ವಿಷಯಕ್ಕೆ ಹೋಗಿ

ದೇವರ ಹೆಸರಲ್ಲಿ ಮೆರೆಯುತ್ತಿರುವವರಿಗೆ ದುಗುಡ ತಂದಿಟ್ಟ ’ದೇವಕಣ’!


ಕಳೆದ ಕೆಲವು ದಿನಗಳಿಂದ ಕೇಳಿ ಬರುತ್ತಿರುವ 'ದೇವಕಣ' ಪದ ಕಾಲಾನುಕಾಲದಿಂದ 'ದೇವರ' ಹೆಸರಲ್ಲೇ ಮೋಸ, ವಂಚನೆ, ಭಯೋತ್ಪಾಧನೆಗಳೆಲ್ಲವನ್ನೂ ಮಾಡುತ್ತಾ ಬಂದವರಿಗೆಲ್ಲಾ ದುಗುಡ ತಂದಿಟ್ಟಿದೆ. ದೇವರು ಎಂಬ ನಂಬಿಕೆ ಎಷ್ಟೆಲ್ಲಾ ಒಳ್ಳೆಯದನ್ನು ಮಾಡಿದೆಯೋ ಅಷ್ಟೇ ಅನಾಹುತಗಳನ್ನು ಮಾಡಿರುವುದೂ ಸತ್ಯ. ವೈಕ್ತಿಕವಾಗಿ ವ್ಯಕ್ತಿಯೊಬ್ಬ ದೇವರ ಅಸ್ಥಿತ್ವವನ್ನು ನಂಬುವುದರಿಂದ ಸಮಾಜಕ್ಕೆ ಯಾವ ಅಪಾಯವೂ ಇಲ್ಲ. ಅಪಾಯವಿರುವುದು ಆ ನಂಬಿಕೆ ಸಾಮೂಹಿಕವಾಗಿ ಪ್ರಕಟಗೊಳ್ಳುವಾಗ. ಇದರಿಂದಾಗಿಯೇ ದೇವರ ಹೆಸರಲ್ಲೇ ಧರ್ಮಗಳೂ ಹುಟ್ಟಿಕೊಂಡಿರುವುದು. ಇದರ ಅಪಾಯವನ್ನು ಕಂಡೇ ಕುವೆಂಪುರವರು "ಜಗತ್ತಿನ ಎಲ್ಲರಿಗೂ ಧರ್ಮ ಬೇಕು, ಆದರೆ ಅದು ವೈಯಕ್ತಿಕವಾಗಿರಬೇಕು. ಅಂದರೆ ಪ್ರಪಂಚದಲ್ಲಿ ಎಷ್ಟು ಜನರಿದ್ದಾರೋ ಅಷ್ಟು ಧರ್ಮಗಳಿರಬೇಕು. ಯಾವಾಗ ಜನ ಧರ್ಮದ ಹೆಸರಲ್ಲಿ ಗುಂಪು ಕಟ್ಟುತ್ತಾರೋ ಆಗ ಅನಾಹುತವಾಗುತ್ತದೆ" ಎಂದಿದ್ದರು. ಅದೇ ರೀತಿ ಸ್ವಾಮಿ ವಿವೇಕಾನಂದರು "ಧರ್ಮ ಪುಸ್ತಕಗಳಲ್ಲಾಗಲೀ, ದೇವಸ್ಥಾನಗಳಲ್ಲಾಗಲೀ ಇಲ್ಲ ಎಂಬುದನ್ನು ಅರ್ಥ ಮಾಡಿಕೊಂಡಾಗ ಈ ಕೋಮು ಗಲಭೆ, ಧಾರ್ಮಿಕ ಭೇದ ಭಾವನೆಗಳೆಲ್ಲ ಹೊರಟು ಹೋಗುವವು. ಧರ್ಮವೆಂದರೆ ಪ್ರತ್ಯಕ್ಷಾನುಭವ. ದೇವರ ಮತ್ತು ಆತ್ಮನ ಪ್ರತ್ಯಕ್ಷ ದರ್ಶನವನ್ನು ಪಡೆದವನು ಮಾತ್ರ ಧರ್ಮವನ್ನು ಹೊಂದಿರುವನು." ಎಂದು ಎಚ್ಚರಿಸಿದ್ದರು.

ಸರಿಯಾಗಿ ವಿವೇಚಿಸಿದರೆ ದೇವರಿಗೂ ಧರ್ಮಕ್ಕೂ ಸಂಬಂಧವಿಲ್ಲ. ಧರ್ಮ ಎನ್ನುವುದು ಮನಷ್ಯನ ಬಾಳ್ವೆಗೆ ಬೇಕಾದ ಒಂದು ಸಂವಿಧಾನ. ಆತನ ನಡವಳಿಕೆಯನ್ನು ನಿರ್ಧರಿಸುವ ಪುಸ್ತಕವಾಗಬೇಕಿತ್ತು. ಆದರೆ ಅದು ಹಾಗೆ ಆಗದೇ ಧರ್ಮ ಹಾಗೂ ದೇವರನ್ನು ಒಂದುಗೂಡಿಸಿ ಅದ್ವಾನವಾಗುವ ಹಾಗೆ ಮಾಡಲಾಗಿದೆ. ರಾಮ, ಕೃಷ್ಣ, ಪೈಗಂಬರ, ಏಸು - ಇವರೆಲ್ಲಾ ಮಾನವರೇ ಆಗಿದ್ದರು. ಆದರೆ ವಿಶೇಷ ಬುದ್ಧಿಮತ್ತೆ ಮತ್ತು ಗುಣಸಂಪನ್ನರಾಗಿದ್ದುದರಿಂದ ಅವರನ್ನು ದೇವರ ಸ್ಥಾನಕ್ಕೆ ಏರಿಸಲಾಯ್ತು. ಕಾಲಾಂತರದಲ್ಲಿ ಅವರನ್ನು ದೇವರೆಂದೇ ನಂಬಲಾಯ್ತು. ಅವತಾರಗಳ ಕತೆಯೆಲ್ಲಾ ಕೆಲಸವಿಲ್ಲದ ಮೇಧಾವಿಗಳು ಬರೆದ ಸಾಹಿತ್ಯವಷ್ಟೇ. 
ದೇವರಿದ್ದಾನೆ ಎಂದು ನಂಬಿರುವ, ಹಾಗೂ ಹಾಗೆ ವಾದಿಸುವವರ ದೊಡ್ಡ ಅಸ್ತ್ರವಾಗಿದ್ದುದೇ ಈ ಲೋಕದ ಸೃಷ್ಟಿ. ಏಕೆಂದರೆ ಶೂನ್ಯದಿಂದ ಈ ಲೋಕ ಸೃಷ್ಟಿಯಾಯ್ತು ಎಂಬುದನ್ನು ಎಂಥವರೂ ಅರಗಿಸಿಕೊಳ್ಳುವುದು ಕಷ್ಟ. ಇದೊಂದು ಕಾರಣದಿಂದಲೇ ದೇವರಿಲ್ಲ ಅನ್ನಿಸಿದರೂ ಸಹ 'ಈ ಬ್ರಹ್ಮಾಂಡ ಸೃಷ್ಟಿ ಆಗಿದೆಯೆಂದರೆ ಒಂದು ವೇಳೆ ದೇವರಿದ್ದರೂ ಇರಬಹುದು' ಎಂಬ ಅನುಮಾನವನ್ನು ಹುಟ್ಟು ಹಾಕದಿರದು. ವಿಜ್ಞಾನಿಗಳಿಗೂ ಈ ನಿಗೂಢವನ್ನು ಬೇಧಿಸುವುದು ಸಾಧ್ಯವಾಗದೇ ಇದ್ದಾಗ ಆಸ್ಥಿಕರ ಕೈ ಮೇಲಾಗಿತ್ತೆನ್ನಬಹುದು. ಈ ಕಾರಣವೇ ದೇವರ ಅಸ್ಥಿತ್ವವನ್ನು ಸಾಧಿಸಲು ಹೊರಡುವವರ ದೊಡ್ಡ ಅಸ್ತ್ರವಾಗಿ ಇಷ್ಟು ದಿನವೂ ಇತ್ತು. 

ಆದರೆ ಕಡೆಗೂ ವಿಜ್ಞಾನಿಗಳು ಗೆಲುವಿನ ಹೊಸ್ತಿಲಿಗೆ ಬಂದಿದ್ದಾರೆ. ಈ ಬ್ರಹ್ಮಾಂಡದ ಸೃಷ್ಟಿಗೆ ದೇವರು ಕಾರಣವಲ್ಲ... ದೇವಕಣ ಕಾರಣ ಎಂಬ ಮಾಹಿತಿಯನ್ನು ಹೊರ ಹಾಕಿದ್ದಾರೆ. ಎರಡು ಅಣುಗಳು ಬೆಳಕಿಗಿಂತಲು ಹೆಚ್ಚಿನ ವೇಗದಲ್ಲಿ ಒಂದಕ್ಕೊಂದು ಢಿಕ್ಕಿ ಹೊಡೆದಾಗ ಅಪಾರ ದ್ರವ್ಯರಾಶಿ ಬಿಡುಗಡೆಯಾಗುತ್ತದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಜನ ಸಾಮಾನ್ಯರಿಗೂ ಅರ್ಥವಾಗುವಂತೆ ಇದನ್ನು ವಿಜ್ಞಾನಿಗಳು ಸಾದರಪಡಿಸಲು ಇನ್ನಷ್ಟು ಕಾಲ ಹಿಡಿಯಬಹುದು. ಆದರೆ ದೇವರ ಹೆಸರಲ್ಲೇ ಬದುಕುತ್ತಾ, ದೇವರ ಹೆಸರಲ್ಲೇ ಧರ್ಮ ಕಟ್ಟಿ, ದೇವರ ಹೆಸರಲ್ಲೇ ಯುದ್ಧ ಬಯೋತ್ಪಾಧನೆ ಮಾಡುವವರಿಗೆಲ್ಲಾ ಈ 'ದೇವಕಣ' ಸಣ್ಣಗೆ ನಡುಕ ತಂದಿರಬಹುದು... ತಮ್ಮ ಬಂಡವಾಳ ಬಯಲಾದೀತೆಂದು !

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...