ಭಾರತಕ್ಕೆ ಉತ್ತಮ ಭವಿಷ್ಯವಿಲ್ಲ ಅನ್ನೋದು ಪದೇ ಪದೇ ಸಾಬೀತಾಗುತ್ತಾ ಬಂದಿದೆ. ಎಲ್ಲೋ ಒಮ್ಮೊಮ್ಮೆ ಮಿಂಚಿನಂತೆ ಉದಯಿಸುವ ಆಶಾಕಿರಣಗಳು ಸ್ವಲ್ಪ ಸಮಯದಲ್ಲೇ ಭ್ರಷ್ಟ ಮೋಡದ ಸುಳಿಗೆ ಸಿಲುಕಿ ಜನರ ಎದುರಿನಿಂದ ಕಾಣೆಯಾಗುತ್ತಿರುವುದನ್ನು ಕಾಣುತ್ತಲೇ ಬಂದಿದ್ದೇವೆ. ಅಣ್ಣಾ ಹಜಾರೆ, ಸಂತೋಷ್ ಹೆಗಡೆ ಮುಂತಾದ ನಕ್ಷತ್ರಗಳು ಆಗಾಗ ಉದಯಿಸಿದರೂ ಸಹ ಅವರ ವರ್ಚಸ್ಸು ಮತ್ತು ಪ್ರಾಮಾಣಿಕತೆಯನ್ನು ಈ ಭಂಡ ರಾಜಕಾರಣಿಗಳು ಹೊಸಕಿ ಹಾಕುತ್ತಿದ್ದಾರೆ. ರಾಜಕಾರಣಿಗಳು ಮಾತ್ರವಲ್ಲ, ಅಧಿಕಾರಿಗಳೂ ಭ್ರಷ್ಟರಾಗಿದ್ದಾರೆ. ಬರೇ ರಾಜಕಾರನಿಗಳನ್ನ ದೂರಿ ಪ್ರಯೋಜನವಿಲ್ಲ ಅನ್ನುವವರಿದ್ದಾರೆ. ಅದು ನಿಜ ಕೂಡಾ. ಆದರೆ ಆ ಅಧಿಕಾರಿಗಳನ್ನು ಕೊಬ್ಬಲು ಬಿಟ್ಟಿದ್ದು ಮಾತ್ರ ಇದೇ ರಾಜಕಾರಣಿಗಳೇನೆ. ರಾಜಕಾರಣಿಗಳು ಸರಿಯಾಗಿದ್ದರೆ ಅಧಿಕಾರಿಗಳನ್ನು ನಿಯಂತ್ರಿಸುವುದು ಕಷ್ಟದ ಕೆಲಸವೇನಲ್ಲ. ಮುಖ್ಯವಾಗಿ ಅಧಿಕಾರಿಗಳು ರಾಜಕಾರಣಿಗಳಷ್ಟು ಭ್ರಷ್ಟರಲ್ಲ. ಅವರಿಗೆ ಕೆಲಸದ ಭಯವಿರುತ್ತದೆ. ಕೆಲಸ ಕಳೆದುಕೊಂಡರೆ ಬದುಕೋದು ಕಷ್ಟ ಎಂಬ ಅರಿವಿರುತ್ತದೆ. ಆದರೆ ರಾಜಕಾರಣಿಗಳಿಗೆ ಯಾವ ಭಯವೂ ಇಲ್ಲ. ಒಮ್ಮೆ ಸೋತರೂ ಮತ್ತೊಮ್ಮೆ ಗೆದ್ದು ಬರಬಹುದು ಎಂಬ ನಂಬಿಕೆ ಅವರಿಗಿದೆ. ಯಡಿಯೂರಪ್ಪನಂತವರ ಕೃಪಾಕಟಾಕ್ಷವಿದ್ದರೆ ಸೋತರೂ ಸೋಮಣ್ಣನಂತೋರು ಮಂತ್ರಿ ಆಗ್ತಾರೆ. ಭಂಡ ರಾಜಕಾರಣಿಗಳಿಗೆ ಇನ್ನೇನು ಬೇಕು ? ಹೀಗಾಗಿ ಇಂದು ಹಗರಣಗಳ ಮೇಲೆ ಹಗರನಗಳು ನಡೆಯುತ್ತಿವೆ. ಒಂದಾದ ನಂತರ ಮತ್ತೊಂದರಂತೆ ಸಾವಿರಾರು ಕೋಟ
ಮನಸು ಹೃದಯಗಳ ಸವಿಮಾತು............