ವಿಷಯಕ್ಕೆ ಹೋಗಿ

ಪ್ಲಾಸ್ಟಿಕ್ ಕೊಟ್ಟೆಗಳನ್ನು ಸಂಗ್ರಹಿಸಿ ಮರುಬಳಕೆ ಮಾಡಿರಿ

ಪ್ಲಾಸ್ಟಿಕ್ ಕೊಟ್ಟೆಗಳನ್ನು ಸಂಗ್ರಹಿಸಿ ಮರುಬಳಕೆ ಮಾಡಿರಿ

ಬೆಂಗಳೂರಿನಲ್ಲಿ ಕಸದ ಸಮಸ್ಯೆ ವಿಪರೀತ. ಹೀಗೇ ಕಸದ ವಿಲೇವಾರಿಯನ್ನು ಸರಿಯಾಗಿ ಮಾಡದೇ ಹೋದರೆ ಬೆಂಗಳೂರು ಸಹ ಚೆನ್ನೈ, ಮುಂಬೈ ರೀತಿ ಗಬ್ಬು ನಾರಲು ಶುರುವಾಗುತ್ತದೆ. ಕಸದಿಂದ ರಸ ಮಾಡಲು ಮಹಾನಗರ ಪಾಲಿಕೆಯವರಿಗೆ ಸಾಧ್ಯವಿಲ್ಲವಾದರೂ ಕಸದಿಂದ ವಿದ್ಯುತ್ ಆದರು ಮಾಡಬಹುದಿತ್ತು. ಅದಕ್ಕೆಲ್ಲಾ ಇಚ್ಚಾಶಕ್ತಿ ಬೇಕು. ಅದನ್ನು ನಮ್ಮ ಅಧಿಕಾರಿಗಳಿಂದ, ಕಾರ್ಪೋರೇಟರುಗಳಿಂದ ಅಪೇಕ್ಷಿಸಿದರೆ ತಪ್ಪಾಗುವುದೇನೋ. ಅಥವಾ ಅದಕ್ಕೂ ಕಸದ ಮಾಫಿಯಾ ಅಡ್ಡಗಾಲು ಹಾಕಿದೆಯೋ ಎಂಬ ಅನುಮಾನ ಬೇರೆ!

ಮಹಾನಗರ ಪಾಲಿಕೆಯ ಮಂಗಾಟ ಅತ್ಲಾಗಿರಲಿ, ಸಾರ್ವಜನಿಕರಾದ ನಾವು ಕಸದ ಸಮಸ್ಯೆಯನ್ನು ಎಷ್ಟು ಗಂಭೀರವಾಗಿ ಪರಿಗಣಿಸಿದ್ದೇವೆ ಎಂಬುದೆ ಈಗಿನ ಪ್ರಶ್ನೆ. ನವ್ಯಾರೂ ಕಸದ ಬಗ್ಗೆ ಗಮನ ಹರಿಸಿಯೇ ಇಲ್ಲ. ಹಾಗೇನಾದರೂ ನಮ್ಮ ಗಮನ ಕಸದ ಬಗ್ಗೆ ಇದ್ದರೆ, ಪಾಲಿಕೆಯ ಕಸದ ವಾಹನ ಎಷ್ಟೊತ್ತಿಗೆ ಬರುತ್ತೆ.. ಎನ್ನುವುದರ ಬಗ್ಗೆ ಮಾತ್ರ. ಕಸದ ವಾಹನ ಬಂದು ಅದನ್ನು ಸಾಗ ಹಾಕಿದರೆ ಮುಗಿಯಿತು. ನಂತರ ನಮಗೇನೂ ಚಿಂತೆ ಇಲ್ಲ. ಆ ಕಸವನ್ನು ಎಲ್ಲಿ ತೆಗೆದುಕೊಂಡು ಹೋಗಿ ಹಾಕುತ್ತಾರೆ ಎಂಬುದರ ಅರಿವೂ ನಮಗಿಲ್ಲ. ಕಸದ ನಿಯಂತ್ರಣದ ಮಾತು ದೂರವೇ ಉಳಿಯಿತು.

ನಾನು ಚೆನ್ನೈಯನ್ನು ಚೆನ್ನಾಗಿ ನೋಡಿದ್ದೇನೆ. ಅಲ್ಲಿಗೆ ಹೋಲಿಸಿದರೆ ಕಸ ವಿಲೇವಾರಿಯಲ್ಲಿ ಬೆಂಗಳೂರು ಪಾಲಿಕೆ ಹತ್ತು ಪಟ್ಟು ಮೇಲು. ಆದರೂ ನಮ್ಮಲ್ಲಿ ಅನೇಕ ಮನೆಯವರು ಆಗಾಗ ಕಸವನ್ನು ಒಂದು ಪ್ಲಾಸ್ಟಿಕ್ ಕೊಟ್ಟೆಯಲ್ಲಿ ಕಟ್ಟಿ ಯಾರೂ ನೋಡದಿರುವಾಗ ರಸ್ತೆ ಬದಿ ಎಸೆಯುವುದನ್ನು ಕಾಣಬಹುದು. ಎಲ್ಲಾದರೂ ಒಂದು ಖಾಲಿ ನಿವೇಶನವಿದ್ದರಂತೂ ಮುಗಿದೇ ಹೋಯ್ತು, ಅದು ಖಾಲಿ ಇರುವುದೇ ಕಸ ತುಂಬಲಿಕ್ಕೆ ಎಂಬ ಮನೋಭಾವ ನಮ್ಮದು.

ಕಸದಲ್ಲೂ ಹಸಿ ( ಸುಲಭವಾಗಿ ಮಣ್ಣಿನಲ್ಲಿ ಕರಗುವ ) ಕಸಕ್ಕಿಂತ ಓಣ ಕಸ (ಪ್ಲಾಸ್ಟಿಕ್) ತುಂಬಾ ಅಪಾಯಕಾರಿ. ನಾವುಗಳು ಅದನ್ನೂ ಸರಿಯಾಗಿ ವಿಲೇವಾರಿ ಮಾಡುತ್ತಿಲ್ಲ. ಸರಿಯಾಗಿ ಉಪಯೋಗಿಸಲೂ ನಮಗೆ ತಿಳಿದಿಲ್ಲ. ಪ್ಲಾಸ್ಟಿಕ್ ಕೈಚೀಲಗಳನ್ನು ಮತ್ತೆ ಮತ್ತೆ ಉಪಯೋಗಿಸಿ ಹಣ ಉಳಿಸುವುದರೊಂದಿಗೆ ಪರಿಸರ ಮಲಿನ್ಯ ಮತ್ತು ಅದರ ತಯಾರಿಕೆಯನ್ನೂ ಕಡಿಮೆ ಮಾಡಬಹುದು. ನಾನು ಮೊದಲಿನಿಂದಲೂ ಇದನ್ನು ಮಾಡುತ್ತಾ ಬಂದಿದ್ದೇನೆ. ಸಾಮಾನುಗಳನ್ನು ತಂದಾಗ ಬರುವ ಪ್ಲಾಸ್ಟಿಕ್ ಕೈಚೀಲಗಳನ್ನು ಕಸದ ಜೊತೆ ಎಸೆಯದೇ ಚೆನ್ನಾಗಿ ಮಡಿಚಿ ಇಡುತ್ತೇನೆ. ಬಹಳಷ್ಟು ಸೇರಿದ ನಂತರ ಮೊದಲು ಯಾವುದಾದರೂ ಅಂಗಡಿಗೆ ಕೊಟ್ಟು ಬಿಡುತ್ತಿದ್ದೆ. ಆದರೆ ಈಗ ಹಾಗಲ್ಲ.

ನನ್ನ ಒಬ್ಬ ಮಿತ್ರನದು ದಿನಸಿ ಅಂಗಡಿ ಇದೆ. ಅವನ ಅಂಗಡಿ ದೂರ ಇರುವುದರಿಮದ ಅವನ ಅಂಗಡಿಯಿಂದ ನಾನು ಏನು ತರುವುದಿಲ್ಲವಾದರೂ ಆವನು ಆಗಾಗ ನನಗೆ ಪಾರ್ಟಿ ಕೊಡುತ್ತಿರುತ್ತಾನೆ. ಯಾವಾಗಲೂ ಅವನೇ ಬಿಲ್ ಕೊಡುತ್ತಿದ್ದ. ನಾನು ಕೊಡಲು ಹೋದರೂ ಬೇಡ ಅನ್ನುತ್ತಿದ್ದ. "ಆರ್ಥಿಕವಾಗಿ ನನು ಚೆನ್ನಾಗಿದ್ದೇನೆ, ಮುಂದೆ ಯಾವಾಗಲಾದರೂ ನಷ್ಟ ಆಗಿದ್ದರೆ ನೀನು ಪಾರ್ಟಿ ಕೊಡುವಂತೆ" ಎಂದು ಹೆಳಿ ನನ್ನ ಬಾಯಿ ಮುಚ್ಚಿಸುತ್ತಿದ್ದ. ಇದಕ್ಕೆ ಪರಿಹಾರವಾಗಿ ನನಗೆ ತೋಚಿದ್ದು ಪ್ಲಾಸ್ಟಿಕ್ ಕೊಟ್ಟೆಗಳು. ನಾವು ಯಾವಾಗಲೋ ಒಮ್ಮೆ ಪಾಟಿ ಮಾಡುವ ಹೊತ್ತಿಗೆ ನನ್ನ ಮನೆಯಲ್ಲಿ ಕೆಜಿಗಟ್ಟಲೇ ಪ್ಲಾಸ್ಟಿಕ್ ಕೊಟ್ಟೆಗಳ ಸಂಗ್ರಹ ಆಗಿರುತ್ತದೆ. ಅದನ್ನು ಅವನಿಗೆ ಕೊಡುತ್ತೇನೆ. ಪ್ಲಾಸ್ಟಿಕ್ ಮರು ಬಳಕೆ ಮಾಡಿದಂತೆಯೂ ಆಯ್ತು, ಪಾರ್ಟಿ ಕೊಟ್ಟವನ ಋಣ ತೀರಿಸಿದಂತೆಯೂ ಆಯ್ತು. ಹೀಗಿದೆ ನನ್ನ ಪರಿಸರ ಕಾಳಜಿ. 

ಕಾಮೆಂಟ್‌ಗಳು

Manu. ಹೇಳಿದ್ದಾರೆ…
ತುಂಬಾ ಚೆನ್ನಾಗಿದೆ ಸರ್..ನಿಮ್ಮ ತರಹನೇ ಎಲ್ಲರೂ ಮಾಡಿದರೆ ನಮ್ಮಲ್ಲಿ ಪ್ಲಾಸ್ಟಿಕ್ ಸಮಸ್ಯೆ ಸ್ವಲ್ಪ ಆದರೂ ಕಮ್ಮಿ ಆಗುತ್ತದೆ ಅಲ್ವಾ...
ಗುಡುಗು ಮಿಂಚು ಹೇಳಿದ್ದಾರೆ…
ಹೌದು ರಾಜೇಶ್ ಅವರೆ, ಪ್ರತಿಯೊಬ್ಬರೂ ತಮ್ಮ ತಮ್ಮ ಜವಾಬ್ದಾರಿ ನಿರ್ವಹಿಸಿದರೆ ಸಮಾಜ ಸುಧಾರಣೆ ಆಗುತ್ತೆ. ಪ್ರತಿಯೊಂದನ್ನೂ ಸರ್ಕಾರವೇ ಮಾಡಲಿ ಅಂತ ಕೂತರೆ ನಮ್ಮ ದೇಶ ಎಂದಿಗೂ ಉದ್ಧಾರ ಆಗಲ್ಲ.

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...

ದೈವಜ್ಞರು ತಂದಿಟ್ಟ ಪಜೀತಿ!

ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ. ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು. ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ. ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...