ವಿಷಯಕ್ಕೆ ಹೋಗಿ

ಭೀತಿ ಹುಟ್ಟಿಸುವ ಜ್ಯೋತಿಷಿಗಳಿಗೆ ಶಿಕ್ಷೆ ಏಕಿಲ್ಲ?

* ದಿನಕರ, ಮಂಗಳೂರು [ ಕೃಪೆ : ದಟ್ಸ್ ಕನ್ನಡ ವಾರ್ತೆ ]

ಸೂಪರ್ ಮೂನ್, ಜಪಾನಿನ ಭೂಕಂಪ, ಸುನಾಮಿ ಕೆಲವು ತಥಾಕಥಿತ ಜ್ಯೋತಿಷಿಗಳಿಗೆ ಸುಗ್ಗಿಯ ಸಂಭ್ರಮ ಒದಗಿಸಿದೆ. ಏನೋ ಅನಾಹುತ ಸಂಭವಿಸುವುದೆಂದು ಈ ತಥಾಕಥಿತ ಜೋತಿಷಿಗಳು ಜನರನ್ನು ಭೀತಿಗೆ ತಳ್ಳುತ್ತಿದ್ದಾರೆ. ಟಿವಿ ಮಾಧ್ಯಮಗಳೂ ಇಂತಹ ಕಪಟ ಜ್ಯೋತಿಷಿಗಳಿಗೆ ವೇದಿಕೆಯೊದಗಿಸುತ್ತ ಜನರ ಭೀತಿ ಹೆಚ್ಚಿಸುತ್ತಿವೆ. (ನೈಜ, ಪ್ರಾಮಾಣಿಕ ಜ್ಯೋತಿಷಿಗಳ ಬಗ್ಗೆ ನನ್ನ ತಕರಾರಿಲ್ಲ. ಅವರು ಹೀಗೆ ಮೇಲೆ ಬಿದ್ದು ಪ್ರಚಾರ ಪಡೆಯಲು ಹಂಬಲಿಸುವುದೂ ಇಲ್ಲ)

ದಢೂತಿ ಜ್ಯೋತಿಷಿಯೊಬ್ಬರಂತೂ ಟಿವಿಯಲ್ಲಿ ಕಾಣಿಸಿಕೊಂಡು ಜನರಲ್ಲಿ ಅನಗತ್ಯ ಭೀತಿ ಹರಡುತ್ತಿದ್ದಾರೆ. ಅವರ ಜಾಣ್ಮೆ ಎಷ್ಟಿದೆಯೆಂದರೆ ಅವರು ಮಾತನಾಡುವುದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ. ಭೂಕಂಪ, ಪ್ರವಾಹವೇ ಆಗುವುದೆಂದು ತಾನು ಹೇಳಲಾರೆ, ಆದರೆ ಏನೋ ಒಂದು ಆಗಲಿದೆ ಎಂದು ಅವರು ಹೇಳುತ್ತಾರೆ. ಮಾ.19ರಂದೇ ಸಂಭವಿಸುವುದೆಂದು ಹೇಳಲಾರೆ, ಮುಂದೆ ಯಾವಾಗಲೂ ಸಂಭವಿಸಬಹುದು ಎನ್ನುತ್ತಾರೆ. 

ಮುಂದಕ್ಕೆ ಲಾರಿಯಡಿಗೆ ನಾಯಿ ಬಿದ್ದು ಸತ್ತರೂ 'ನೋಡಿ, ನಾನು ಹೀಗೆ ಹೇಳಿರಲಿಲ್ಲವೆ ' ಎಂದು ಅವರು ಹೇಳಿದರೂ ಹೇಳಿಯಾರೆ. ಹಿಂದೊಮ್ಮೆ ಇದೇ ರೀತಿ ಟಿವಿ ಜ್ಯೋತಿಷಿಯೊಬ್ಬರು ಬಂಟ್ವಾಳಕ್ಕೆ ಬಂದಿದ್ದಾಗ ಮುಂದಿನ ತಿಂಗಳು ಇಂತಿಷ್ಟೇ ತಾರೀಕಿನಂದು ಪ್ರಳಯ ಸದೃಶ ಮಳೆ ಬಂದು ಬಂಟ್ವಾಳವು ಭೀಕರ ಪ್ರವಾಹಕ್ಕೆ ತುತ್ತಾಗಲಿದೆ ಎಂದು ಹೇಳಿಹೋಗಿದ್ದರು. ಆದರೆ ಅವರು ಹೇಳಿದ ದಿನದಂದು ಬಂಟ್ವಾಳದಲ್ಲಿ ಸುಡು ಬಿಸಿಲಿತ್ತು. 

ಇದೀಗ ಜನತೆಯಲ್ಲಿ ಭಾರೀ ಭಯಭೀತಿ ಬಿತ್ತುವಲ್ಲಿ ಈ ಕಪಟ ಜ್ಯೋತಿಷಿಗಳು ಸಫಲರಾಗಿದ್ದಾರೆ. ಒಂದುವೇಳೆ ನಾಡಿದ್ದು ಏನೂ ಸಂಭವಿಸಲಿಲ್ಲವೆಂದಾದರೆ ಅವರು ಈ ರೀತಿ ಅನವಶ್ಯ ಭೀತಿ ಬಿತ್ತಿದ್ದಕ್ಕೆ ಸೂಕ್ತ ಶಿಕ್ಷೆ ಪಡೆಯಬೇಡವೆ? ಅವರೇನೋ ಮರುದಿನದಿಂದ ಬೇರೆಯೆ ತೆರನಾದ ನೆಪ ಹೇಳಲು ಆರಂಭಿಸಿಯಾರು. ಆದರೆ ಜನಗಳು ಅವರಿಗೆ ಪಾಠ ಕಲಿಸಲು ಈಗಲೆ ಸಿದಟಛಿರಾಗಿರುವುದೊಳಿತು. ಇಲ್ಲದಿದ್ದರೆ ಮುಂದೊಂದು ದಿನ ಹೊಸದಾದ ವಿಷಯ ಎತ್ತಿ ಅವರು ಜನರಲ್ಲಿ ಭೀತಿ ಸೃಷ್ಟಿಸತೊಡಗುತ್ತಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಪಡುವಣಕ್ಕೆ ಹೊರಟ ವಿಮಾನ ಏಕೆ ಬೇಗನೆ ತಲುಪುವುದಿಲ್ಲ ?

ಭೂಮಿ ವೇಗವಾಗಿ ಸುತ್ತುತ್ತಿದೆ ಎಂಬುದನ್ನು ಒಪ್ಪದವರು ಮುಂದಿಡುವ ಒಂದು ಪ್ರಶ್ನೆ ಹೀಗಿದೆ. "ಭೂಮಿ ಅಷ್ಟು ವೇಗವಾಗಿ ತಿರುಗುತ್ತ ಇದ್ದರೆ ಒಂದು ವಿಮಾನವು ಚೀನಾದಿಂದ ಸೌದಿಗೆ ಹೋಗಬೇಕಾದಲ್ಲಿ ಸ್ವಲ್ಪ ಮೇಲೆ ಹೋಗಿ ನಿಂತುಕೊಂಡರೆ ಸಾಕಲ್ಲ, ಭೂಮಿ ತಿರುಗುವುದರಿಂದ ಸೌದಿ ಅರೇಬಿಯಾ ತಾನಾಗಿಯೇ ವಿಮಾನದ ಕೆಳಗೆ ಬರುತ್ತದೆ. ಅಥವಾ ಮೂಡಣ ದಿಕ್ಕಿಗೆ ಹೊರಟ ವಿಮಾನವು ತಡವಾಗಿ ತಲುಪಬೇಕು ಮತ್ತು ಪಡುವಣ ದಿಕ್ಕಿಗೆ ಹೊರಟ ವಿಮಾನವು ಬೇಗನೆ ತಲುಪಬೇಕು" ಎಂಬ ವಾದವನ್ನು ಮುಂದಿಡುತ್ತಾರೆ. ಆದರೆ ಹಾಗೆ ಆಗಲು ಸಾಧ್ಯವಿಲ್ಲ, ಏಕೆಂದರೆ ಭೂಮಿ ಅಂದರೆ ಬರೀ ನೆಲವಷ್ಟೇ ಅಲ್ಲ, ಅದರ ಸುತ್ತಲಿನ ವಾತಾವರನವೂ ಸೇರಿ ಅದರ ಜೊತೆಗೇ ತಿರುಗುತ್ತಾ ಇದೆ. ಹಾಗಾಗಿ ವಿಮಾನವು ಮೇಲೆ ಹೋಗಿ ನಿಂತರೂ ಸಹ ಅದು ಭೂಮಿಯ ಜೊತೆಗೇ ಸಾಗುತ್ತದೆಯಾದ್ದರಿಂದ ಕೆಳಗಿನ ನೆಲ ಮಾತ್ರ ಜರುಗಲು ಸಾಧ್ಯ ಇಲ್ಲ. ಇದನ್ನು ನಾವೇ ಪರಿಶೀಲಿಸಬಹುದು. ಹೇಗೆಂದರೆ.. ವೇಗವಾಗಿ ಹೋಗುತ್ತಿರುವ ರೈಲಿನ ಎಲ್ಲಾ ಕಿಟಕಿಗಳನ್ನೂ ಮುಚ್ಚಿ ಅದರ ಮಾಡಿನ ಹತ್ತಿರದಿಂದ ಒಂದು ಚಿಕ್ಕ ವಸ್ತುವನ್ನು (ಉದಾ : ಗೋಲಿ) ಬಿಟ್ಟರೆ ಅದು ನಾವು ಬಿಟ್ಟಬಿಂದುವಿನ ನೇರಕ್ಕೇ ಬಿಳುತ್ತದೆಯೆ ಹೊರತಾಗಿ ರೈಲು ಓಡುತ್ತಿರುವುದರಿಂದ ಸ್ವಲ್ಪ ಹಿಂದೆ ಬೀಳುವುದಿಲ್ಲ. ಹಾಗೆಯೇ ಗಾಳಿಯಾಡದಂತೆ ಮುಚ್ಚಿದ ರೈಲು ಬೋಗಿಯ ಒಳಗೆ ಒಂದು ತುದಿಯಿಂದ ಇನ್ನೊಂದು ತುದಿಗೆ ಚೆಂಡನ್ನು ಒಂದೇ ಜೋರಿನಲ್ಲಿ ಎಸೆದರೆ ಅದು ಎರಡೂ ದಿಕ್ಕಿಗೂ (ಮುಂದಿನಿ...