ವಿಷಯಕ್ಕೆ ಹೋಗಿ

ಶಿಕ್ಷಣದ ಬಗೆಗಿನ ನುಡಿಮುತ್ತುಗಳು


* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು.

* ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ.

* ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ.

* ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್.

* ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ.

* ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ.

* ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ.

* ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ.

* ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ.

* ಶಿಕ್ಷಣವೇ ಜೀವನದ ಬೆಳಕು - ಗೊರೂರು

* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.

* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ.

* ವಿದ್ಯೆ ಗುರುಗಳ ಗುರು - ಭ್ರತೃ ಹರಿ.

* ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ - ನುಡಿಮುತ್ತುಗಳು.

* ಶಿಕ್ಷಣವೆಂದರೆ, ಮನಸ್ಸು, ದೇಹ, ಬುದ್ಧಿಗಳೊಂದಿಗೆ ದೊರೆಯುವ ಸಂಸ್ಕಾರ - ಹರ್ಡೀಕರ‍್ ಮಂಜಪ್ಪ.

* ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಬಯಲಿಗೆ ಬರುತ್ತದೆ - ವಿವೇಕಾನಂದ.

* ವಿದ್ಯಾಭ್ಯಾಸದಿಂದ ಪ್ರಭುತ್ವ ಬೆಳೆಯದು - ಜಾನ್ ಡ್ಯೂಯಿ.

* ಶಿಕ್ಷಣಕ್ಕಿಂತಲೂ ಮನುಷ್ಯರಿಗೆ ಶೀಲ ಚರಿತ್ರೆಗಳು ಹೆಚ್ಚು ಅವಶ್ಯಕ - ಸ್ಪೆನ್ಸರ್.

* ಮನುಷ್ಯನು ಕಲಿಯಲು ಬಯಸುವುದಾದರೆ ಅವನ ಪ್ರತಿಯೊಂದು ತಪ್ಪು ಅವನಿಗೆ ಶಿಕ್ಷಣ ಕೊಡುತ್ತದೆ - ಚಾರ್ಲ್ಸ್ ಡೆಕ್ಕನ್.

* ಅಭಿರುಚಿಯನ್ನು ಹುಟ್ಟಿಸುವುದು ಶಿಕ್ಷಣದ ಉದ್ದೇಶವೇ ಹೊರತು, ಒಬ್ಬರು ಕಲಿತದ್ದನ್ನು ಮತ್ತೊಬ್ಬರಿಗೆ ಹೇಳುವುದಲ್ಲ -  ಗಯಟೆ.

* ಶಾಲಾ-ಕಾಲೇಜುಗಳಲ್ಲಿ ಕಲಿತದ್ದು ನಿಜವಾದ ಶಿಕ್ಷಣವಲ್ಲ.  ಅದು ಶಿಕ್ಷಣಕ್ಕೆ ಸಾಧನವಷ್ಟೆ - ಎಮರ್ಸನ್.

* ಮನುಷ್ಯರಲ್ಲಿ ಪ್ರೇಮವನ್ನು ಮೂಡಿಸುವ ಸರಳ ಜೀವನನ್ನು ಕಲಿಸುವ ವಿದ್ಯೆಯೇ ಶ್ರೇಷ್ಠವಾದದ್ದು - ಟಾಲ್ಸ್ಟಾಯ್.

* ಮನುಷ್ಯನಿಗೆ ಯಾವುದು ಗೊತ್ತಿಲ್ಲವೋ ಅದನ್ನು ತಿಳಿಸುವುದು ವಿದ್ಯಾಭ್ಯಾಸದ ಗುರಿಯಲ್ಲ.  ಹೇಗೆ ವರ್ತಿಸಬೇಕೆಂದು ತಿಳಿಸುವುದೇ ವಿದ್ಯಾಭ್ಯಾಸದ ಗುರಿ - ಜಾನ್ ರಸ್ಕಿನ್.

* ಪ್ರತಿಯೊಬ್ಬ ವ್ಯಕ್ತಿಯು ಎರಡು ರೀತಿಯ ಶಿಕ್ಷಣ ಹೊಂದುತ್ತಾನೆ.  ಒಂದು ಇತರರು ಅವನಿಗೆ ನೀಡುವುದು.  ಇನ್ನೊಂದು ಸ್ವಂತ ಅವನು ಕಲಿಯುವುದು - ನುಡಿಮುತ್ತು.

* ವಿದ್ಯೆಯೊಂದಿಗೆ ಆದರ್ಶ ಗುಣಗಳು ನಿನ್ನಲ್ಲಿ ಬರದಿದರೆ ನೀನು ಓದಿದ್ದು ವ್ಯರ್ಥ - ಪ್ರೇಮಚಂದ.

* ಮನೆಯೇ ಮೊದಲ ಪಾಠಶಾಲೆ - ಗಾದೆ.

* ವಿದ್ಯಾಭ್ಯಾಸ ಯಾವ ದಿಕ್ಕಿನಲ್ಲಿ ಮನುಷ್ಯನನ್ನು ನಡೆಸುವುದೋ ಅದೇ ಅವನ ಭವಿಷ್ಯವನ್ನು ನಿರ್ಧರಿಸುವುದು - ಪ್ಲೇಟೋ.

* ಶಿಕ್ಷಣವು ಅನುಭವಗಳ ಪೂರ್ವ ವ್ಯವಸ್ಥೆ ವಿಧಾನ - ಜಾನ್ ಡ್ಯೂಯಿ.

* ಶಿಕ್ಷಣದ ಮುಖ್ಯ ಕೆಲಸವೆಂದರೆ ನಮ್ಮ ಬದುಕನ್ನು ಅರ್ಥಪೂರ್ಣವಾಗುವಂತೆ ಸಹಕರಿಸುವುದು - ಸ್ಪೆನ್ಸರ್.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.