ವಿಷಯಕ್ಕೆ ಹೋಗಿ

ನಿಖಿತಾಗೆ ನಿಷೇಧ ... ಇದ್ಯಾವ ನ್ಯಾಯ ?

"ನಟ ದರ್ಶನ್ ಕುಟುಂಬದಲ್ಲಿ ಬಿರುಕು ಬರಲು ನಟಿ ನಿಖಿತಾ ಕಾರಣ" ಎಂಬ ಕಾರಣ ನೀಡಿರುವ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ಆಕೆಯನ್ನು ಮೂರು ವರ್ಷ ಕನ್ನಡ ಚಿತ್ರರಂಗದಿಂದ ನಿಷೇಧಿಸಿ "ಮುಲ್ಲಾ ಕಾನೂನು" ಜಾರಿಗೊಳಿಸಿದೆ. ಇಂತಹ ತೀರ್ಪು ನೀಡಲು ಇವರು ಬಳಸಿದ ಮಾನದಂಡಗಳು ಯಾವುವು ಅನ್ನುವುದು ತಿಳಿದು ಬಂದಿಲ್ಲ. ಆದರೆ ನಮ್ಮಲ್ಲೇಳುವ ಪ್ರಶ್ನೆಗಳಿಗೆ ಇವರಲ್ಲಿ ಉತ್ತರವಿಲ್ಲ.

* ದರ್ಶನ್ ಜೊತೆ ನಿಖಿತಾಳೇ ಗೆಳೆತನ ಬೆಳೆಸಿದಳು ಎಂದು ಇವರಿಗೆ ಹೇಗೆ ತಿಳಿಯಿತು ? ದರ್ಶನ್ ಸ್ವತಃ ತಾನೇ ಅವಳನ್ನು ಬುಟ್ಟಿಗೆ ಹಾಕಿಕೊಂಡಿರುವ ಸಾಧ್ಯತೆ ಇದೆಯಲ್ಲ? ಹಾಗಿದ್ದರೆ ದರ್ಶನ್‌ಗೆ ಶಿಕ್ಷೆ ಏನು ? ದರ್ಶನ್ ತಾನೇ ನಿಖಿತಾಳನ್ನು ಬುಟ್ಟಿಗೆ ಹಾಕಿಕೊಂಡಿದ್ದರೆ ಮುಂದೆ ಅವಳಿಲ್ಲದಿದ್ದರೆ ಇನ್ನೊಬ್ಬಳನ್ನು ಇಟ್ಟುಕೊಳ್ಳುವುದಿಲ್ಲ ಅಂತ ಏನು ಗ್ಯಾರಂಟೀ ?

* ದರ್ಶನ್ - ವಿಜಯಲಕ್ಷ್ಮಿ ಯರದ್ದು ಕುಟುಂಬ ಕಲಹ. ಅದರ ಬಗ್ಗೆ ತೀರ್ಪು ನೀಡಲು ಇವರಿಗೆ ಏನು ಅಧಿಕಾರವಿದೆ ? ಇವರಿಗೆ ವಿಜಯಲಕ್ಷ್ಮಿ ಅವರೇನಾದರೂ ದೂರು ನೀಡಿದ್ದರೆ ?

* ದರ್ಶನ್ - ನಿಖಿತಾ ಇಬ್ಬರೂ ಸೇರಿ ತಪ್ಪು ಮಾಡಿರುವಾಗ ಒಬ್ಬಳಿಗೆ ಶಿಕ್ಷೆ ನೀಡಿದರೆ ಹೇಗೆ ? ಇಬ್ಬರನ್ನೂ ನಿಷೇಧಿಸಬೇಕಾಗಿತ್ತಲ್ಲವೇ ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಬಳಿದಂತೆ ಆಗಲಿಲ್ಲವೇ ?

* ಅವರಿಬ್ಬರ ನಡುವೆ ಸಂಬಂಧ ಇದ್ದುದೇ ಹೌದಾದರೆ ಆಕೆಯನ್ನು ನಿಷೇಧಿಸಿದರೆ ಏನುಪಯೋಗ ? ಅವಳು ನಟಿಸದಿದ್ದರೂ ಸಂಬಂಧ ಮುಂದುವರಿಯದೇ ?

* ಇಷ್ಟಕ್ಕೂ ನಿಖಿತಾ ಬಗ್ಗೆ ದೂರಿರುವುದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು. ಹಾಗಂತೆ ನಿರ್ಮಾಪಕರ ಸಂಘಕ್ಕೆ ಅವರು ಯಾವ ಪುರಾವೆಯನ್ನೂ ನೀಡಿಲ್ಲ. ಅಕಸ್ಮಾತ್ ಅದು ಸುಳ್ಳಾಗಿದ್ದರೆ ? ವಿಜಯಲಕ್ಷ್ಮಿಯವರು ಅಂದುಕೊಂಡಂತೆ ದರ್ಶನ್ ಗೆಳೆತನ ಬೆಳೆಸಿದ್ದು ನಿಖಿತಾ ಆಗಿರದೇ ಬೇರೆ ಹೆಣ್ಣಾಗಿದ್ದರೆ ?

* ನಿಖಿತಾ ನಟಿಯಾಗಿರುವ ಕಾರಣಕ್ಕೆ ನಿಷೇಧ ಹೇರಲು ಸಾಧ್ಯವಾಯ್ತು. ಒಂದು ವೇಳೆ ಆಕೆ ನಟಿಯಾಗಿರದೇ ಹೋಗಿದ್ದರೆ ಇವರು ಯಾವ ನಿಷೇಧ ಹೇರುತ್ತಿದ್ದರು ?

ಅದೇನೇ ಆದರೂ ಆಕೆ ಈಗ ನ್ಯಾಯಾಲಯದ ಮೊರೆ ಹೋದರೆ ಇವರಿಗೆ ಮುಖಭಂಗ ಕಟ್ಟಿಟ್ಟ ಬುತ್ತಿ. ಕೇವಲ ಅನುಮಾನದ ಆಧಾರದ ಮೇಲೆ ಯಾರನ್ನೂ ಚಿತ್ರರಂಗದಿಂದ ನಿಷೇಧಿಸುವ ಅಧಿಕಾರ ಯಾರಿಗೂ ಇಲ್ಲ. ಇದು ಇವರ ಮುಲ್ಲಾ ಕಾನೂನು ಅಷ್ಟೇ ಅಲ್ಲ... ಮೂರ್ಖ ಕಾನೂನು ಕೂಡಾ.

ಕಾಮೆಂಟ್‌ಗಳು

shruthi1995mg ಹೇಳಿದ್ದಾರೆ…
sum sumne nisheda madi amele tappaytu anta ivru vapas tagondralla, ivrige swalpanu comon sense ilva?

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...