ವಿಷಯಕ್ಕೆ ಹೋಗಿ

ಮುಖ್ಯಮಂತ್ರಿ ಮೇಲೆ ಮೊಖದ್ದಮೆ ದಾಖಲಾಗುತ್ತಾ ?

ಕೊನೆಗೂ ರಾಜ್ಯಪಾಲರು ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ಭ್ರಷ್ಟ ಮುಖ್ಯಮಂತ್ರಿಯೊಬ್ಬನ ಮೇಲೆ ಮೊಖದ್ದಮೆ ದಾಖಲಿಸಲು ಅವಕಾಶ ಕೊಟ್ಟು ಕರ್ನಾಟಕದ ಮಟ್ಟಿಗೆ ಇತಿಹಾಸ ಬರೆದಿದ್ದಾರೆ. ಅಧಿಕಾರದಲ್ಲಿರುವಾಗಲೇ ಮೊಖದ್ದಮೆ ಎದುರಿಸುತ್ತಿರುವ ಎರಡನೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ. ಇಂಥಹುದೊಂದು ಧೈರ್ಯದ ಕೆಲಸಕ್ಕೆ ಕೈ ಹಾಕಿದ ಇಬ್ಬರು ನ್ಯಾಯವಾದಿಗಳಿಗೆ ಜಯವಾಗಲಿ. ಅವರು ಮೊಖದ್ದಮೆ ದಾಖಲಿಸಲಿ, ನ್ಯಾಯಾಲಯದಲ್ಲಿ ಯಡ್ಡಿ ಹಗರಣ ಮಾಡಿರುವುದು ನಿರೂಪಿತವಾದರೆ ಈ ಮನುಷ್ಯ ಜೈಲಿಗೆ ಹೋಗಲಿ. ಅದು ಉಳಿದ ರಾಜಕಾರಣಿಗಳಿಗೂ ಪಾಠವಾಗಲಿ. ರಾಜ್ಯ ಉದ್ಧಾರವಾಗಲಿ.

ಭ್ರಷ್ಟ ಮುಖ್ಯಮಂತ್ರಿ ಯಡಿಯೂರಪ್ಪ ತನ್ನ ಹಗರಣಗಳಿಗೆ ಎಲ್ಲಿ ಶಿಕ್ಷೆಯಾಗಿ ಹೋಗುತ್ತೋ ಎಂಬ ಭಯದಲ್ಲಿ ತೊಳಲಾಡುತ್ತಿರುವುದು ಗೋಚರವಾಗುತ್ತಿದೆ. ಹಾಗಾಗಿಯೇ ರಾಜ್ಯಪಾಲರ ವಿರುದ್ಧ "ರಾಜ್ಯ ಬಂದ್"ಗೆ ಕರೆ ಕೊಟ್ಟಿದ್ದಾರೆ. ಆದರೆ ಇದರಿಂದ ಆಗುವ ನಷ್ಟ ಇವರಪ್ಪ ತುಂಬಿ ಕೊಡ್ತಾರಾ? ಅಥವಾ ಬಿಜೆಪಿ ತುಂಬಿ ಕೊಡುತ್ತಾ ? ಬಹಳಷ್ಟು ಕಡೆ ಕಲ್ಲು ತೂರಾಟ ನಡೆಯುತ್ತಿದೆ. ಬಸ್‌ಗಳು ಇಲ್ಲ. ಪೊಲೀಸರೇ ಬಂದ್ ನಡೆಸುತ್ತಿದ್ದಾರೆ. ಶಾಲಾ ಕಾಲೇಜು ರಜೆ. ನನ್ನದೇ ಒಂದು ಮುಖ್ಯವಾದ ಕೆಲಸಕ್ಕೆ ಪ್ರಮುಖ ಟೆಕ್ನಿಷಿಯನ್ ಒಬ್ಬರು ಇಂದು ತಮ್ಮ ಸಮಯ ನೀಡಿದ್ದರು. ಬಂದ್‌ನಿಂದ ಆ ಕೆಲಸ ನಿಂತು ಹೋಯ್ತು. ಅವರು ಇನ್ನು ಸಿಗುವುದು ಯಾವತ್ತೋ? ಒಂದೋ ಅವರಿಗಾಗಿ ಕಾದು ನನ್ನ ಸಮಯ ಹಾಳು ಮಾಡಿಕೊಳ್ಳಬೇಕು, ಅಥವಾ ಬೇರೆ ಯಾರಿಂದಲಾದರೂ ಆ ಕೆಲಸ ಮಾಡಿಸಿ ಗುಣಮಟ್ಟವಿಲ್ಲದೇ ನಷ್ಟ ಮಾಡಿಕೊಳ್ಳಬೇಕು. ಅದನ್ನು ಈ ಬಡ್ಡೀಮಗ ಯಡ್ಡಿ ತುಂಬಿ ಕೊಡುತ್ತಾನಾ?

ಈ ಹಾಳು ರಾಜಕಾರಣಿಗಳು ದೇಶವನ್ನು ರಾಜ್ಯವನ್ನು ಉದ್ಧಾರ ಮಾಡುವುದು ಅಷ್ಟರಲ್ಲೇ ಇದೆ. ಇವರಿಮದ ದೇಶ ದುರ್ಗತಿ ಹೊಂದುತ್ತಿದೆಯೇ ಹೊರತೂ ಉದ್ದಾರವಂತೂ ಆಗುತ್ತಿಲ್ಲ. ರಾಜ್ಯ ಬಂದ್‌ಗೆ ಕರೆ ಕೊಡಲು ರಾಜ್ಯವೇನು ಇವರಪ್ಪನ ಮನೆ ಆಸ್ತಿಯಾ?

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...