ವಿಷಯಕ್ಕೆ ಹೋಗಿ

ಕತ್ತಲಲ್ಲಿ ಕಾನೂನು... ವಕೀಲರ ಗೂಂಡಾಗಿರಿ !





ಇಂದು ವಕೀಲರು ಪತ್ರಕರ್ತರ ಮೇಲೆ ನಡೆಸಿದ ಅಮಾನವೀಯ ಹಲ್ಲೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು. ಆದರೆ ಆಶ್ಚರ್ಯ ಪಡುವಂತದ್ದು ಏನೂ ಇಲ್ಲ. ಏಕೆಂದರೆ ಇದು ಮೊದಲೇನಲ್ಲ, ಕೊನೆಯೂ ಅಗುವುದಿಲ್ಲ. ಏಕೆಂದರೆ ನಮ್ಮ ವ್ಯವಸ್ಥೆ ಸದ್ದಿಲ್ಲದೇ ಹದಗೆಟ್ಟಿದೆ. ಒಳಗೊಳಗೇ ಕೊಳೆತಿರುವ ಈ ಸಮಾಜದಲ್ಲಿ ಇಂತಹ ಘಟನೆಗಳು ಆಗಾಗ ಮರುಕಳಿಸುತ್ತಲೇ ಇರುತ್ತವೆ. ಇಂದು ವಕೀಲರು ಮಾಡಿದ್ದನ್ನು ನಾಳೆ ಪೊಲೀಸರು ಮಾಡಬಹುದು. ನಾಡಿದ್ದು ಇನ್ಯಾರೋ ಮಾಡಬಹದು. ಇದಕ್ಕೆಲ್ಲಾ ಕಾರಣಗಳು ಅನೇಕ... ಆದರೆ ಮೂಲ ಒಂದೇ... ವ್ಯವಸ್ಥೆ ಹದಗೆಟ್ಟಿದೆ.

ಇಲ್ಲಿ ಉತ್ತಮ ಸಮಜದ ನಿರ್ಮಾಣದ ಕನಸು ಕಾಣುವವರಿಗಿಂತಲೂ ಅಕ್ರಮ ಸಂಪಾದನೆಯ ಕನಸು ಕಾಣುತ್ತಿರುವವರೇ ಅಧಿಕ. ಹೀಗಾಗಿ ಸಮಾಜ ಘಾತುಕರ ನಡುವೆ ಉತ್ತಮ ಸಂಬಂಧ ಏರ್ಪಟ್ಟಿದೆ. ಹಣ ಹೆಚ್ಚು ಹೇಗೆ ಬರುತ್ತೋ ಆ ಕಡೆಗೆ ಜನರ ಮನನ್ಸು ಒಲಿಯುತ್ತಿದೆ. ಇದಕ್ಕೆ ನ್ಯಾಯವಾದಿಗಳೇನೂ ಹೊರತಾಗಿಲ್ಲ. ಭ್ರಷ್ಟರೊಂದಿಗೆ ಕೈ ಜೋಡಿಸುತ್ತಿರುವ ಅನೇಕ ನ್ಯಾಯವಾದಿಗಳಿಗೆ ಸಹಜವಾಗಿಯೇ ’ಭ್ರಷ್ಟರಿಗೆ ದುಸ್ವಪ್ನವಾಗಿರುವ’ ಸುದ್ದಿ ವಾಹಿನಿಗಳ ಬಗ್ಗೆ ಆಕ್ರೋಶವಿದೆ. ಇದರ ಜೊತೆ ಜಾತಿ ರಾಜಕೀಯ ವಕೀಲರನ್ನು ಬಿಟ್ಟಿಲ್ಲ. ಯಡಿಯೂರಪ್ಪನನ್ನು ಬೆತ್ತಲು ಮಾಡಿ ಮಾನ ಕಳೆದ ಸುದ್ದಿ ವಾಹಿನಿಗಳ ಮೇಲೆ ಜಾತಿಯ ಕಾರಣಕ್ಕೇ ಸಿಟ್ಟುಗೊಂಡಿರುವವರಿದ್ದಾರೆ. ಅದೇ ರೀತಿ ಜನಾರ್ದನ ರೆಡ್ಡಿಯ ವಿಷಯದಲ್ಲೂ ನಡೆದಿದೆ. ಆತನ ಬಿಟ್ಟಿ ದುಡ್ಡು ತಿಂದ ಕೆಲವು ನ್ಯಾಯವಾದಿಗಳು ಇಂದು ಆತನ ಬಗ್ಗೆ ಹೆಚ್ಚೇ ಅನ್ನುವಷ್ಟು ಸುದ್ದಿ ಮಾಡ ಹೊರಟಿದ್ದ ಸುದ್ದಿ ವಾಹಿನಿಗಳ ಮೇಲೆ ಪ್ರಹಾರ ನಡೆಸಿರುವ ಸಾಧ್ಯತೆ ಹೆಚ್ಚಿದೆ. ಅಂದರೆ ವಕೀಲರು ಏನು ಮಾಡಿದರೂ ಜನ ಸಹಿಸಬೇಕು. ದಿನವಿಡೀ ಲಕ್ಷಾಂತರ ಜನರಿಗೆ ತೊಂದರೆ ಕೊಟ್ಟು ರಸ್ತೆ ತಡೆ ನಡೆಸಿದರೂ ಅವರ ಮೇಲೆ ಕ್ರಮವಿಲ್ಲ.

ಯಾವುದೇ ಒಂದು ಗುಂಪುಗಾರಿಕೆ ಸಾಮಾಜಿಕವಾಗಿ ಒಳ್ಳೆಯದಲ್ಲ. ಜಾತಿ, ವೃತ್ತಿ ಗುಂಪುಗಾರಿಕೆಗಳು ಸದಾ ದೇಶಕ್ಕೆ ಮುಳುವಾಗಿಯೇ ಇವೆ. ನಾಯಕತ್ವ ವಹಿಸಿಕೊಂಡ ಅಲ್ಪಜ್ಞರು ಈ ಆಮಿಷಕ್ಕೆ ಒಳಗಾದರಂತೂ ಮುಗಿದೇ ಹೋಯ್ತು. ಇಡಿಯ ವ್ಯವಸ್ಥೆಯನ್ನೇ ಹಾಳು ಮಾಡುತ್ತಾರೆ. ಲಿಂಗಾಯತ ಸಮಾಜವನ್ನು ಬೆನ್ನಿಗಿಟ್ಟುಕೊಂಡವರಂತೆ ಯಡಿಯೂರಪ್ಪ ಆಡಿದ್ದಕ್ಕೂ, ಇಡಿಯ ವಕೀಲ ವೃಂದವೇ ತಮ್ಮ ಹಿಂದಿದೆ ಎಂದು ಅಟ್ಟಹಾಸ ಮೇರೆದ ಇಂದಿನ ಕೆಲವು ದುಷ್ಟ ವಕೀಲರಿಗೂ ಯಾವುದೇ ವ್ಯತ್ಯಾಸ ಇಲ್ಲ. ಇವರ ಉದ್ದೇಶ ಒಂದೇ, ತಮ್ಮನ್ನು ಯಾರು ಪ್ರಶ್ನಿಸಬಾರದು. ತಮ್ಮ ಬಲ ಇಷ್ಟಿದೆ ಎಂದು ತೋರಿಸಿಕೊಳ್ಳುವುದು.

ಇದೆಲ್ಲ ಒಂದು ಕಡೆಗಾದರೆ ಕಾನೂನನ್ನು ಪಾಲಿಸಬೇಕಾಗಿದ್ದ ಪೊಲೀಸರನ್ನು ಕಟ್ಟಿ ಹಾಕಿದ್ದಾದರೂ ಯಾರು ? ಪೊಲೀಸ್ ಆಯುಕ್ತರೇ ? ಸರ್ಕಾರವೇ ? ಜನಾರ್ದನ ರೆಡ್ಡಿಯೇ ? ಬಿಜೆಪಿ ಸರ್ಕಾರ ಯಾಕೆ ಇಷ್ಟೊಂದು ನಿರ್ಲಜ್ಜ, ಬೇಜವಬ್ದಾರಿಯುತವಾಗಿ ನಡೆದುಕೊಳ್ಳುತ್ತಿದೆ ? ಇನ್ನೂ ಯಾಕೆ ಇವರಿಗೆ ಬುದ್ದಿ ಬಂದಿಲ್ಲ ? ಅಷ್ಟು ದೊಡ್ಡ ಗಲಾಟೆ ನಡೆದಿದ್ದರೂ ಸದಾನಂದ ಗೌಡರು "ನನಗೆ ವಿಷಯ ತಿಳಿದಿಲ್ಲ" ಅನ್ನುತ್ತಾರೆ ಎಂದರೆ ಇಂತಹ ಜಾಣ ಕುರುಡರಿಗೆ ಏನೆನ್ನಬೇಕು ?

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...