ವಿಷಯಕ್ಕೆ ಹೋಗಿ

ಮಡಮಡೆಸ್ನಾನ ನಿಷೇಧಿಸಿದರೆ ತಪ್ಪೇನಿಲ್ಲ !



ಇತ್ತೀಚಿಗೆ ಬಹು ಚರ್ಚಿತವಾಗುತ್ತಿರುವ ವಿಷಯ ಕುಕ್ಕೆ ಸುಬ್ರಮಣ್ಯದ ಮಡೆಸ್ನಾನದ್ದು. ಯಾರೋ ಉಂಡ ಎಂಜಲೆಲೆ ಮೇಲೆ ಇನ್ಯಾರೋ ಬಿದ್ದು ಉರುಳಾಡುವುದೇ ಹೇಯ. ಇದರಲ್ಲಿ ಮೇಲ್ಜಾತಿ ಕೆಳಜಾತಿ ಬೇಧ ನೋಡುವ ಅಗತ್ಯ ಇಲ್ಲ. ಮಾಡುತ್ತಿರುವ ಕೃತ್ಯ ಮಾತ್ರ ಅಕ್ಷಮ್ಯ. ಇದನ್ನು ಕೆಲ ಭಟ್ಟಂಗಿಗಳು ಸಮರ್ಥಿಸುತ್ತಿರುವುದು ಖೇದಕರ.

ಈ ಎಂಜಲೆಲೆ ಸ್ನಾನವನ್ನು ಸಮರ್ಥಿಸಿಕೊಳ್ಳಲು ನೂರಾರು ವರ್ಷಗಳ ಆಚರಣೆ ಅನ್ನುವುದನ್ನು ಬಿಟ್ಟರೆ ಬೇರೆ ಯಾವುದೇ ಕಾರಣವಿಲ್ಲ. ಅದೊಂದೇ ಒಂದು ಮೂರ್ಖ ಆಚರಣೆಗೆ ನೆಪವಾಗುವುದಾದರೆ ನಮ್ಮ ದೇಶ ಪರಕೀಯರ ಭಾವನೆಯಲ್ಲಿ ಹೇಗಿದೆಯೋ ಹಾಗೇ ಉಳಿದು ಹೋಗುತ್ತದೆ. ಇದನ್ನು ಮಾಡುತ್ತಿರುವ ಮಲೆಕುಡಿಯರು "ಕಷ್ಟ ಹಾಗೂ ರೋಗ ನಿವಾರಣೆಯಾಗುತ್ತದೆ" ಎಂದು ತಪ್ಪಾಗಿ ನಂಬಿಕೊಂಡಿದ್ದಾರೆ. ಹೀಗೆ ನಂಬಿಸಿದವರು ಮೇಲ್ಜಾತಿಯವರೇ ಇರಬೇಕು ಎಂದು ಯಾರ ಮೇಲೋ ಗೂಬೆ ಕೂರಿಸುವ ಅಗತ್ಯ ಈಗ ಇಲ್ಲ. ಆಗಬೇಕಾಗಿರುವುದು ಒಂದು ಅನಿಷ್ಟ ಆಚರಣೆಯ ನಿವಾರಣೆ. ಈ ಆಚರಣೆಗೆ ಯಾವುದೇ ವೈಜ್ಞಾನಿಕ ಕಾರಣಗಳೂ ಇಲ್ಲ. ಮೇಲಾಗಿ ಇದನ್ನು ಆಚರಿಸುತ್ತಿರುವ ಮಲೆಕುಡಿಯರು ಅನಕ್ಞರಸ್ತರು. ಇವರನ್ನು ಇದರಿಂದ ದೂರ ಮಾಡಬೇಕಾದುದು ಸರ್ಕಾರದ ಧರ್ಮ.

ಆದರೆ ಜಾತೀವಾದವನ್ನು ಪೋಷಿಸಿಕೊಂಡೇ ಬರುವ ನಮ್ಮ ಹಾಳು ರಾಜಕಾರಣಿಗಳು "ಮಡೆಸ್ನಾನಕ್ಕೆ ಯಾರದೂ ಒತ್ತಾಯವಿಲ್ಲ. ಹಾಗಾಗಿ ಅದನ್ನು ನಿಷೇಧಿಸುವ ಅಗತ್ಯ ಇಲ್ಲ" ಎಂದು ಬುರುಡೆ ಬಿಡುತ್ತಿದ್ದಾರೆ. ಒತ್ತಾಯವಿಲ್ಲದ ಆಚರಣೆಯನ್ನು ನಿಷೇಧಿಸುವ ಅಗತ್ಯ ಇಲ್ಲ ಅಂತಾದರೆ ಲಾಟರಿ, ಬಹುಪತ್ನಿತ್ವ, ವೇಶ್ಯಾವಾಟಿಕೆ, ಜೂಜು, ಬಾಲ್ಯ ವಿವಾಹ, ಸತಿಸಹಗಮನ, ದೇವದಾಸಿ ಪದ್ದತಿ ಮುಂತಾದವುಗಳನ್ನು ಯಾಕೆ ನಿಷೇಧಿಸಿದರು ? ಶಿವಮೊಗ್ಗದ ಸೊರಬ ತಾಲೂಕಿನ ಚಂದ್ರಗುತ್ತಿ ಎಂಬಲ್ಲಿ ಹಿಂದೆ ಬೆತ್ತಲೆ ಸೇವೆ ಇತ್ತು. ಅದು ಕೂಡಾ ಒತ್ತಾಯ ಪೂರ್ವಕವಾಗಿ ನಡೆಯುತ್ತಿರಲಿಲ್ಲ. ಹೆಂಗಸರು, ಗಂಡಸರು ಮಕ್ಕಳೆಲ್ಲ ಹರಕೆ ಹೊತ್ತುಕೊಂಡು ನದಿಯಲ್ಲಿ ಸ್ನಾನ ಮಾಡಿ ದೇವಸ್ಥಾನಕ್ಕೆ ಬೆತ್ತಲೆಯಾಗಿ ತೆರಳಿ ಪೂಜೆ ಸಲ್ಲಿಸುತ್ತಿದ್ದರು. ಇದನ್ನು ಸರ್ಕಾರ ನಿಷೇಧಿಸಿತು. ಆಗ ಸರ್ಕಾರ ಕೊಟ್ಟ ಕಾರಣ - ಇದು ಅಸಹ್ಯ ಆಚರಣೆ. ಆದರೆ ಈಗ ಸದಾನಂದ ಗೌಡರು ಕೊಡುತ್ತಿರುವ ಕಾರಣ "ಯಾರದೂ ಒತ್ತಾಯವಿಲ್ಲ!"
[ ಚಂದ್ರಗುತ್ತಿಯಲ್ಲಿ ನಡೆಯುತ್ತಿದ್ದ ಬೆತ್ತಲೆ ಸೇವೆಯ ಸಂಗ್ರಹ ಚಿತ್ರ ]

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...