನ್ನ ಗಣಕಕ್ಕೆ ಪ್ರತಿಷ್ಠಾಪಿಸೋಣ ಎಂದು ಹೊರಟೆ. ಅದರಲ್ಲಿ ಕೂಡಾ ಭಾರತೀಯ ಹಲವಾರು ಭಾಷೆಗಳ ಆಯ್ಕೆ ಇದೆ. ಆದರೆ ಕನ್ನಡ ಇರಲಿಲ್ಲ. ಲಕ್ಷಾಂತರ ಮಂದಿ ಕನ್ನಡಿಗರು ಇವನ್ನೆಲ್ಲಾ ಉಪಯೋಗಿಸುತ್ತಾರೆಂಬುದರಲ್ಲಿ ಅನಿಮಾನವಿಲ್ಲ. ಆದರೆ ಯಾಕೆ ಎಲ್ಲೂ ಕನ್ನಡವಿಲ್ಲ ?? ಕಾರಣ ಸ್ಪಷ್ಟ... ನಮ್ಮವರು ಕನ್ನಡವನ್ನು ಬಳಸುವುದೇ ಇಲ್ಲ.

ಸೈಬರ‍್ ಫಂಡಾ . ಕಾಮ್‌ನವರು ( www.cyberfunda.com/) ಕನ್ನಡದಲ್ಲಿ ಪ್ರಶ್ನೋತ್ತರ ವಿಭಾಗ ಶುರು ಮಾಡಿದ್ದಾರೆ. ಅವರೇ ಹೇಳಿಕೊಂಡಿರುವಂತೆ ಮತ್ತು ನನಗೆ ತಿಳಿದಿರುವಂತೆ ಅದೇ ಕನ್ನಡಕ್ಕೆ ಹೊಸದು. ಆದರೆ ಅದರಲ್ಲಿ ಕನ್ನಡಿಗರ ಭಾಗವಹಿಸುವಿಕೆ ತೀರಾ ನೀರಸವಾಗಿದೆ. ದಿನಕ್ಕೆ ಸರಾಸರಿ ಒಂದು ಪ್ರಶ್ನೆ ಕೇಳಲ್ಪಟ್ಟರೆ ಅದೇ ಹೆಚ್ಚು. ಕನ್ನಡಿಗರು ಯಾಕೆ ಎಲ್ಲದಕ್ಕೂ ಆಂಗ್ಲದ ದಾಸರಾಗುತ್ತಾರೆಂಬುದು ನಿಗೂಢ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಪಡುವಣಕ್ಕೆ ಹೊರಟ ವಿಮಾನ ಏಕೆ ಬೇಗನೆ ತಲುಪುವುದಿಲ್ಲ ?

ಭೂಮಿ ವೇಗವಾಗಿ ಸುತ್ತುತ್ತಿದೆ ಎಂಬುದನ್ನು ಒಪ್ಪದವರು ಮುಂದಿಡುವ ಒಂದು ಪ್ರಶ್ನೆ ಹೀಗಿದೆ. "ಭೂಮಿ ಅಷ್ಟು ವೇಗವಾಗಿ ತಿರುಗುತ್ತ ಇದ್ದರೆ ಒಂದು ವಿಮಾನವು ಚೀನಾದಿಂದ ಸೌದಿಗೆ ಹೋಗಬೇಕಾದಲ್ಲಿ ಸ್ವಲ್ಪ ಮೇಲೆ ಹೋಗಿ ನಿಂತುಕೊಂಡರೆ ಸಾಕಲ್ಲ, ಭೂಮಿ ತಿರುಗುವುದರಿಂದ ಸೌದಿ ಅರೇಬಿಯಾ ತಾನಾಗಿಯೇ ವಿಮಾನದ ಕೆಳಗೆ ಬರುತ್ತದೆ. ಅಥವಾ ಮೂಡಣ ದಿಕ್ಕಿಗೆ ಹೊರಟ ವಿಮಾನವು ತಡವಾಗಿ ತಲುಪಬೇಕು ಮತ್ತು ಪಡುವಣ ದಿಕ್ಕಿಗೆ ಹೊರಟ ವಿಮಾನವು ಬೇಗನೆ ತಲುಪಬೇಕು" ಎಂಬ ವಾದವನ್ನು ಮುಂದಿಡುತ್ತಾರೆ. ಆದರೆ ಹಾಗೆ ಆಗಲು ಸಾಧ್ಯವಿಲ್ಲ, ಏಕೆಂದರೆ ಭೂಮಿ ಅಂದರೆ ಬರೀ ನೆಲವಷ್ಟೇ ಅಲ್ಲ, ಅದರ ಸುತ್ತಲಿನ ವಾತಾವರನವೂ ಸೇರಿ ಅದರ ಜೊತೆಗೇ ತಿರುಗುತ್ತಾ ಇದೆ. ಹಾಗಾಗಿ ವಿಮಾನವು ಮೇಲೆ ಹೋಗಿ ನಿಂತರೂ ಸಹ ಅದು ಭೂಮಿಯ ಜೊತೆಗೇ ಸಾಗುತ್ತದೆಯಾದ್ದರಿಂದ ಕೆಳಗಿನ ನೆಲ ಮಾತ್ರ ಜರುಗಲು ಸಾಧ್ಯ ಇಲ್ಲ. ಇದನ್ನು ನಾವೇ ಪರಿಶೀಲಿಸಬಹುದು. ಹೇಗೆಂದರೆ.. ವೇಗವಾಗಿ ಹೋಗುತ್ತಿರುವ ರೈಲಿನ ಎಲ್ಲಾ ಕಿಟಕಿಗಳನ್ನೂ ಮುಚ್ಚಿ ಅದರ ಮಾಡಿನ ಹತ್ತಿರದಿಂದ ಒಂದು ಚಿಕ್ಕ ವಸ್ತುವನ್ನು (ಉದಾ : ಗೋಲಿ) ಬಿಟ್ಟರೆ ಅದು ನಾವು ಬಿಟ್ಟಬಿಂದುವಿನ ನೇರಕ್ಕೇ ಬಿಳುತ್ತದೆಯೆ ಹೊರತಾಗಿ ರೈಲು ಓಡುತ್ತಿರುವುದರಿಂದ ಸ್ವಲ್ಪ ಹಿಂದೆ ಬೀಳುವುದಿಲ್ಲ. ಹಾಗೆಯೇ ಗಾಳಿಯಾಡದಂತೆ ಮುಚ್ಚಿದ ರೈಲು ಬೋಗಿಯ ಒಳಗೆ ಒಂದು ತುದಿಯಿಂದ ಇನ್ನೊಂದು ತುದಿಗೆ ಚೆಂಡನ್ನು ಒಂದೇ ಜೋರಿನಲ್ಲಿ ಎಸೆದರೆ ಅದು ಎರಡೂ ದಿಕ್ಕಿಗೂ (ಮುಂದಿನಿ...