ವಿಷಯಕ್ಕೆ ಹೋಗಿ

ತರ್ಲೆ ಬೈರಪ್ಪರ ಸಂಸ್ಕೃತ ರಾಗ

ತರ್ಲೆ ಬೈರಪ್ಪರಿಗೂ ಸಂಸ್ಕೃತಕ್ಕೂ ಅದೇನು ನಿಕಟ ಸಂಬಂಧವೋ ತಿಳಿದಿಲ್ಲ. ಆದರೆ ಆಗಾಗ ತಮ್ಮ ಸಂಸ್ಕೃತ ಪ್ರೀತಿಯನ್ನು ಕನ್ನಡಿಗರ ಮೇಲೆ ಹೇರುತ್ತಲೇ ಇದ್ದಾರೆ. ಈ ಹಿಂದೆ ಕರ್ನಾಟಕದಲ್ಲಿ ಸಂಸ್ಕೃತ ವಿ.ವಿ. ಆಗಬೇಕು ಎಂದು ಯಡ್ಡಿಗೆ ಫರ್ಮಾನು ನೀಡಿದ್ದರು. ಈಗ ಹೈಸ್ಕೂಲು ಪಠ್ಯದಲ್ಲಿ ಸಂಸ್ಕೃತ ಕಡ್ಡಾಯವಾಗಲಿ ಎಂದು  ಹೇಳಿದ್ದಾರೆ. ಅಷ್ಟಕ್ಕೇ ಸುಮ್ಮನಾಗದೇ "ಸಂಸ್ಕತ ಅಧ್ಯಯನ ಮಾಡಿದವರ ಕನ್ನಡ ಗಟ್ಟಿಯಾಗಿರುತ್ತದೆ, ಅವರ ಮಾತು ಸ್ಪಷ್ಟವಾಗಿರುತ್ತದೆ" ಎಂದೆಲ್ಲಾ ಹೇಳಿದ್ದಾರೆ. ಆದರೆ ಕನ್ನಡವನ್ನು ಇವರಿಗಿಂತಲೂ ಸ್ಪಷ್ಟವಾಗಿ ಮಾತನಾಡುತ್ತಿದ್ದ ರಾಜ್‌ಕುಮಾರ‍್ ಅವರು ಸಂಸ್ಕೃತ ಹಾಗಿರಲಿ, ಕನ್ನಡ ಶಾಲೆಗೂ ಸರಿಯಾಗಿ ಹೋದವರಲ್ಲ ಅನ್ನೋದು ಗೊತ್ತಿಲ್ಲವೋ ಏನೋ. ಹಾಗೆಯೇ ಕನ್ನಡದ ಅನೇಕ ಸಾಹಿತಿಗಳು ಹೆಚ್ಚೇನೂ ಓದದೇನೇ ಉತ್ತಮ ಸಾಹಿತ್ಯ ರಚಿಸಿದ್ದಾರೆ. ಇದೇ ಬೈರಪ್ಪರು ಸಹ ಕನ್ನಡದಲ್ಲೇ ಸಾಹಿತ್ಯ ರಚಿಸಿದ್ದೇ ಹೊರತೂ ಸಂಸ್ಕೃತದಲ್ಲಿ ಅಲ್ಲ. ಸಂಸ್ಕೃತ ಈಗಾಗಲೇ ಒಂದು ಐಚ್ಚಿಕ ವಿಷಯವಾಗಿ ಹೈಸ್ಕೂಲಿನಲ್ಲಿ ಇದೆ. ಅದನ್ನೂ ಕಡ್ಡಾಯ ಮಾಡಿ ಮತ್ತೊಂದಿಷ್ಟು ಕನ್ನಡಿಗ ಮಕ್ಕಳು ಅನುತ್ತೀರ್ಣರಾಗುವ ಹಾಗೆ ಮಾಡದಿರಲಿ.

ಕಾಮೆಂಟ್‌ಗಳು

ಪ್ರವರ ಕೊಟ್ಟೂರು ಹೇಳಿದ್ದಾರೆ…
ಸಂಸ್ಕೃತ ಅನ್ನೋದು ಹುಳು ಅಷ್ಟೇ ಹೊರತು, ಕನ್ನಡದ ಹುರುಳಲ್ಲ
ಗುಡುಗು ಮಿಂಚು ಹೇಳಿದ್ದಾರೆ…
ಆದರೂ ಕೆಲವರು ಸಂಸ್ಕೃತವೇ ಕನ್ನಡದ ಹುರುಳು ಅಂತ ನಂಬಿಸಲು ಪ್ರಯತ್ನಿಸುತ್ತಲೇ ಇದ್ದಾರೆ.
Agni ಹೇಳಿದ್ದಾರೆ…
ನಮ್ಮ ನಾಡು ನಮ್ಮ ಭಾಷೆ ನಮ್ಮಜನ ನಮ್ಮ ಸಂಸ್ಕೃತಿ ಇತ್ಯಾದಿಗಳಿಗೆ ಪ್ರಾಮುಖ್ಯತೆ ಇರಬೇಕು ಹಾಗೇ ಬೇರೆ ಬೇರೆ ಭಾಷೆಗಳನ್ನೂ ಕಲಿಯಲು ಇಚ್ಛೆಯಿರುವವರಿಗೆ ಸಹಕಾರ ನೀಡಬೇಕು ಇದಲ್ಲದೇ ನಮ್ಮ ಪ್ರಪಂಚದಲ್ಲೇ ಅತೀ ಪ್ರಾಚೀನ ಭಾಷೆ, ಎಲ್ಲಾ ಭಾಷೆಗಳ ತಾಯಿ ಇತ್ಯಾದಿಯೆಲ್ಲಾ ಹೇಳಿ ಜನರನ್ನು ಅಡ್ಡದಾರಿಗೆಳೆದು ನಂಬಿಸಲು ಪ್ರಯತ್ನಿಸಿ ಸರಳ ಮತ್ತು ಸುಲಭವಾದ ಭಾಷೆಗಳನ್ನು ಅವಸಾನದತ್ತ ತಳ್ಳಲು ಪ್ರಯತ್ನಿಸುತ್ತಿರುವ ಇಂತಹವರನ್ನು ಹಿಡ್ಕೊಂಡು ಸರಿಯಾಗಿ ಹೊಡೀಬೇಕು ಏನಾದ್ರೂ ತೆಗೆದುಕೊಂಡು...!
ಗುಡುಗು ಮಿಂಚು ಹೇಳಿದ್ದಾರೆ…
ನೀವು ಹೇಳಿದ್ದು ಸರಿ. ಇವರಿಗೆ ಸಂಸ್ಕೃತದ ಮೇಲೆ ಅಷ್ಟೊಂದು ವ್ಯಾಮೋಹವಿದ್ದರೆ ತಾವೇ ಸ್ವತಃ ಸಂಸ್ಕೃತ ಶಾಲೆ ತೆರೆಯಲಿ. ಅಥವಾ ಸಂಸ್ಕೃತದ ಪ್ರತ್ಯೇಕ ಶಾಲೆ ತೆರೆಯುವಂತೆ ಸರ್ಕಾರಕ್ಕೆ ಹೇಳಲಿ. ಅದು ಬಿಟ್ಟು ಕನ್ನಡದ ಮಕ್ಕಳ ಮೇಲೇ ಸಂಸ್ಕೃತವನ್ನೂ ಹೇರಲು ಹೇಳುವುದು ಸರಿಯಲ್ಲ.

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...