ವಿಷಯಕ್ಕೆ ಹೋಗಿ

ಪೀಠ ಇಷ್ಟೊಂದು ಘಾಟಾ ?


ಜ್ಞಾನಪೀಠ ಬಂದಿದ್ದು ಕಂಬಾರರಿಗಾದರೆ ಅದರಿಂದ ತಲೆ ಬಿಸ ಮಾಡಿಕೊಂಡಿರುವ ವ್ಯಕ್ತಿಗಳೇ ಬೇರೆಯವರು. ಕನ್ನಡಕ್ಕೆ ಎಂಟನೇ ಜ್ಞಾನಪೀಠ ಪ್ರಶಸ್ತಿ ಬಂತು ಎಂದು ನಾವು ಖುಷಿ ಪಡುವ ಹೊತ್ತಿಗೇ ಅದರಲ್ಲೊಂದು ಕಿಡಿ ಮತ್ತು ಹೊಗೆ ಶುರುವಾಗಿ ಕನ್ನಡ ಸಾಹಿತ್ಯ ಲೋಕವನ್ನು ಮಸುಕಾಗಿಸುತ್ತಿರುವುದು ವಿಪರ್ಯಾಸ. ಪೀಠ ಬಂದ ಖುಷಿಯಲ್ಲಿ ಕಂಬಾರರಿದ್ದರೆ ಭೈರಪ್ಪರಿಗೆ ಎಲ್ಲಿ ಬಂದು ಬಿಡುತ್ತೋ ಅನ್ನುವ ಆತಂಕದಲ್ಲಿ ಅನೇಕರಿರುವಂತೆ ತೋರುತ್ತಿದೆ.

ಕಂಬಾರರಿಗೆ ಪ್ರಶಸ್ತಿ ಕೊಟ್ಟಿದ್ದಕ್ಕೇ ಪಾಟೀಲ ಪುಟ್ಟಪ್ಪ ಗರಮ್ ಆಗಿ ಮೊದಲಿಗೆ ತಲ್ಲಣ ಉಂಟು ಮಾಡಿದರು. "ಹೋಗಿ ಹೋಗಿ ಇವರಿಗೆ ಕೊಡೋದಾ ?" ಎಂಬ ಪಾಪುರವರ ಪಾಪದ ಮಾತಲ್ಲಿ ತನಗೆ ಬರಲಿಲ್ಲ ಅನ್ನುವ ನೋವಿತ್ತೋ, ಅಥವಾ ಕಂಬಾರರಿಗೆ ಬಂದೋಯ್ತಲ್ಲ ಅನ್ನುವ ಹೊಟ್ಟೆಕಿಚ್ಚು ಇತ್ತೋ ಗೊತ್ತಾಗಲಿಲ್ಲ. ಆದರೆ ಅಗ್ನಿ ಶ್ರೀಧರ‍್ ಮತ್ತು ನಿಡುಮಾಮಿಡಿ ಸ್ವಾಮೀಜಿಗಳಂತವರು ಜ್ಞಾನಪೀಠ ಹೊತ್ತು ತಂದ ಕಂಬಾರರ ತಲೆಯನ್ನು ನೇವರಿಸುವುದು ಬಿಟ್ಟು ಬೈರಪ್ಪರ ಜುಟ್ಟು ಹಿಡಿದು ಅಲ್ಲಾಡಿಸ ಹೊರಟಿದ್ದು ಅತಿರೇಕವೆನ್ನಿಸದಿರದು. ಹೇಳಿ ಕೇಳಿ ಅದು ಖಾಸಗಿ ಸಂಸ್ಥೆ ನೀಡುವ ಒಂದು ಪ್ರಶಸ್ತಿ. ಅದನ್ನು ಅವರಿಗೆ ಕೊಡಬಾರದು, ಇವರು ಸತ್ತ ನಂತರ ಬೇಕಾದರೆ ಕೊಡಲಿ ಎಂದೆಲ್ಲಾ ಹೇಳಿದ್ದು ಸರಿಯಲ್ಲ. ಪ್ರಶಸ್ತಿಯ ಬಗ್ಗೆ ಈಗಾಗಲೇ ಲಾಬಿಯ ಕಳಂಕ ತಟ್ಟಿರುವುದೇನೋ ಹೌದು. ಹಾಗಂತ ಅವರೇನೂ ಕಣ್ಣು ಮುಚ್ಚಿಕೊಂಡು ಪ್ರಶಸ್ತಿ ನೀಡುತ್ತಾರೆಯೇ ? ನೂರಕ್ಕೆ ನೂರಲ್ಲದಿದ್ದರೂ 80 - 90 % ರಷ್ಟಾದರೂ ಅರ್ಹರಿಗೇ ನೀಡಬೇಕಲ್ಲವೇ ? ಅದನ್ನೇ ಸಂಸ್ಥೆಯವರು ಮಾಡುತ್ತಿದ್ದಾರೆ. ಸರ್ಕಾರದಿಂದಲೂ ಸಾಧ್ಯವಿಲ್ಲದ ಒಂದು ಅತ್ಯುನ್ನತ ಪ್ರಶಸ್ತಿಯನ್ನು ಖಾಸಗಿ ಸಂಸ್ಥೆಯವರು ನೀಡುತ್ತಿರುವುದೇ ಒಂದು ಘನಕಾರ್ಯ. ಅದರಲ್ಲೂ ಕನ್ನಡಕ್ಕೆ ಹೆಚ್ಚು ಪ್ರಶಸ್ತಿಗಳು ಬಂದಿರುವುದು ಕನ್ನಡಿಗರಾದ ನಾವೆಲ್ಲಾ ಹೆಮ್ಮೆ ಪಡುವ ವಿಷಯ. ಹಾಗಿರುವಾಗ ಅದರ ಬಗ್ಗೆ ಕೊಂಕು ನುಡಿಯುವುದು ಸರಿಯಲ್ಲ. ಅಕಸ್ಮಾತ್ ಬೈರಪ್ಪರಿಗೂ ಒಂದು ಜ್ಞಾನಪೀಠ ಬಂದರೆ ಬಂದೇ ಬಿಡಲಿ, ಏನಂತೆ? ಅದು ಅವರಿಗಷ್ಟೇ ಅಲ್ಲದೇ ಕನ್ನಡಕ್ಕೂ ಗರಿಮೆಯೇ ಅಲ್ಲವೇ? ಅವರಿಗೆ ಏಕೆ ಕೊಟ್ಟೆವು ಎಂಬುದನ್ನು ಪ್ರಶಸ್ತಿ ಪ್ರದಾನ ಸಮಿತಿಯವರು ವಿವರಿಸುತ್ತಾರೆ.

ಕನ್ನಡಕ್ಕೆ ಎಂಟು ಜ್ಞಾನಪೀಠಗಳನ್ನು ತಂದುಕೊಟ್ಟ ಸಾಹಿತಿಗಳಿಗೆ ವಂದಿಸಲೇ ಬೇಕು. ಏಕೆಂದರೆ ಇದರಿಂದ ನಮ್ಮ ಭಾಷೆಯ ಹಿರಿಮೆ ಹೆಚ್ಚುತ್ತಿದೆ. ಉಳಿದ ಭಾಷಿಕರೂ ಕನ್ನಡದತ್ತ ತಿರುಗಿ ನೋಡುತ್ತಾರೆ. ಎಂಟು ಜ್ಞಾನಪೀಠ ಪಡೆಯುವಂತಾ ಸಮೃದ್ದಿ ಕನ್ನಡದಲ್ಲಿ ಏನಿದೆಯಪ್ಪಾ ? ಎಂದು ಅವಲೋಕಿಸುತ್ತಾರೆ. ಇದು ಕನ್ನಡಕ್ಕೆ ಬಹುದೊಡ್ಡ ಕೊಡುಗೆಯೇ ಸರಿ. ಇಷ್ಟಕ್ಕೂ ಇದನ್ನು ನೀಡುತ್ತಿರುವವರು ಕನ್ನಡೇತರ ಸಂಸ್ಥೆ. ಆದುದರಿಂದ ಅವರು ಯಾರಿಗೆ ನೀಡಿದರೂ ಸಂತೋಷದಿಂದಲೇ ಸ್ವೀಕರಿಸೋಣ. ಅರ್ಹರನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಅವರಿಗೇ ಬಿಡೋಣ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...

ದೈವಜ್ಞರು ತಂದಿಟ್ಟ ಪಜೀತಿ!

ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ. ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು. ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ. ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...