ಜ್ಞಾನಪೀಠ ಬಂದಿದ್ದು ಕಂಬಾರರಿಗಾದರೆ ಅದರಿಂದ ತಲೆ ಬಿಸ ಮಾಡಿಕೊಂಡಿರುವ ವ್ಯಕ್ತಿಗಳೇ ಬೇರೆಯವರು. ಕನ್ನಡಕ್ಕೆ ಎಂಟನೇ ಜ್ಞಾನಪೀಠ ಪ್ರಶಸ್ತಿ ಬಂತು ಎಂದು ನಾವು ಖುಷಿ ಪಡುವ ಹೊತ್ತಿಗೇ ಅದರಲ್ಲೊಂದು ಕಿಡಿ ಮತ್ತು ಹೊಗೆ ಶುರುವಾಗಿ ಕನ್ನಡ ಸಾಹಿತ್ಯ ಲೋಕವನ್ನು ಮಸುಕಾಗಿಸುತ್ತಿರುವುದು ವಿಪರ್ಯಾಸ. ಪೀಠ ಬಂದ ಖುಷಿಯಲ್ಲಿ ಕಂಬಾರರಿದ್ದರೆ ಭೈರಪ್ಪರಿಗೆ ಎಲ್ಲಿ ಬಂದು ಬಿಡುತ್ತೋ ಅನ್ನುವ ಆತಂಕದಲ್ಲಿ ಅನೇಕರಿರುವಂತೆ ತೋರುತ್ತಿದೆ. ಕಂಬಾರರಿಗೆ ಪ್ರಶಸ್ತಿ ಕೊಟ್ಟಿದ್ದಕ್ಕೇ ಪಾಟೀಲ ಪುಟ್ಟಪ್ಪ ಗರಮ್ ಆಗಿ ಮೊದಲಿಗೆ ತಲ್ಲಣ ಉಂಟು ಮಾಡಿದರು. "ಹೋಗಿ ಹೋಗಿ ಇವರಿಗೆ ಕೊಡೋದಾ ?" ಎಂಬ ಪಾಪುರವರ ಪಾಪದ ಮಾತಲ್ಲಿ ತನಗೆ ಬರಲಿಲ್ಲ ಅನ್ನುವ ನೋವಿತ್ತೋ, ಅಥವಾ ಕಂಬಾರರಿಗೆ ಬಂದೋಯ್ತಲ್ಲ ಅನ್ನುವ ಹೊಟ್ಟೆಕಿಚ್ಚು ಇತ್ತೋ ಗೊತ್ತಾಗಲಿಲ್ಲ. ಆದರೆ ಅಗ್ನಿ ಶ್ರೀಧರ್ ಮತ್ತು ನಿಡುಮಾಮಿಡಿ ಸ್ವಾಮೀಜಿಗಳಂತವರು ಜ್ಞಾನಪೀಠ ಹೊತ್ತು ತಂದ ಕಂಬಾರರ ತಲೆಯನ್ನು ನೇವರಿಸುವುದು ಬಿಟ್ಟು ಬೈರಪ್ಪರ ಜುಟ್ಟು ಹಿಡಿದು ಅಲ್ಲಾಡಿಸ ಹೊರಟಿದ್ದು ಅತಿರೇಕವೆನ್ನಿಸದಿರದು. ಹೇಳಿ ಕೇಳಿ ಅದು ಖಾಸಗಿ ಸಂಸ್ಥೆ ನೀಡುವ ಒಂದು ಪ್ರಶಸ್ತಿ. ಅದನ್ನು ಅವರಿಗೆ ಕೊಡಬಾರದು, ಇವರು ಸತ್ತ ನಂತರ ಬೇಕಾದರೆ ಕೊಡಲಿ ಎಂದೆಲ್ಲಾ ಹೇಳಿದ್ದು ಸರಿಯಲ್ಲ. ಪ್ರಶಸ್ತಿಯ ಬಗ್ಗೆ ಈಗಾಗಲೇ ಲಾಬಿಯ ಕಳಂಕ ತಟ್ಟಿರುವುದೇನೋ ಹೌದು. ಹಾಗಂತ ಅವರೇನೂ ಕಣ್ಣು ಮುಚ್ಚಿಕೊಂಡು ಪ್ರಶಸ್ತಿ ನೀಡುತ್ತಾರೆಯೇ ? ನೂರಕ್ಕೆ
ಮನಸು ಹೃದಯಗಳ ಸವಿಮಾತು............