ವಿಷಯಕ್ಕೆ ಹೋಗಿ

ಭಾರತದಲ್ಲೂ ಆಗಲಿ ಸೇನಾ ದಂಗೆ !


ಹೌದು ಕಡ್ಡಾಯವಾಗಿ ಭಾರತವೊಮ್ಮೆ ಈ ಹಾಳು ರಾಜಕಾರಣಿಗಳಿಂದ ಮುಕ್ತಿ ಪಡೆಯಲೇ ಬೇಕಾಗಿದೆ. ಈ ಭ್ರಷ್ಟ ಕಾಂಗ್ರೆಸ್, ಬಿಜೆಪಿ, ಜೆಡಿಎಸ್... ಯಾರೂ ಶುದ್ಧರಂತಿರಲಿ, ಯೋಗ್ಯರೇ ಅಲ್ಲ. ಇವರ ಕೈಗೆ ದೇಶ ಸಿಕ್ಕಿ ನಲುಗಿ ಹೋಗುತ್ತಿದೆ. ನಮ್ಮ ಸೇನಾಧಿಕಾರಿಗಳು ಅತಿ ಬೇಗನೆ ಮನಸ್ಸು ಮಾಡಲೇ ಬೇಕು. ಸೇನಾ ದಂಗೆಯ ಮೂಲಕ ಭಾರತವನ್ನು ವಶಪಡಿಸಿಕೊಂಡು ಕನಿಷ್ಟ ಹತ್ತು ವರ್ಷವಾದರೂ ಅವರು ಮುನ್ನಡೆಸಬೇಕು.

ಇಲ್ಲವೆಂದರೆವೆಂದರೆ ನಮ್ಮ ದೇಶ ಅಧೋಗತಿಯಾಗುವುದು ಸತ್ಯ. ಈ ದೇಶಕ್ಕೆ ಈ ರಾಜಕಾರಣಿಗಳಿಂದ ಭವಿಷ್ಯ ಇಲ್ಲ. ಇವರ ಮೇಲಾಟ, ಅಧಿಕಾರ ಲಾಲಸೆ, ಲಂಚಗುಳಿತನ, ಭ್ರಷ್ಟಾಚಾರ ಎಲ್ಲವನ್ನೂ ಭಾರತ ಮಾತೆ ಸಹಿಸಲಾರಳು. ಹೀಗೇ ಬಿಟ್ಟರೆ ನಮ್ಮ ಸೈನಿಕರಿಗೂ ಇವರು ಸರಿಯಾದ ಶಸ್ತ್ರಾಸ್ತ್ರ ನೀಡದೇ ಅದರಲ್ಲೂ ಹಗರಣ ಮಾಡಿ ಕೊನೆಗೆ ಚೀನಾ ಅತವಾ ಪಾಕಿಸ್ತಾನ ದಂಡೆತ್ತಿ ಬಂದಾಗ ವಿನಾಕಾರಣ ನಮ್ಮ ಸೇನೆಯನ್ನೇ ಬಲಿ ಕೊಡಬೇಕಾಗುತ್ತದೆ. 

ನಿಜ, ಸೇನಾ ಕಾರ್ಯಾಚರಣೆ ನಡೆದು ದೇಶವು ಸೇನೆಯ ತೆಕ್ಕೆಗೆ ಹೋದರೆ ಎಲ್ಲರಿಗೂ ತಾತ್ಕಾಲಿಕವಾಗಿ ಸಮಸ್ಯೆ, ಕಷ್ಟ ಎದುರಾಗಬಹುದು. ಆದರೆ ರಾಜಕಾರಣಿಗಳಿಗಿಂತಲೂ ಸೈನಿಕರು ಚೆನ್ನಾಗಿ ದೇಶವನ್ನು ಮುನ್ನಡೆಸಬಲ್ಲರು. ( ಉದಾ : ಪಾಕಿಸ್ತಾನದಲ್ಲಿ ಫರವೇಜ್ ಮುಷರಫ್ ಆಡಳಿತದಲ್ಲಿ ಆ ದೇಶ ಸಾಕಷ್ಟು ಅಬಿವೃದ್ದಿಯನ್ನೇ ಹೊಂದಿತು. ಉಳಿದ ಪ್ರಧಾನಿಗಳಂತೆ ತನ್ನ ದೇಶಕ್ಕೇ ಹಾಳಂತೂ ಮಾಡಲಿಲ್ಲ ) ನಮ್ಮ ಸೇನಾಧಿಕಾರಿಗಳಲ್ಲಿ ಅದಕ್ಕಿಂತಲು ಪ್ರಾಮಾಣಿಕತನ, ವ್ಯವಹಾರ ಚಾತುರ್ಯವಿದೆ. ದೇಶವನ್ನು ಇದಕ್ಕಿಂತಲೂ ಹಾಳು ಮಾಡಲು ಸಾಧ್ಯವಿಲ್ಲ. 

ಭಾರತೀಯ ಸೇನೆಯ ಮೂರೂ ದಂಡನಾಯಕರು ಈ ಬಗ್ಗೆ ಸಮಾಲೋಚನೆ ನಡೆಸಲಿ. ಆದಷ್ಟು ಬೇಗನೆ ಭಾರತವನ್ನು ಸೇನೆ ತನ್ನ ವಶಕ್ಕೆ ತೆಗೆದುಕೊಳ್ಳಲಿ. ಭ್ರಷ್ಟ ರಾಜಕಾರಣಿಗಳನ್ನೆ ನೇಣಿಗೇರಿಸಲಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...