ವಿಷಯಕ್ಕೆ ಹೋಗಿ

ಪೀಠ ಇಷ್ಟೊಂದು ಘಾಟಾ ?


ಜ್ಞಾನಪೀಠ ಬಂದಿದ್ದು ಕಂಬಾರರಿಗಾದರೆ ಅದರಿಂದ ತಲೆ ಬಿಸ ಮಾಡಿಕೊಂಡಿರುವ ವ್ಯಕ್ತಿಗಳೇ ಬೇರೆಯವರು. ಕನ್ನಡಕ್ಕೆ ಎಂಟನೇ ಜ್ಞಾನಪೀಠ ಪ್ರಶಸ್ತಿ ಬಂತು ಎಂದು ನಾವು ಖುಷಿ ಪಡುವ ಹೊತ್ತಿಗೇ ಅದರಲ್ಲೊಂದು ಕಿಡಿ ಮತ್ತು ಹೊಗೆ ಶುರುವಾಗಿ ಕನ್ನಡ ಸಾಹಿತ್ಯ ಲೋಕವನ್ನು ಮಸುಕಾಗಿಸುತ್ತಿರುವುದು ವಿಪರ್ಯಾಸ. ಪೀಠ ಬಂದ ಖುಷಿಯಲ್ಲಿ ಕಂಬಾರರಿದ್ದರೆ ಭೈರಪ್ಪರಿಗೆ ಎಲ್ಲಿ ಬಂದು ಬಿಡುತ್ತೋ ಅನ್ನುವ ಆತಂಕದಲ್ಲಿ ಅನೇಕರಿರುವಂತೆ ತೋರುತ್ತಿದೆ.

ಕಂಬಾರರಿಗೆ ಪ್ರಶಸ್ತಿ ಕೊಟ್ಟಿದ್ದಕ್ಕೇ ಪಾಟೀಲ ಪುಟ್ಟಪ್ಪ ಗರಮ್ ಆಗಿ ಮೊದಲಿಗೆ ತಲ್ಲಣ ಉಂಟು ಮಾಡಿದರು. "ಹೋಗಿ ಹೋಗಿ ಇವರಿಗೆ ಕೊಡೋದಾ ?" ಎಂಬ ಪಾಪುರವರ ಪಾಪದ ಮಾತಲ್ಲಿ ತನಗೆ ಬರಲಿಲ್ಲ ಅನ್ನುವ ನೋವಿತ್ತೋ, ಅಥವಾ ಕಂಬಾರರಿಗೆ ಬಂದೋಯ್ತಲ್ಲ ಅನ್ನುವ ಹೊಟ್ಟೆಕಿಚ್ಚು ಇತ್ತೋ ಗೊತ್ತಾಗಲಿಲ್ಲ. ಆದರೆ ಅಗ್ನಿ ಶ್ರೀಧರ‍್ ಮತ್ತು ನಿಡುಮಾಮಿಡಿ ಸ್ವಾಮೀಜಿಗಳಂತವರು ಜ್ಞಾನಪೀಠ ಹೊತ್ತು ತಂದ ಕಂಬಾರರ ತಲೆಯನ್ನು ನೇವರಿಸುವುದು ಬಿಟ್ಟು ಬೈರಪ್ಪರ ಜುಟ್ಟು ಹಿಡಿದು ಅಲ್ಲಾಡಿಸ ಹೊರಟಿದ್ದು ಅತಿರೇಕವೆನ್ನಿಸದಿರದು. ಹೇಳಿ ಕೇಳಿ ಅದು ಖಾಸಗಿ ಸಂಸ್ಥೆ ನೀಡುವ ಒಂದು ಪ್ರಶಸ್ತಿ. ಅದನ್ನು ಅವರಿಗೆ ಕೊಡಬಾರದು, ಇವರು ಸತ್ತ ನಂತರ ಬೇಕಾದರೆ ಕೊಡಲಿ ಎಂದೆಲ್ಲಾ ಹೇಳಿದ್ದು ಸರಿಯಲ್ಲ. ಪ್ರಶಸ್ತಿಯ ಬಗ್ಗೆ ಈಗಾಗಲೇ ಲಾಬಿಯ ಕಳಂಕ ತಟ್ಟಿರುವುದೇನೋ ಹೌದು. ಹಾಗಂತ ಅವರೇನೂ ಕಣ್ಣು ಮುಚ್ಚಿಕೊಂಡು ಪ್ರಶಸ್ತಿ ನೀಡುತ್ತಾರೆಯೇ ? ನೂರಕ್ಕೆ ನೂರಲ್ಲದಿದ್ದರೂ 80 - 90 % ರಷ್ಟಾದರೂ ಅರ್ಹರಿಗೇ ನೀಡಬೇಕಲ್ಲವೇ ? ಅದನ್ನೇ ಸಂಸ್ಥೆಯವರು ಮಾಡುತ್ತಿದ್ದಾರೆ. ಸರ್ಕಾರದಿಂದಲೂ ಸಾಧ್ಯವಿಲ್ಲದ ಒಂದು ಅತ್ಯುನ್ನತ ಪ್ರಶಸ್ತಿಯನ್ನು ಖಾಸಗಿ ಸಂಸ್ಥೆಯವರು ನೀಡುತ್ತಿರುವುದೇ ಒಂದು ಘನಕಾರ್ಯ. ಅದರಲ್ಲೂ ಕನ್ನಡಕ್ಕೆ ಹೆಚ್ಚು ಪ್ರಶಸ್ತಿಗಳು ಬಂದಿರುವುದು ಕನ್ನಡಿಗರಾದ ನಾವೆಲ್ಲಾ ಹೆಮ್ಮೆ ಪಡುವ ವಿಷಯ. ಹಾಗಿರುವಾಗ ಅದರ ಬಗ್ಗೆ ಕೊಂಕು ನುಡಿಯುವುದು ಸರಿಯಲ್ಲ. ಅಕಸ್ಮಾತ್ ಬೈರಪ್ಪರಿಗೂ ಒಂದು ಜ್ಞಾನಪೀಠ ಬಂದರೆ ಬಂದೇ ಬಿಡಲಿ, ಏನಂತೆ? ಅದು ಅವರಿಗಷ್ಟೇ ಅಲ್ಲದೇ ಕನ್ನಡಕ್ಕೂ ಗರಿಮೆಯೇ ಅಲ್ಲವೇ? ಅವರಿಗೆ ಏಕೆ ಕೊಟ್ಟೆವು ಎಂಬುದನ್ನು ಪ್ರಶಸ್ತಿ ಪ್ರದಾನ ಸಮಿತಿಯವರು ವಿವರಿಸುತ್ತಾರೆ.

ಕನ್ನಡಕ್ಕೆ ಎಂಟು ಜ್ಞಾನಪೀಠಗಳನ್ನು ತಂದುಕೊಟ್ಟ ಸಾಹಿತಿಗಳಿಗೆ ವಂದಿಸಲೇ ಬೇಕು. ಏಕೆಂದರೆ ಇದರಿಂದ ನಮ್ಮ ಭಾಷೆಯ ಹಿರಿಮೆ ಹೆಚ್ಚುತ್ತಿದೆ. ಉಳಿದ ಭಾಷಿಕರೂ ಕನ್ನಡದತ್ತ ತಿರುಗಿ ನೋಡುತ್ತಾರೆ. ಎಂಟು ಜ್ಞಾನಪೀಠ ಪಡೆಯುವಂತಾ ಸಮೃದ್ದಿ ಕನ್ನಡದಲ್ಲಿ ಏನಿದೆಯಪ್ಪಾ ? ಎಂದು ಅವಲೋಕಿಸುತ್ತಾರೆ. ಇದು ಕನ್ನಡಕ್ಕೆ ಬಹುದೊಡ್ಡ ಕೊಡುಗೆಯೇ ಸರಿ. ಇಷ್ಟಕ್ಕೂ ಇದನ್ನು ನೀಡುತ್ತಿರುವವರು ಕನ್ನಡೇತರ ಸಂಸ್ಥೆ. ಆದುದರಿಂದ ಅವರು ಯಾರಿಗೆ ನೀಡಿದರೂ ಸಂತೋಷದಿಂದಲೇ ಸ್ವೀಕರಿಸೋಣ. ಅರ್ಹರನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಅವರಿಗೇ ಬಿಡೋಣ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...