"ನಿನಗೇನಾದರೂ ಪೆಟ್ಟಾಯಿತೆ?" ಎಂದು ಕೇಳಿದನು ಮಹರ್ಷಿ. ನಾನು ನನ್ನ ಕೈ ಮೈಯನ್ನು ನೋಡಿಕೊಂಡೆ. ಮುಂಗೈಗೆ ಒಂದು ಮೊನಚು ಕಲ್ಲು ಹೊಡೆದು ಅರ್ಧ ಇಂಚಿನಷ್ಟು ಅಳಕ್ಕೆ ಗಾಯವಾಗಿತ್ತು. ರಕ್ತದ ಹನಿಗಳು ಪಟಪಟನೆ ಸುರಿಯುತ್ತಿದ್ದವು. ಅದನ್ನು ಕಂಡ ಅವನು ತನ್ನಲ್ಲಿದ್ದ ಹತ್ತಿಯನ್ನು ಗಾಯದ ಮೇಲಿಟ್ಟು ಕರವಸ್ತ್ರದಿಂದ ಗಟ್ಟಿಯಾಗಿ ಕಟ್ಟು ಹಾಕಿದನು. ಮತ್ತೆ ನಮ್ಮ ನಮ್ಮ ಬಂದೂಕುಗಳನ್ನು ಎತ್ತಿಕೊಂಡೆವು! ಶತ್ರು ಪಡೆಗಳ ಸೆಲ್ಗಳೂ ಅವರ ಗನ್ಗಳ ಗುಂಡುಗಳೂ ಅಲ್ಲಲ್ಲಿ ಬಿದ್ದು ಸಿಡಿಯುತ್ತಿದ್ದವು. ನಾವಿಬ್ಬರೂ ಈಗ ಆ ದೊಡ್ಡ ಬಂಡೆಯ ಹಿಂದೆ ರಕ್ಷಣೆ ಪಡೆದಿದ್ದೆವು. ಮತ್ತೆ ಕೇಳಿದನು ಮಹರ್ಷಿ...... ``ಈಗೇನು ಮಾಡೋಣ?" ``ಇರು... ನಮ್ಮವರು ಬಂದು ನಮ್ಮನ್ನು ಸೇರಿಕೊಳ್ಳಲಿ. ಇದೀಗ ನಾವು ಆಯಕಟ್ಟಿನ ಸ್ಥಳಕ್ಕೆ ಬಂದಾಗಿದೆ... ಇನ್ನೇನಿದ್ದರೂ ಮುಖಾಮುಖಿ" ಎಂದೆ. ``ಇದು ನಮಗೆ ಎಷ್ಟನೇ ಮುಖಾಮುಖಿ? ಅವನ ಬೆನ್ನು ತಟ್ಟಿ ಹೇಳಿದೆ ``ಮೂರನೆಯದು" ``ಈ ಕುನ್ನಿಗಳಿಂದ ನಮ್ಮನ್ನೇನು ಮಾಡಲು ಸಾಧ್ಯವಿಲ್ಲ ಅಲ್ಲವಾ?" ಎನ್ನುತ್ತ ಅವನು ನನ್ನ ಕೈ ಕುಲಕಿದ್ದನು. ಆದರೆ ನನ್ನ ಮನಸ್ಸು ಮಾತ್ರ ಹಿಂದೆ ಓಡುತ್ತಿತ್ತು. * * * ಒಂದೇ ಊರಿನಲ್ಲಿ ಹುಟ್ಟಿ ಬೆಳೆದ ನಮಗೆ ಊರಿನ ಜನರಲ್ಲಿ ಗೆಳೆಯರು ಎಂಬುದಕ್ಕಿಂತ ಅಣ್ಣ ತಮ್ಮಂದಿರೆಂಬ ಪರ್ಯಾಯ ಸಂಬಂಧವಿತ್ತು. ``ಮನು ಮಹರ್ಷಿಯರು ಅಗಲಿದ್ದುದನ್ನು ನಾವೆಂದೂ ನೋಡೇ ಇಲ್ಲ" ಎಂದು ಊರ ಜ
ಮನಸು ಹೃದಯಗಳ ಸವಿಮಾತು............