ಮೊನ್ನೆ ಮೊನ್ನೆ ನೆಟ್ನಲ್ಲಿ ಇಂತಹುದೊಂದು ಚಿತ್ರ ದೊರೆಯಿತು. ಒಬ್ಬ ವ್ಯಕ್ತಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವುದನ್ನು ನೋಡಿದಾಗ ಎಂತವರ ಕರುಳುದಾರೂ ಚುರ್ ಎನ್ನದಿರದು. ಆದರೆ ಈ ಚಿತ್ರವನ್ನು ನೋಡಿದಾಗ ಅದಕ್ಕಿಂತಲೂ ಮಿಗಿಲಾಗಿ ವೇದನೆ ಕಾಡದಿರದು. ಒಬ್ಬ ವ್ಯಕ್ತಿ ಹೊತ್ತಿ ಉರಿಯುತ್ತಿದ್ದರೂ ಸಹ ಈ ರೀತಿ ಅಮಾನವೀಯವಾಗಿ ಅವನನ್ನು ಫೋಟೋ, ವೀಡಿಯೋ ತೆಗೆದುಕೊಳ್ಳುತ್ತಿರುವ ಮಾಧ್ಯಮದ ಮಂದಿಗೆ ಏನೆಂದು ಹೇಳೋಣ ? ಮಾಧ್ಯಮಗಳವರು ಮದ್ಯಮಗಳಾದಾಗ ಇಂತಹ ಆಘಾತಕಾರಿ ಘಟನೆಗಳು ನಡೆದು ಹೋಗುತ್ತವೆ. ಆ ಚಿತ್ರವನ್ನು ಒಮ್ಮೆ ಕೂಲಂಕುಶವಾಗಿ ನೋಡಿ. ಆದರೆ ಅಲ್ಲಿರುವ ಅಷ್ಟೊಂದು ಮಂದಿ ಮಾಧ್ಯಮ ಮಿತ್ರರು ಒಟ್ಟಾಗಿ ಪ್ರಯತ್ನಿಸಿದ್ದರೆ ಬೇಗನೆ ಬೆಂಕಿ ಆರಿಸಲು ಸಾಧ್ಯವಿತ್ತು. ಅದು ನಮ್ಮ ದೇಶದ್ದಲ್ಲ. ಢಾಕಾದಲ್ಲಿ ನಡೆದ ಘಟನೆ ಅನ್ನುವುದೇನೋ ನಿಜ. ಆದರೆ ವೃತ್ತಿ ಮತ್ತು ಮಾನವೀಯತೆ ಎಲ್ಲಾ ಕಡೆಗು ಒಂದೇ ಅಲ್ಲವೇ ? ಇಂತಹ ಘಟನೆಗಳು ನಮ್ಮ ದೇಶದಲ್ಲೇನೂ ನಡೆಯುವುದೇ ಇಲ್ಲ ಎಂದಲ್ಲ. ಕಳೆದ ವರ್ಷ ತಮಿಳುನಾಡಿನಲ್ಲಿ ವಿದ್ವಂಸಕಾರಿಗಳ ದಾಳಿಗೆ ಸಿಲುಕಿ ಮಂತ್ರಿಗಳ ರಕ್ಷಣಾ ಪಡೆಯ ಸಬ್ಇನ್ಸ್ಪೆಕ್ಟರ್ ಓರ್ವರು ಮೂವರು ಮಂತ್ರಿಗಳ ಎದುರಲ್ಲೇ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿ ಒದ್ದಾಡಿ ಪ್ರಾಣ ಬಿಟ್ಟರು. ಅದನ್ನು ಟಿವಿ ವಾಹಿನಿಯವರು ಚಿತ್ರಿಸಿ (ಮಂತ್ರಿಗಳನ್ನೂ ತೋರಿಸುತ್ತಾ) ಜನರಿಗೆ ಹೇಳಿದ್ದು ಏನು ಗೊತ್ತೇ ? "ಮಂತ್ರಿಗಳ ಅಮಾನವೀಯತೆಯಿಂದ ಸಬ
ಮನಸು ಹೃದಯಗಳ ಸವಿಮಾತು............