ವಿಷಯಕ್ಕೆ ಹೋಗಿ

”ಕೂಲಿಗಾಗಿ ಕಾಳು’ ಯೋಜನೆಗೂ ಹಾಕುವರೇ ಕಲ್ಲು ?


ಹೀಗೊಂದು ಅನುಮಾನ ಕಾಡುತ್ತಿದೆ. ಏಕೆಂದರೆ ನಿನ್ನೆ ಸುವರ್ಣಾ ನ್ಯೂಸ್‌ನಲ್ಲಿನ ಒಂದು ಚರ್ಚೆ ನಡೆಯುತ್ತಿತ್ತು. ಅದು ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್‌ಗಳನ್ನು ವರ್ಷಕ್ಕೆ ಆರಕ್ಕೆ ಸೀಮಿತಗೊಳಿಸಿರುವುದರ ಬಗ್ಗೆ ನಡೆದಿತ್ತು. ಅದರಲ್ಲಿ ಭಾಗವಹಿಸಿದ ವ್ಯಕ್ತಿಯೊಬ್ಬರು ಹೇಳಿದ್ದು ವರ್ಷಕ್ಕೆ ಹನ್ನೆರಡು ಸಿಲಿಂಡರುಗಳನ್ನು ನೀಡಲೇ ಬೇಕು. ಅದಕ್ಕೆ ಹಣ ಬೇಕಾದರೆ ನರೇಗಾ (ಕೂಲಿಗಾಗಿ ಕಾಳು ಯೋಜನೆ) ವನ್ನು ತೆಗೆದು ಹಾಕಿ ಆ ಹಣದಿಂದ ನೀಡಬೇಕು, ಕೂಲಿಗಾಗಿ ಕಾಳು ಯೋಜನೆಯಲ್ಲಿ ಕೂಲಿಗಳಿಗೆ 100 ರೂ ಹೋದರೆ 20 ರೂಪಾಯಿ ಮಧ್ಯವರ್ತಿ ಜೇಬು ಸೇರುತ್ತಿದೆ. ಅಲ್ಲದೇ ಇದರಿಂದ ಹೊಲಗಳಲ್ಲಿ ದುಡಿಯಲು ಕೂಲಿಗಳೇ ಸಿಗುತ್ತಿಲ್ಲ. ಎಂದರು. 

ಅನಿಲ ಸಿಲಿಂಡರ್ ವಿಷಯಕ್ಕೆ ಬಂದರೆ ಅದನ್ನು ಉಪಯೋಗಿಸುತ್ತಿರುವುದು ಬಹುತೇಕ ಮಧ್ಯಮ ಮತ್ತು ಧನಿಕ ವರ್ಗ. ಬಡವರು, ಕಡು ಬಡವರು ಇಂದಿಗೂ ಸೌದೆ, ಸೀಮೆಣ್ಣೆಯನ್ನೇ ನಂಬಿಕೊಂಡಿದ್ದಾರೆ. ಮಧ್ಯಮ ವರ್ಗದ ಒಂದು ಸಾಧಾರಣ ಕುಟುಂಬಕ್ಕೆ ವರ್ಷಕ್ಕೆ 6 ಸಿಲಿಂಡರ್ ಅಡುಗೆ ಮಾಡಿಕೊಳ್ಳಲು ಸಾಕು. ಸ್ನಾನಕ್ಕೆ ನೀರು ಕಾಯಿಸಲೂ ಅದನ್ನೇ ಬಳಸಿದರೆ ಸಾಕಾಗುವುದಿಲ್ಲ. ಆದರೆ ಸರ್ಕಾರ ಸಬ್ಸಿಡಿ ಕೊಡುವುದು ಅಡುಗೆ ಮಾಡಿಕೊಳ್ಳಲಿಕ್ಕೇ ಹೊರತೂ ಪ್ರಜೆಗಳು ಬಿಸಿಬಿಸಿ ನೀರು ಸ್ನಾನ ಮಾಡಿ ಹಾಯಾಗಿರಲಿ ಎಂದೇನಲ್ಲ. ಪ್ರಜೆಗಳ ಎಲ್ಲಾ ಬೇಡಿಕೆಯನ್ನೂ ನೀಡಲು ಯಾವ ಸರ್ಕಾರದಿಂದಲೂ ಸಾಧ್ಯವಿಲ್ಲ. ಮಿತ ಬಳಕೆಯನ್ನು ಸಾರ್ವಜನಿಕರೂ ಸ್ವಲ್ಪ ರೂಢಿಸಿಕೊಂಡರೆ ದೇಶಕ್ಕೆ ಒಳ್ಳೆಯದು. ಇನ್ನು ಧನಿಕರಿಗೆ ವರ್ಷಕ್ಕೆ 12 ಹಾಗಿರಲಿ, 24 ಕೊಟ್ಟರೂ ಸಾಕಾಗುವುದಿಲ್ಲ. ಅವರ ಬೇಡಿಕೆ ಅಂತಹುದು. ಅದಕ್ಕೆ ಯಾರೂ ಏನೂ ಮಾಡಲಾಗದು. 

ನಾವು ಅನಿಲವನ್ನು ಮಾತ್ರ ಉಳಿಸಿದರೆ ಸಾಲದು, ವಿದ್ಯುತ್ ಉಳಿತಾಯವನ್ನೂ ನೋಡಬೇಕಾಗಿದೆ. ನಗರಗಳಲ್ಲಿ ಒತ್ತೊತ್ತಾಗಿ ಮನೆಗಳನ್ನು ಕಟ್ಟಿಕೊಂಡಿರುವುದರಿಂದ ಗಾಳಿ, ಬೆಳಕು ಎರಡೂ ಮನೆಯನ್ನು ಪ್ರವೇಶಿಸುವುದಿಲ್ಲ. ಹೀಗಾಗಿ ಹಗಲಿನಲ್ಲಿ ದೀಪವನ್ನೂ, ರಾತ್ರಿಯಲ್ಲಿ ಗಾಳಿಪಂಕವನ್ನೂ ವ್ಯರ್ಥವಾಗಿ ಉರಿಸಿ ವಿದ್ಯುತ್ ಪೋಲು ನಡೆಯುತ್ತಿದೆ. ಇಷ್ಟಾದರೂ ನಗರವಾಸಿಗಳಿಗೆ ವಿದ್ಯುತ್ ಪೂರೈಕೆ ಹೆಚ್ಚು.

ಹಳ್ಳಿಯಲ್ಲಿ ಧನಿಕರ ಕೂಲಿಗೆ ಆಳುಗಳು ಸಿಗುತ್ತಿಲ್ಲ ಅನ್ನೋದೇನೋ ನಿಜ. ಆದರೆ ಇದು ಅವರ ಸ್ವಯಂಕೃತಪರಾಧ. ಹಿಂದೆ ಆಳುಗಳು ಹೆಚ್ಚಾಗಿ ದೊರೆಯುತ್ತಿದ್ದ ಸಮಯದಲ್ಲಿ ಇವರು ಎಷ್ಟು ಕೂಲಿ ಕೊಡುತ್ತಿದ್ದರು ಎಂಬುದನ್ನು ಅವರು ಈಗ ನೆನಪು ಮಾಡಿಕೊಳ್ಳಬೇಕು. ಒಂದು ವೇಳೆ ಉತ್ತಮವಾದ ಕೂಲಿ ನೀಡಿದ್ದರೆ ಹಳ್ಳಿಯ ಜನರು ನಗರಗಳಿಗೆ ಇಷ್ಟೊಂದು ವಲಸೆ ಬರುತ್ತಿರಲಿಲ್ಲ. ಕೂಲಿ ನೀಡಿದರೂ ಸಹ ಯಾವುದೇ ಜೀವನದ ಭದ್ರತೆ ನೀಡಲು ಧನಿಕರು ಮುಂದಾಗಿಲ್ಲ. ಬಡವರು ಇರುವುದು ಕೂಲಿ ಮಾಡಲಿಕ್ಕೆ ಮಾತ್ರ, ಹಾಗೂ ಬಡವರು ಬಡವರಾಗಿಯೇ ಇರಬೇಕು ಅನ್ನೋದು ಧನಿಕರ ಭಾವನೆ. ಅದು ಈಗಲೂ ಬದಲಾಗಿಲ್ಲ ಅನ್ನೋದು ವಿಷಾಧಕರ. 

ತಲತಲಾಂತರದಿಂದ ಈ ರೀತಿ ಕಡಿಮೆ ಕೂಲಿ ನೀಡಿ ಬಡವರನ್ನು ವಂಚಿಸಿದೆ ಧನಿಕ ವರ್ಗ. ಈಗ ಸರ್ಕಾರದ ಕೂಲಿಗಾಗಿ ಕಾಳು ಯೋಜನೆಯಿಂದ ನಾಲ್ಕು ಕಾಸು ಮಾಡಿಕೊಳ್ಳುತ್ತಿದ್ದರೆ ಅದರ ಮೇಲೂ ವಕ್ರ ನೋಟ ಬೀರಿರುವಂತಿದೆ. ಅದನ್ನು ನಿಲ್ಲಿಸಿದರೆ ಅನಿವಾರ್ಯವಾಗಿ ಬಡವರು ತಮ್ಮ ಕೆಲಸಕ್ಕೆ ಬಂದೇ ಬರುತ್ತಾರೆ ಎಂಬ ದುರಾಲೋಚನೆ ಅವರದು. ಅದಕ್ಕಾಗಿ ಅಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಧನಿ ಎತ್ತಿದ್ದಾರೆ. ಅಕ್ರಮದ ಬಗ್ಗೆ ಧನಿ ಎತ್ತುವುದೇನೋ ಸರಿ, ಆದರೆ ಅದಕ್ಕಾಗಿ ಆ ಯೋಜನೆಯನ್ನೇ ನಿಲ್ಲಿಸಬೇಕು ಅನ್ನೋದು ಇವರ ಕ್ರೂರತನಕ್ಕೆ ಸಾಕ್ಷಿ.

ನಮ್ಮ ದೇಶದಲ್ಲಿ ಅಕ್ರಮ ಯಾವುದರಲ್ಲಿ ನಡೆಯುತ್ತಿಲ್ಲ ? ನೂರು ರೂಪಾಯಿಯ ಕೂಲಿಗಾಗಿ ಕಾಳುವಿನಿಂದ ಹಿಡಿದು ನೂರು ಕೋಟಿಯ ಬೃಹತ್ ಯೋಜನೆಯಾದರೂ ಸಹ ಅಕ್ರಮವಿಲ್ಲದೇ ನಡೆಯುತ್ತಿಲ್ಲ. ಕೂಲಿಗಾಗಿ ಕಾಳು ಯೋಜನೆಯಲ್ಲಿ ಹತ್ತಿಪ್ಪತ್ತು ರೂಪಯಿ ಮಧ್ಯವರ್ತಿಯ ಅಥವಾ ಗ್ರಾ.ಪಂ ಪಿಡಿಓ ಜೇಬು ಸೇರಿದರೆ ನೂರಾರು ಕೋಟಿ ಯೋಜನೆಗಳಲ್ಲಿ ಹತ್ತಿಪ್ಪತ್ತು ಕೋಟಿ ರಾಜಕಾರಣಿಗಳ, ಅಧಿಕಾರಿಗಳ ಬೊಕ್ಕಸಕ್ಕೆ ಹೋಗುತ್ತಿದೆ. ಸಾವಿರಾರು ಕೋಟಿಯ ಯೋಜನೆಗಳಲ್ಲಿ ನೂರಾರು ಕೋಟಿ ಅಕ್ರಮವಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ಬಡವರ ದುಡಿಮೆಗೂ ಇವರು ಕಲ್ಲು ಹಾಕಲು ತಯಾರಾಗಬೇಕೇ ?

ಕೂಲಿಗಾಗಿ ಕಾಳು ಯೋಜನೆಯಲ್ಲಿ ಅಷ್ಟಿಷ್ಟು ಅಕ್ರಮ ನಡೆದಿದ್ದರೂ ಸಹ ಅದು ಯಶಸ್ವಿಯಾಗಿದೆ. ಹಳ್ಳಿಗಳಲ್ಲಿ ಅನೇಕ ಕೆಲಸಗಳು ಇದರಿಂದ ನಡೆದಿವೆ. ಗ್ರಾ.ಪಂ. ಮಟ್ಟದಲ್ಲಿ ಹಲವಾರು ಕುಗ್ರಾಮಗಳ ರಸ್ತೆಯನ್ನು ಸರಿಪಡಿಸಿದ್ದಾರೆ. ಕೆರೆ ಕಟ್ಟೆಗಳನ್ನು ಅಭಿವೃದ್ದಿ ಮಾಡಲಾಗಿದೆ. ಬಂಜರು ಭೂಮಿಯಲ್ಲಿ ಗಿಡಗಳನ್ನು ನೆಡಲಾಗಿದೆ. ಇದೆಲ್ಲಾ ಈ ಯೋಜನೆಯಿಂದ ಆದ ಅನುಕೂಲವಲ್ಲವೇ ? ಮೇಲಾಗಿ ಬಡವರಿಗೆ ನೂರು ದಿನದ ಕೆಲಸ ದೊರೆತು ಅವರು ಕಷ್ಟಪಟ್ಟು ದುಡಿದು ಮೂರು ಹೊತ್ತು ನೆಮ್ಮದಿಯಗಿ ಉಣ್ಣುವಂತಾಗಿದೆ. ಅದಕ್ಕಿಂತಾ ಬೇರೇನು ಬೇಕು ? ಆದರೂ ಕೆಲವು ಧನಿಕರಿಗೆ ಬಡವರ ಅನ್ನದ ಮೇಲೇ ಕಣ್ಣು. ಬಡವರಿಗೆ ಹೊಟ್ಟೆ ತುಂಬ ಅನ್ನ ಸಿಕ್ಕರೆ ತಮ್ಮ ಹೊಲದ ಕೆಲಸ ಯಾರು ಮಾಡುವುದು? ಎಂಬ ಚಿಂತೆ ಅವರಿಗೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...

ದೈವಜ್ಞರು ತಂದಿಟ್ಟ ಪಜೀತಿ!

ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ. ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು. ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ. ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...