ವಿಷಯಕ್ಕೆ ಹೋಗಿ

ನಾಚಿಕೆ ಆಗಲ್ವ ಯಡಿಯೂರಪ್ಪ ನಿಮಗೆ ?


"ಇಲ್ಲ" ಅಂತೀರಾ ಅಂತ ಗೊತ್ತು. ಆದ್ರೂ ಕೇಳದೇ ವಿಧಿ ಇಲ್ಲ ನೋಡಿ. ಈ ರಾಜಕಾರಣ ಅಂದರೇನೇ ಮೂರೂ ಬಿಟ್ಟವರ ಸ್ವರ್ಗ ಅನ್ನೋದು ಎಲ್ಲರಿಗೂ ತಿಳಿದಿರುವ ವಿಷಯವೇ. ಆದರೂ ನಿಮ್ಮನ್ನು ಮೆಚ್ಚಲೇ ಬೇಕು. ಯಾಕೆ ಗೊತ್ತಾ ? ನಾಚಿಕೆ, ಮಾನ, ಮರ್ಯಾದೆಗಳು ಇಲ್ಲದಿದ್ದರೂ ಇವೆಯೆಂಬಂತಾದರೂ ನಟಿಸುವ ರಾಜಕಾರಣಿಗಳ ಮಧ್ಯೆ "ಅವ್ಯಾವೂ ನನಗಿಲ್ಲ ಕಣ್ರೀ? ಏನ್ರೀ ಈವಾಗ?" ಅಂತ ರಾಜಾರೋಷವಾಗಿ ಕುರ್ಚಿ ಹಿಡಿದು ಕುಳಿತಿದ್ದೀರಲ್ಲ... ಅದಕ್ಕೆ.

ಆರೋಪಗಳು ರಾಜಕಾರಣಿಗಳ ಮೇಲೊಂದೇ ಅಲ್ಲ. ಹಳ್ಳಿಯ ಮುಗ್ದ ಜನರ ಮೆಲೂ ಆಗಾಗ ಬರುತ್ತಲೇ ಇರುತ್ತವೆ. ಆಗ ಅವರು ಆಣೆ-ಪ್ರಮಾಣ ಮಾಡುವುದು ಸಾಧಾರಣ ವಿಷಯ. ಏಕೆಂದರೆ ಅವರಿಗೆ ಕೋರ್ಟು-ಕಚೇರಿ ಸುತ್ತುವುದು ಸಾಧ್ಯವಿಲ್ಲ. ದೇವರ ಮೇಲೆ ಅಪಾರ ನಂಬಿಕೆ. ಅದೇನಿದ್ದರೂ ದೇವರು ನೋಡಿಕೊಳ್ಳಲಿ ಎಂದು ಆಣೆ ಮಾಡುತ್ತಾರೆ. ಹಾಗಂತೆ ಅದನ್ನು ಕಂಡವರ ದುಡ್ಡಲ್ಲಿ ಜಾಹೀರಾತು ನೀಡಿ ಎಲ್ಲರಿಗೂ ತಿಳಿಸುವುದಿಲ್ಲ. ತಮ್ಮ ಆಪ್ತೇಷ್ಟರಲ್ಲಿ ಹೇಳಿಕೊಂಡು ಮಾಡುತ್ತಾರೆ. ಅದು ಅವರ ಪರಿಮಿತಿ. ಆದರೆ ರಾಜ್ಯದ ಮುಖ್ಯಮಂತ್ರಿಯಾಗಿ ನಿಮಗೇನಾಗಿದೇರಿ ದಾಡಿ ? ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದರೆ, ವೃಥಾ ಆರೋಪ ಮಾಡುತ್ತಿದ್ದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಕೆ ಯಾಕೆ ? ಅವರು ಬಹಿರಂಗ ಮಾಡುತ್ತಿರುವ ದಾಖಲೆಗಳು ನಕಲಿ ಆಗಿದ್ದರೆ ಮಾನನಷ್ಟ ಮೊಖದ್ದಮೆ ಹೂಡಬಹುದಲ್ಲ? ಜಾಹೀರಾತಿಗೆ ಸರ್ಕಾರದ ಬೊಕ್ಕಸದಿಂದ ಕೋಟಿ ಕಳೆಯುವ ಬದಲು ಒಬ್ಬ ಮುಖ್ಯಮಂತ್ರಿಯಾಗಿ ಕಾನೂನು ಕ್ರಮ ಕೈಗೊಳ್ಳಲು ಕಷ್ಟವೇನು ? ನ್ಯಾಯಾಲಯಕ್ಕೆ ಹೋದರೆ ಈಗಿನದಕ್ಕಿಂತಾ ಮೂರು ಪಟ್ಟು ಮಾನ ಹರಾಜು ಆಗುತ್ತದೆ ಎಂಬ ಭಯವೇ ? ಥೂ ನಿಮ್ಮ ಮುಖಕ್ಕೆ.

ಒಂದಾದ ಮೇಲೊಂದರಂತೆ ಕೆಸರನ್ನೇ ಮೈಮೇಲೆಳೆದುಕೊಳ್ಳುತ್ತಿರುವ ನಿಮ್ಮಂತಾ ವೃದ್ದರಿಗೆ ಸ್ವಲ್ಪವಾದರೂ ಸಾಮಾಜಿಕ ಕಳಕಳಿ, ಜವಾಬ್ದಾರಿ ಇಲ್ಲವೇ ? ಸುಳ್ಳು ಹೇಳುವುದನ್ನು, ಲೂಟಿ ಮಾಡುವುದನ್ನು ೬೦ ವರ್ಷ ಆಳಿದ ಕಾಂಗ್ರೆಸ್ಸಿಗರು ಸಹ ನಿಮ್ಮಿಂದಲೇ ಕಲಿಯಬೇಕಾಗಿದೆಯಲ್ಲ ? ಇಷ್ಟಾದರೂ ಬುದ್ದಿ ಬಂದಿಲ್ಲವೆಂದರೆ ಅದೆಂಥಹ ಹೀನ ಜನ್ಮಕುಂಡಲಿ ನಿಮ್ಮದು ? ಅದನ್ನಾದರೂ ನಿಮ್ಮನ್ನು ಸಮರ್ಥಿಸುತ್ತಿರುವ ಲಿಂಗಾಯಿತ ನಕಲಿ ಸ್ವಾಮೀಜಿಗಳಾಗಲೀ, RSS ಬೆಂಬಲಿತ ಪೇಜಾವರ ಸ್ವಾಮಿಗಳಾಗಲೀ ಹೇಳಿದರೆ ಒಳಿತು. ರಾಜಕಿಯದಲ್ಲಿ ಜಾತಿ ರಾಜಕಾರಣ ಇದೆಯೆಂಬುದು ಎಲ್ಲರಿಗೂ ಗೊತ್ತು. ಜಾತಿಯನ್ನು ತಮ್ಮ ಗೆಲುವಿಗಾಗಿ ಎಲ್ಲರೂ ಉಪಯೋಗಿಸಿಕೊಳ್ಳುವವರೇ. ಆದರೆ ಅದನ್ನು ತನ್ನ ತೆವಲಿಗಾಗಿ, ತನ್ನ ತಪ್ಪನ್ನು ಮುಚ್ಚಿ ಹಾಕಲು, ಪಕ್ಷದ ವರಿಷ್ಠರನ್ನು ಬ್ಲಾಕ್‌ಮೇಲ್ ಮಾಡಲು ಉಪಯೋಗಿಸಿದ ಏಕೈಕ ರಾಜಕಾರಣಿ ಅಂದರೆ ನೀವೇ. ಹೀಗಾಗಿ ಇತರ ಸಮುದಾಯಗಳ ಮನಸ್ಸಿನಲ್ಲಿ ಲಿಂಗಾಯಿತ ಸಮುದಾಯದ ಮೇಲೆ ಅಪನಂಬಿಕೆ ಮೂಡುವಂತಾಗಿದೆ. ಈ ಲಿಂಗಾಯಿತರು ಜಾತಿಗೋಸ್ಕರ ಯಾವ ಕಡು ಭ್ರಷ್ಟನನ್ನಾದರೂ ಸಮರ್ಥಿಸಿಕೊಳ್ಳುತ್ತಾರೆ ಎಂಬಂತಾಗಿದೆ.

ಇಷ್ಟಾದ ಮೇಲೂ ಯಾಕೆ ಈ ದುರಾಸೆ ? ಮಾಡಿಕೊಂಡಿರುವ ಆಸ್ತಿ ಸಾಲದಾ ? ಇನ್ನೆಷ್ಟು ವರ್ಷ ಬದುಕಬಲ್ಲಿರಿ ? ಈಗಾಗಲೇ ಎಪ್ಪತ್ತರ ಹೊಸ್ತಿಲಲ್ಲಿ ಇರುವ ನೀವು ನೂರು ವರ್ಷ ಬದುಕಿದರೂ ಉಳಿದಿರುವುದು ಮೂವತ್ತು ಮಾತ್ರ. ಒಬ್ಬ ಮನುಷ್ಯ ೩೦ ವರ್ಷ ಬದುಕಲು ಎಷ್ಟು ದುಡ್ಡು ಬೇಕು ? ಈಗಾಗಲೇ ಲೂಟಿ ಮಾಡಿರುವುದು ಸಾಕಾಗಲ್ವಾ ? ಮಕ್ಕಳನ್ನು ಬೆಳೆಸಿದ್ದು, ಅವರನ್ನು ರಾಜಕೀಯವಾಗಿ ಸುಸ್ತಿರಗೊಳಿಸಿದ್ದು ಸಾಕಾಗಲ್ವಾ ? ಹಾಗಂತ ರಾಜಕಾರಣ ಬಿಡಿ ಅಂತ ಯಾರೂ ಹೇಳಲ್ಲ... ಇನ್ನಾದರೂ ಲೋಭ ಮತ್ಸರ ಬಿಟ್ಟು ಉತ್ತಮ ರಾಜಕಾರಣ ಮಾಡಿ. ರಾಜ್ಯಕ್ಕೆ ಏನಾದರೂ ಒಳ್ಳೇದು ಮಾಡಿ... ಇಲ್ಲವೆಂದರೆ ಜನ ಬೀದಿ ಬೀದೀಲಿ ಅಟ್ಟಾಡಿಸಿಕೊಂಡು ಹೊಡೆದಾರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...