ಗೆಳೆಯರೇ..... ಗೆಳೆಯರೇ....
ಭಾರತದ ಪ್ರೀತಿವೆತ್ತ ಸ್ನೇಹ ಬಂಧು ಮಿತ್ರರೆ |
ಬನ್ನಿ ಹೆಗಲ ಕೊಡುವ ನಮ್ಮ ಅಣ್ಣನೊಡನೆ ಇಂದು
ಬನ್ನಿ ದೇಶಕ್ಕಾಗಿ ಮೀಸಲಿಡುವ ರಕ್ತ ಬಿಂದು ||
ದೇಶಕ್ಕಿಂದು ಅಂಟಿರುವ ಭ್ರಷ್ಟಾಚಾರ ಕೊಂದು
ಬಲವಾದ ಹೆಜ್ಜೆ ಇಟ್ಟು ನಾವು ನಡೆವ ಮುಂದು ||
ರಕ್ತ ಸುರಿಸಿ ಪ್ರಾಣ ತೆತ್ತು ಪಡೆದರು ಸ್ವಾತಂತ್ರ್ಯ
ಅವರ ಋಣದ ಸಮಾದಿ ಮೇಲೆ ಆಯ್ತು ಗಣತಂತ್ರ ||
ಆಳುತಿರುವ ದೊರೆಗಳಿಗೆ ದುಡ್ಡಿನದೇ ಮಂತ್ರ
ಅಧೋಗತಿಗೆ ಇಳಿದ ದೇಶ ಆಯ್ತು ಅತಂತ್ರ ||
ಅಣ್ಣನಿಗೆ ತಮ್ಮನಾಗಿ ನಮ್ಮ ಸಂತೋಷ್ ಹೆಗಡೆ
ಅರವಿಂದ ಕೇಜ್ರಿವಾಲ ಅವರ ಜೊತೆಗೆ ನಡಿಗೆ ||
ಘರ್ಜಿಸಿದ ದೇಶಪ್ರೇಮಿ ಕಿರಣ್ ಬೇಡಿ ಇಹರು
ಸ್ವಾಮಿ ಅಗ್ನಿವೇಶರೊಡನೆ ಶಾಂತಿಭೂಷಣ್ ತ್ರಯರು ||
ಕಡು ಬಡವರು ಅರೆ ಹೊಟ್ಟೆಗೆ ಪ್ರಾಣ ನೀಗುತಿಹರು
ಕಡು ಭ್ರಷ್ಟರು ನಮ್ಮನಾಳಿ ಕೇಕೆ ಹಾಕುತಿಹರು ||
ನಾವು ಬೀಳಲಾರೆವಿಂದು ರಾತ್ರಿ ಕಂಡ ಬಾವಿಗೆ
ಅಣ್ಣ ತಂಡ ತಂದಿವುದು ಜನಲೋಕ್ಪಾಲ್ ದೀವಿಗೆ ||
---------------------------------------------------
ಇಂದು [27.08.2011] ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನೆರೆದಿದ್ದ ಸುಮಾರು ನಾಲ್ಕೈದು ಸಾವಿರ ಅಣ್ಣಾ ಬೆಂಬಲಿಗರ ಎದುರು ಈ ಹಾಡನ್ನು ಸ್ವತಃ ನಾನೇ ಹಾಡಿದೆ. ಆ ಸಂದರ್ಭದಲ್ಲಿ ನಿವೃತ್ತ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗಡೆ ಅವರೂ ಅಲ್ಲಿ ಉಪಸ್ಥಿತರಿದ್ದರು. ತುಂಬಾ ಖುಷಿಯಾಯ್ತು.
ಭಾರತದ ಪ್ರೀತಿವೆತ್ತ ಸ್ನೇಹ ಬಂಧು ಮಿತ್ರರೆ |
ಬನ್ನಿ ಹೆಗಲ ಕೊಡುವ ನಮ್ಮ ಅಣ್ಣನೊಡನೆ ಇಂದು
ಬನ್ನಿ ದೇಶಕ್ಕಾಗಿ ಮೀಸಲಿಡುವ ರಕ್ತ ಬಿಂದು ||
ದೇಶಕ್ಕಿಂದು ಅಂಟಿರುವ ಭ್ರಷ್ಟಾಚಾರ ಕೊಂದು
ಬಲವಾದ ಹೆಜ್ಜೆ ಇಟ್ಟು ನಾವು ನಡೆವ ಮುಂದು ||
ರಕ್ತ ಸುರಿಸಿ ಪ್ರಾಣ ತೆತ್ತು ಪಡೆದರು ಸ್ವಾತಂತ್ರ್ಯ
ಅವರ ಋಣದ ಸಮಾದಿ ಮೇಲೆ ಆಯ್ತು ಗಣತಂತ್ರ ||
ಆಳುತಿರುವ ದೊರೆಗಳಿಗೆ ದುಡ್ಡಿನದೇ ಮಂತ್ರ
ಅಧೋಗತಿಗೆ ಇಳಿದ ದೇಶ ಆಯ್ತು ಅತಂತ್ರ ||
ಅಣ್ಣನಿಗೆ ತಮ್ಮನಾಗಿ ನಮ್ಮ ಸಂತೋಷ್ ಹೆಗಡೆ
ಅರವಿಂದ ಕೇಜ್ರಿವಾಲ ಅವರ ಜೊತೆಗೆ ನಡಿಗೆ ||
ಘರ್ಜಿಸಿದ ದೇಶಪ್ರೇಮಿ ಕಿರಣ್ ಬೇಡಿ ಇಹರು
ಸ್ವಾಮಿ ಅಗ್ನಿವೇಶರೊಡನೆ ಶಾಂತಿಭೂಷಣ್ ತ್ರಯರು ||
ಕಡು ಬಡವರು ಅರೆ ಹೊಟ್ಟೆಗೆ ಪ್ರಾಣ ನೀಗುತಿಹರು
ಕಡು ಭ್ರಷ್ಟರು ನಮ್ಮನಾಳಿ ಕೇಕೆ ಹಾಕುತಿಹರು ||
ನಾವು ಬೀಳಲಾರೆವಿಂದು ರಾತ್ರಿ ಕಂಡ ಬಾವಿಗೆ
ಅಣ್ಣ ತಂಡ ತಂದಿವುದು ಜನಲೋಕ್ಪಾಲ್ ದೀವಿಗೆ ||
---------------------------------------------------
ಇಂದು [27.08.2011] ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನೆರೆದಿದ್ದ ಸುಮಾರು ನಾಲ್ಕೈದು ಸಾವಿರ ಅಣ್ಣಾ ಬೆಂಬಲಿಗರ ಎದುರು ಈ ಹಾಡನ್ನು ಸ್ವತಃ ನಾನೇ ಹಾಡಿದೆ. ಆ ಸಂದರ್ಭದಲ್ಲಿ ನಿವೃತ್ತ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗಡೆ ಅವರೂ ಅಲ್ಲಿ ಉಪಸ್ಥಿತರಿದ್ದರು. ತುಂಬಾ ಖುಷಿಯಾಯ್ತು.
ಕಾಮೆಂಟ್ಗಳು
nimma kavana tumba chennagide. spoorti tumbuva hage ide.
prasa badhdhavaagiyu ide..
haadannu nanu kelalilwalla anta bejar agta ide...