ವಿಷಯಕ್ಕೆ ಹೋಗಿ

ಮಡಮಡೆಸ್ನಾನ ನಿಷೇಧಿಸಿದರೆ ತಪ್ಪೇನಿಲ್ಲ !



ಇತ್ತೀಚಿಗೆ ಬಹು ಚರ್ಚಿತವಾಗುತ್ತಿರುವ ವಿಷಯ ಕುಕ್ಕೆ ಸುಬ್ರಮಣ್ಯದ ಮಡೆಸ್ನಾನದ್ದು. ಯಾರೋ ಉಂಡ ಎಂಜಲೆಲೆ ಮೇಲೆ ಇನ್ಯಾರೋ ಬಿದ್ದು ಉರುಳಾಡುವುದೇ ಹೇಯ. ಇದರಲ್ಲಿ ಮೇಲ್ಜಾತಿ ಕೆಳಜಾತಿ ಬೇಧ ನೋಡುವ ಅಗತ್ಯ ಇಲ್ಲ. ಮಾಡುತ್ತಿರುವ ಕೃತ್ಯ ಮಾತ್ರ ಅಕ್ಷಮ್ಯ. ಇದನ್ನು ಕೆಲ ಭಟ್ಟಂಗಿಗಳು ಸಮರ್ಥಿಸುತ್ತಿರುವುದು ಖೇದಕರ.

ಈ ಎಂಜಲೆಲೆ ಸ್ನಾನವನ್ನು ಸಮರ್ಥಿಸಿಕೊಳ್ಳಲು ನೂರಾರು ವರ್ಷಗಳ ಆಚರಣೆ ಅನ್ನುವುದನ್ನು ಬಿಟ್ಟರೆ ಬೇರೆ ಯಾವುದೇ ಕಾರಣವಿಲ್ಲ. ಅದೊಂದೇ ಒಂದು ಮೂರ್ಖ ಆಚರಣೆಗೆ ನೆಪವಾಗುವುದಾದರೆ ನಮ್ಮ ದೇಶ ಪರಕೀಯರ ಭಾವನೆಯಲ್ಲಿ ಹೇಗಿದೆಯೋ ಹಾಗೇ ಉಳಿದು ಹೋಗುತ್ತದೆ. ಇದನ್ನು ಮಾಡುತ್ತಿರುವ ಮಲೆಕುಡಿಯರು "ಕಷ್ಟ ಹಾಗೂ ರೋಗ ನಿವಾರಣೆಯಾಗುತ್ತದೆ" ಎಂದು ತಪ್ಪಾಗಿ ನಂಬಿಕೊಂಡಿದ್ದಾರೆ. ಹೀಗೆ ನಂಬಿಸಿದವರು ಮೇಲ್ಜಾತಿಯವರೇ ಇರಬೇಕು ಎಂದು ಯಾರ ಮೇಲೋ ಗೂಬೆ ಕೂರಿಸುವ ಅಗತ್ಯ ಈಗ ಇಲ್ಲ. ಆಗಬೇಕಾಗಿರುವುದು ಒಂದು ಅನಿಷ್ಟ ಆಚರಣೆಯ ನಿವಾರಣೆ. ಈ ಆಚರಣೆಗೆ ಯಾವುದೇ ವೈಜ್ಞಾನಿಕ ಕಾರಣಗಳೂ ಇಲ್ಲ. ಮೇಲಾಗಿ ಇದನ್ನು ಆಚರಿಸುತ್ತಿರುವ ಮಲೆಕುಡಿಯರು ಅನಕ್ಞರಸ್ತರು. ಇವರನ್ನು ಇದರಿಂದ ದೂರ ಮಾಡಬೇಕಾದುದು ಸರ್ಕಾರದ ಧರ್ಮ.

ಆದರೆ ಜಾತೀವಾದವನ್ನು ಪೋಷಿಸಿಕೊಂಡೇ ಬರುವ ನಮ್ಮ ಹಾಳು ರಾಜಕಾರಣಿಗಳು "ಮಡೆಸ್ನಾನಕ್ಕೆ ಯಾರದೂ ಒತ್ತಾಯವಿಲ್ಲ. ಹಾಗಾಗಿ ಅದನ್ನು ನಿಷೇಧಿಸುವ ಅಗತ್ಯ ಇಲ್ಲ" ಎಂದು ಬುರುಡೆ ಬಿಡುತ್ತಿದ್ದಾರೆ. ಒತ್ತಾಯವಿಲ್ಲದ ಆಚರಣೆಯನ್ನು ನಿಷೇಧಿಸುವ ಅಗತ್ಯ ಇಲ್ಲ ಅಂತಾದರೆ ಲಾಟರಿ, ಬಹುಪತ್ನಿತ್ವ, ವೇಶ್ಯಾವಾಟಿಕೆ, ಜೂಜು, ಬಾಲ್ಯ ವಿವಾಹ, ಸತಿಸಹಗಮನ, ದೇವದಾಸಿ ಪದ್ದತಿ ಮುಂತಾದವುಗಳನ್ನು ಯಾಕೆ ನಿಷೇಧಿಸಿದರು ? ಶಿವಮೊಗ್ಗದ ಸೊರಬ ತಾಲೂಕಿನ ಚಂದ್ರಗುತ್ತಿ ಎಂಬಲ್ಲಿ ಹಿಂದೆ ಬೆತ್ತಲೆ ಸೇವೆ ಇತ್ತು. ಅದು ಕೂಡಾ ಒತ್ತಾಯ ಪೂರ್ವಕವಾಗಿ ನಡೆಯುತ್ತಿರಲಿಲ್ಲ. ಹೆಂಗಸರು, ಗಂಡಸರು ಮಕ್ಕಳೆಲ್ಲ ಹರಕೆ ಹೊತ್ತುಕೊಂಡು ನದಿಯಲ್ಲಿ ಸ್ನಾನ ಮಾಡಿ ದೇವಸ್ಥಾನಕ್ಕೆ ಬೆತ್ತಲೆಯಾಗಿ ತೆರಳಿ ಪೂಜೆ ಸಲ್ಲಿಸುತ್ತಿದ್ದರು. ಇದನ್ನು ಸರ್ಕಾರ ನಿಷೇಧಿಸಿತು. ಆಗ ಸರ್ಕಾರ ಕೊಟ್ಟ ಕಾರಣ - ಇದು ಅಸಹ್ಯ ಆಚರಣೆ. ಆದರೆ ಈಗ ಸದಾನಂದ ಗೌಡರು ಕೊಡುತ್ತಿರುವ ಕಾರಣ "ಯಾರದೂ ಒತ್ತಾಯವಿಲ್ಲ!"
[ ಚಂದ್ರಗುತ್ತಿಯಲ್ಲಿ ನಡೆಯುತ್ತಿದ್ದ ಬೆತ್ತಲೆ ಸೇವೆಯ ಸಂಗ್ರಹ ಚಿತ್ರ ]

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...