ಹೀಗೊಂದು ಅನುಮಾನ ಕಾಡುತ್ತಿದೆ. ಏಕೆಂದರೆ ನಿನ್ನೆ ಸುವರ್ಣಾ ನ್ಯೂಸ್ನಲ್ಲಿನ ಒಂದು ಚರ್ಚೆ ನಡೆಯುತ್ತಿತ್ತು. ಅದು ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ಗಳನ್ನು ವರ್ಷಕ್ಕೆ ಆರಕ್ಕೆ ಸೀಮಿತಗೊಳಿಸಿರುವುದರ ಬಗ್ಗೆ ನಡೆದಿತ್ತು. ಅದರಲ್ಲಿ ಭಾಗವಹಿಸಿದ ವ್ಯಕ್ತಿಯೊಬ್ಬರು ಹೇಳಿದ್ದು ವರ್ಷಕ್ಕೆ ಹನ್ನೆರಡು ಸಿಲಿಂಡರುಗಳನ್ನು ನೀಡಲೇ ಬೇಕು. ಅದಕ್ಕೆ ಹಣ ಬೇಕಾದರೆ ನರೇಗಾ (ಕೂಲಿಗಾಗಿ ಕಾಳು ಯೋಜನೆ) ವನ್ನು ತೆಗೆದು ಹಾಕಿ ಆ ಹಣದಿಂದ ನೀಡಬೇಕು, ಕೂಲಿಗಾಗಿ ಕಾಳು ಯೋಜನೆಯಲ್ಲಿ ಕೂಲಿಗಳಿಗೆ 100 ರೂ ಹೋದರೆ 20 ರೂಪಾಯಿ ಮಧ್ಯವರ್ತಿ ಜೇಬು ಸೇರುತ್ತಿದೆ. ಅಲ್ಲದೇ ಇದರಿಂದ ಹೊಲಗಳಲ್ಲಿ ದುಡಿಯಲು ಕೂಲಿಗಳೇ ಸಿಗುತ್ತಿಲ್ಲ. ಎಂದರು. ಅನಿಲ ಸಿಲಿಂಡರ್ ವಿಷಯಕ್ಕೆ ಬಂದರೆ ಅದನ್ನು ಉಪಯೋಗಿಸುತ್ತಿರುವುದು ಬಹುತೇಕ ಮಧ್ಯಮ ಮತ್ತು ಧನಿಕ ವರ್ಗ. ಬಡವರು, ಕಡು ಬಡವರು ಇಂದಿಗೂ ಸೌದೆ, ಸೀಮೆಣ್ಣೆಯನ್ನೇ ನಂಬಿಕೊಂಡಿದ್ದಾರೆ. ಮಧ್ಯಮ ವರ್ಗದ ಒಂದು ಸಾಧಾರಣ ಕುಟುಂಬಕ್ಕೆ ವರ್ಷಕ್ಕೆ 6 ಸಿಲಿಂಡರ್ ಅಡುಗೆ ಮಾಡಿಕೊಳ್ಳಲು ಸಾಕು. ಸ್ನಾನಕ್ಕೆ ನೀರು ಕಾಯಿಸಲೂ ಅದನ್ನೇ ಬಳಸಿದರೆ ಸಾಕಾಗುವುದಿಲ್ಲ. ಆದರೆ ಸರ್ಕಾರ ಸಬ್ಸಿಡಿ ಕೊಡುವುದು ಅಡುಗೆ ಮಾಡಿಕೊಳ್ಳಲಿಕ್ಕೇ ಹೊರತೂ ಪ್ರಜೆಗಳು ಬಿಸಿಬಿಸಿ ನೀರು ಸ್ನಾನ ಮಾಡಿ ಹಾಯಾಗಿರಲಿ ಎಂದೇನಲ್ಲ. ಪ್ರಜೆಗಳ ಎಲ್ಲಾ ಬೇಡಿಕೆಯನ್ನೂ ನೀಡಲು ಯಾವ ಸರ್ಕಾರದಿಂದಲೂ ಸಾಧ್ಯವಿಲ್ಲ. ಮಿತ ಬಳಕೆಯನ್ನು ಸಾರ್ವಜನಿಕರೂ ಸ್ವಲ್ಪ ರೂಢಿಸಿಕೊಂಡರೆ
ಮನಸು ಹೃದಯಗಳ ಸವಿಮಾತು............