ವಿಷಯಕ್ಕೆ ಹೋಗಿ

ವಿಶ್ವ ಪಾರಂಪರಿಕ ಪಟ್ಟಿಗೂ ಬಿಜೆಪಿ ಕೊಕ್ಕೆ !



ದೇಶದ ವನ್ಯ ಸಂಪತ್ತು ಹೇರಳವಾಗಿರುವ ಪಶ್ಚಿಮ ಘಟ್ಟ ನಮ್ಮ ರಾಜ್ಯದಲ್ಲಿ ಹಾದು ಹೋಗಿದೆ. ಇದು ನಮಗೆಲ್ಲಾ ಹೆಮ್ಮೆ ಪಡುವ ವಿಷಯ. ಇದು ಕೇಂದ್ರ ಸರ್ಕಾರದ ಪ್ರಯತ್ನದಿಂದ ಅಂತೂ ವಿಶ್ವ ಪಾರಂಪರಿಕ ಪಟ್ಟಿಗೆ ಈ ವರ್ಷ ಸೇರಿದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಅದಕ್ಕೂ ಕೊಕ್ಕೆ ಹಾಕುವ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿವೆ. 

ಎಲ್ಲರಿಗೂ ತಿಳಿದಿರುವಂತೆ ವಿಶ್ವ ಪರಂಪರಿಕ ಪಟ್ಟಿಗೆ (ಯುನೆಸ್ಕೋ ನಿರ್ಧಾರ) ಸೇರಿಸುವುದು ಸುಲಭದ ಮಾತೇನಲ್ಲ. ಈ ಹಿಂದೆ ಹಂಪಿಯನ್ನು ಈ ಪಟ್ಟಿಗೆ ಸೇರಿಸಲು ಸಹ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹರ ಸಾಹಸ ಮಾಡಿದ್ದವು. ಆದರೆ ಈ ಬಾರಿ  ಅಪಾರ ವನ್ಯ ಸಂಪತ್ತು ಮತ್ತು ಜೀವರಾಶಿ ಹೊಂದಿರುವ ಪಶ್ಚಿಮ ಘಟ್ಟವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಿದ್ದಾಗ್ಯೂ ಸಹ ರಾಜ್ಯದ ಮಂತ್ರಿಗಳು (ಮುಖ್ಯಮಂತ್ರಿ ಸದಾನಂದಗೌಡ ಸೇರಿ) ಇದನ್ನು ವಿರೋಧಿಸಿರುವುದು ದುರ್ದೈವದ ವಿಚಾರ. ಇವರು ನೀಡುತ್ತಿರುವ ಕಾರಣ ವಿಚಿತ್ರವಾಗಿದೆ. "ಅಲ್ಲಿ ಅಭಿವೃದ್ಧಿ ಮಾಡಲು ತೊಂದರೆ ಆಗುತ್ತೆ" ಇದಕ್ಕೆ ಏನು ಹೇಳುತ್ತೀರಿ. 

ಇವರ ಸರ್ಕಾರದ ಅಭಿವೃದ್ಧಿಯನ್ನು ಕಳೆದ ನಾಲ್ಕು ವರ್ಷದಿಂದಲು ನೋಡುತ್ತಲೇ ಇದ್ದೇವೆ. ಬೆಂಗಳೂರಿನಂತಾ ನಗರದಲ್ಲಿ ವರ್ಷಕ್ಕೆ ನಾಲ್ಕು ಬಾರಿ ಡಾಂಬರು ಹಾಕಿದರೆ ಹಳ್ಳಿಗಳ ಕಡೆ ನಾಲ್ಕು ವರ್ಷಕ್ಕೆ ಒಮ್ಮೆಯೂ ರಸ್ತೆ ಸುಧಾರಣೆ ನಡೆಯುವುದಿಲ್ಲ. ಕೆಲವು ಫುಟ್‌ಪಾತ್‌ಗಳು ಫಳಫಳ ಹೊಳೆದರೆ ಕೆಲವು ಬಾಯಿ ತೆರೆದುಕೊಂಡು ಕುಳಿತಿವೆ. ಇಂತಹ ಅಭಿವೃದ್ಧಿ ಶೂರರು ಪಶ್ಚಿಮ ಘಟ್ಟದ ಕಾಡನ್ನು, ಅಥವಾ ಅಲ್ಲಿನ ಹಳ್ಳಿಗಳನ್ನು ಅದೇನು ಅಭಿವೃದ್ಧಿ ಮಾಡುತ್ತಾರೆ ? ಇಷ್ಟು ದಿನ ಅದೇನು ಕಡಿದು ಕಟ್ಟೆ ಹಾಕಿದ್ದಾರೆ ?

ಎಲ್ಲಾ ಕಡೆ ನಗರೀಕರಣವಾಗುತ್ತಿರುವಾಗ ಉಳಿದಿರುವ ಪಶ್ಚಿಮ ಘಟ್ಟವನ್ನೂ ಕಡಿದು ನಿರ್ನಾಮ ಮಾಡಬೇಕಾ ? ಅಥವಾ ಅದನ್ನು ಉಳಿಸಲು ಮನಸ್ಸು ಮಾಡಬೇಕಾ ಎಂಬ ಕನಿಷ್ಟ ಜ್ಞಾನವೂ ನಮ್ಮ ಮಂತ್ರಿಗಳಿಗೆ ಇಲ್ಲ. ಅಥವಾ ದಾಂಡೇಲಿ, ಮಡಿಕೇರಿ, ಚಿಕ್ಕಮಗಳೂರು ಗಳೆಡೆಯಲ್ಲೆಲ್ಲಾ ಕಾಡಿನೊಳಗೆ ಹಬ್ಬಿರುವ ರೆಸಾರ್ಟ್‌ ಕಬಂಧ ಬಾಹು ವಿಧಾನಸೌಧವನ್ನೂ ಹಿಡಿದಿಟ್ಟಿದಿಯಾ ? ಬಂಡಿಪುರ ಅರಣ್ಯದೊಳಗೆ ರಾತ್ರಿ ಸಂಚಾರವನ್ನು ನಿಷೇಧಿಸಿ ಜನರ ಮೆಚ್ಚುಗೆ ಪಡೆದ ಸರ್ಕಾರ ಈ ವಿಷಯದಲ್ಲಿ ಮಾತ್ರ ಎಡವುತ್ತಿರುವುದೇಕೆ ? ಇವರು ಇರುವ ನಗರ ಹಳ್ಳಿಗಳನ್ನು ಅಭಿವೃದ್ಧಿ ಮಾಡಿಕೊಂಡು ಸರ್ಕಾರವನ್ನು ಸರಿಯಾಗಿ ನಡೆಸಿದರೆ ಅದೇ ದೊಡ್ಡ ಉಪಕಾರವಾದೀತು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಪಡುವಣಕ್ಕೆ ಹೊರಟ ವಿಮಾನ ಏಕೆ ಬೇಗನೆ ತಲುಪುವುದಿಲ್ಲ ?

ಭೂಮಿ ವೇಗವಾಗಿ ಸುತ್ತುತ್ತಿದೆ ಎಂಬುದನ್ನು ಒಪ್ಪದವರು ಮುಂದಿಡುವ ಒಂದು ಪ್ರಶ್ನೆ ಹೀಗಿದೆ. "ಭೂಮಿ ಅಷ್ಟು ವೇಗವಾಗಿ ತಿರುಗುತ್ತ ಇದ್ದರೆ ಒಂದು ವಿಮಾನವು ಚೀನಾದಿಂದ ಸೌದಿಗೆ ಹೋಗಬೇಕಾದಲ್ಲಿ ಸ್ವಲ್ಪ ಮೇಲೆ ಹೋಗಿ ನಿಂತುಕೊಂಡರೆ ಸಾಕಲ್ಲ, ಭೂಮಿ ತಿರುಗುವುದರಿಂದ ಸೌದಿ ಅರೇಬಿಯಾ ತಾನಾಗಿಯೇ ವಿಮಾನದ ಕೆಳಗೆ ಬರುತ್ತದೆ. ಅಥವಾ ಮೂಡಣ ದಿಕ್ಕಿಗೆ ಹೊರಟ ವಿಮಾನವು ತಡವಾಗಿ ತಲುಪಬೇಕು ಮತ್ತು ಪಡುವಣ ದಿಕ್ಕಿಗೆ ಹೊರಟ ವಿಮಾನವು ಬೇಗನೆ ತಲುಪಬೇಕು" ಎಂಬ ವಾದವನ್ನು ಮುಂದಿಡುತ್ತಾರೆ. ಆದರೆ ಹಾಗೆ ಆಗಲು ಸಾಧ್ಯವಿಲ್ಲ, ಏಕೆಂದರೆ ಭೂಮಿ ಅಂದರೆ ಬರೀ ನೆಲವಷ್ಟೇ ಅಲ್ಲ, ಅದರ ಸುತ್ತಲಿನ ವಾತಾವರನವೂ ಸೇರಿ ಅದರ ಜೊತೆಗೇ ತಿರುಗುತ್ತಾ ಇದೆ. ಹಾಗಾಗಿ ವಿಮಾನವು ಮೇಲೆ ಹೋಗಿ ನಿಂತರೂ ಸಹ ಅದು ಭೂಮಿಯ ಜೊತೆಗೇ ಸಾಗುತ್ತದೆಯಾದ್ದರಿಂದ ಕೆಳಗಿನ ನೆಲ ಮಾತ್ರ ಜರುಗಲು ಸಾಧ್ಯ ಇಲ್ಲ. ಇದನ್ನು ನಾವೇ ಪರಿಶೀಲಿಸಬಹುದು. ಹೇಗೆಂದರೆ.. ವೇಗವಾಗಿ ಹೋಗುತ್ತಿರುವ ರೈಲಿನ ಎಲ್ಲಾ ಕಿಟಕಿಗಳನ್ನೂ ಮುಚ್ಚಿ ಅದರ ಮಾಡಿನ ಹತ್ತಿರದಿಂದ ಒಂದು ಚಿಕ್ಕ ವಸ್ತುವನ್ನು (ಉದಾ : ಗೋಲಿ) ಬಿಟ್ಟರೆ ಅದು ನಾವು ಬಿಟ್ಟಬಿಂದುವಿನ ನೇರಕ್ಕೇ ಬಿಳುತ್ತದೆಯೆ ಹೊರತಾಗಿ ರೈಲು ಓಡುತ್ತಿರುವುದರಿಂದ ಸ್ವಲ್ಪ ಹಿಂದೆ ಬೀಳುವುದಿಲ್ಲ. ಹಾಗೆಯೇ ಗಾಳಿಯಾಡದಂತೆ ಮುಚ್ಚಿದ ರೈಲು ಬೋಗಿಯ ಒಳಗೆ ಒಂದು ತುದಿಯಿಂದ ಇನ್ನೊಂದು ತುದಿಗೆ ಚೆಂಡನ್ನು ಒಂದೇ ಜೋರಿನಲ್ಲಿ ಎಸೆದರೆ ಅದು ಎರಡೂ ದಿಕ್ಕಿಗೂ (ಮುಂದಿನಿ...