ವಿಷಯಕ್ಕೆ ಹೋಗಿ

ಕಾವೇರಿ ಕೊಳ್ಳ ಮತ್ತು ಕದೀಮ ಕಳ್ಳರು !

ಕಾವೇರಿ ಕೊಳ್ಳದ ಕದನ ಸಧ್ಯಕ್ಕೆ ಮುಗಿದು ಅನ್ನಿಸುತ್ತೆ. ಮುಗಿಸುವ ಯೋಚನೆಯೂ ನಮ್ಮ ಯಾವ ರಾಜಕಾರಣಿಗಳಿಗೂ ಇದ್ದಂತಿಲ್ಲ. ಎಲ್ಲರೂ ಕಾವೇರಿಯ ಈ ಬೆಂಕಿಯಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಹವಣಿಸುತ್ತಿರುವವರೆ. 

ಅಂದು ನಡೆದ ಪ್ರಧಾನಿಗಳ ಅಧ್ಯಕ್ಷತೆಯ ಕಾವೇರಿ ಪ್ರಾಧಿಕಾರದ ಸಬೆಯಲ್ಲಿ ಸಿಂಗ್ ನೀಡಿದ ಆದೇಶ ನಮ್ಮ ರಾಜ್ಯಕ್ಕೆ ಮಾರಕವಾಗಿತ್ತು. ಜಯಾ ಕೇಳಿದ್ದು ಪ್ರತಿ ದಿನ ೨ ಟಿಎಂಸಿ. ಸಿಂಗ್ ಬಿಡಲು ಹೇಳಿದ್ದು ದಿನವೂ ೯,೦೦೦ ಕ್ಯೂಸೆಕ್ ನೀರು. ಪರವಾಗಿಲ್ಲ, ೨ ಟಿಎಂಸಿ ಕೇಳಿದರೆ ಕೇವಲ ೯,೦೦೦ ಕ್ಯೂಸೆಕ್ ನೀಡಲು ಹೇಳಿ ಕರ್ನಾಟಕದ ಕಡೆಗೇ ನ್ಯಾಯ ಒದಗಿಸಿದ್ದಾರೆ ಅನ್ನುವಂತಿಲ್ಲ. ಏಕೆಂದರೆ ಜಯಾ ಇಲ್ಲಿ ಮಹಾನ್ ನಾಟಕವಾಡಿದ್ದಾಳೆ. ಅದಕ್ಕೆ ಕಾಂಗ್ರೆಸ್ ಸಹ ಕೈ ಜೋಡಿಸಿದೆ ಎಂಬುದರಲ್ಲಿ ಅನುಮಾನವಿಲ್ಲ. ಅವಳಿಗೆ ಸಧ್ಯಕ್ಕೆ ನೀರಿನ ಅವಶ್ಯಕತೆಯೇ ಇಲ್ಲ. ಈಗಾಗಲೇ ರಾಜ್ಯದಿಂದ ಸಾಕಷ್ಟು ನೀರು ಹೋಗಿ ಮರಟ್ಟೂರು ಅಣೆ ತುಂಬಿಸಿದೆ. ತಮಿಳುನಾಡಿನಲ್ಲಿ ಹಿಂಗಾರು ಮಳೆಯೇ ಹೆಚ್ಚು. ಅದು ಇನ್ನೂ ಬಂದೇ ಇಲ್ಲ. ಅದು ಬರುವ ಸಮಯಕ್ಕೆ ಬೇಕಾದಷ್ಟು ನೀರು ಸಿಕ್ಕಿ ಅದು ಹೆಚ್ಚಾಗಿ ಸಮುದ್ರವನ್ನೂ ಸೇರುತ್ತದೆ. ಆದರೂ ಅವಳಿಗೆ ಕರ್ನಾಟಕದ ಮೂರ್ಖ ರಾಜಕಾರಣಿಗಳನ್ನು ಆಟ ಆಡಿಸುವ ಚಟ. ಆದುದರಿಂದಲೇ ಆಕೆ ದಿನವೂ ೨ ಟಿಎಂಸಿ ನೀರು ಬೇಕು ಎಂದು ಕೇಳಿದ್ದು.  

ಕಾವೇರಿ ವಿಷಯದಲ್ಲಿ ಕರ್ನಾಟಕದ ರಾಜಕಾರಣಿಗಳು ಸರಿಯಾಗಿ ವ್ಯವಹಾರ ನಡೆಸಲ್ಲ ಅನ್ನೊದು ಲಗಾಯ್ತಿನಿಂದಲೂ ತಿಳಿದು ಬಂದಿರುವ ವಿಷಯ. ಅದರಲ್ಲಿ ಹೊಸದೇನೂ ಇಲ್ಲ. ಅದರಲ್ಲೂ ಆಂತರಿಕ ಕಚ್ಚಾಟದಲ್ಲೇ ಮುಳುಗಿರುವ ಬಿಜೆಪಿಗೆ ಇತ್ತ ಗಮನ ಹರಿಸಲು ಸಮಯವೂ ಇಲ್ಲ. ಕಾವೇರಿ ಕದನ ಶುರುವಾಗಿ ೨೫ ದಿನ ಕಳೆದರೂ ಪರಮ ಪ್ರಾಮಾಣಿಕ ಕಾನೂನು ಮಂತ್ರಿ ಕಾಣೆಯಾಗಿದ್ದಾರೆ ಎಂದರೆ ಈ ಸರ್ಕಾರಕ್ಕೆ ಅದೆಂತಹ ದರಿದ್ರ ಬಡಿದಿದೆ ಅನ್ನೋದು ತಿಳಿಯುತ್ತೆ. ಈ ನಾಲಾಯಕ್ ಸುರೇಶ್ ಕುಮಾರ‍್ ಅಂದಿನ ಪ್ರಧಾನಿಗಳ ಸಭೆಗೂ ಹೋಗಿರಲಿಲ್ಲ. ಇವರು ಹಾಗಿರಲಿ ನ್ಯಾಯಾಲಯಕ್ಕೆ ರಾಜ್ಯದ ಪರ ಮುಖ್ಯ ನ್ಯಾಯವಾದಿ ನಾರಿಮನ್ ಅವರನ್ನೇ ಕಳಿಸಲಿಲ್ಲ ಅಂದರೆ ಇವರ ಬೇಜವಾಬ್ದಾರಿ ಎಷ್ಟು ಅನ್ನೋದನ್ನು ಅರಿಯಬಹುದು. ಮೈಸೂರು ಮಂಡ್ಯ ಹೊತ್ತಿ ಉರಿಯುತ್ತಿದ್ದರೂ ಈ ಮನುಷ್ಯ ಒಂದು ಹೇಳಿಕೆ ನೀಡಿದ್ದೂ ಸಹ ಎಲ್ಲೂ ಕಂಡು ಬರಲಿಲ್ಲ. ಕಡೇ ಪಕ್ಷ ಬದುಕಿದ್ದಾರೋ ಇಲ್ಲವೋ ಅನ್ನೋದೂ ಸಹ ಸಂದೇಹ ! 

ರಾಜ್ಯದ ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಪ್ರಧಾನಿ ಮುಂದೆ ಮತ್ತು ನ್ಯಾಯಾಲಯದ ಮುಂದೆ ಮಂಡಿಸಲು ಸೋತ ಬಿಜೆಪಿ ಸರ್ಕಾರ ಈಗ ಅದನ್ನು ಪ್ರಧಾನಿಯ ಮೇಲೇ ಅಪವಾದ ಹೊರಿಸಿ ತಾನು ನುಣುಚಿಕೊಳ್ಳಲು ಪ್ರಯತ್ನ ನಡೆಸಿದೆ. ಅತ್ತ ಕಾಂಗ್ರೆಸ್ ಕೇಂದ್ರ ಸಚಿವರುಗಳು ಇದುವರೆಗೂ ತುಟಿ ಪಿಟಕ್ ಅನ್ನುತ್ತಿಲ್ಲ. ರಾಜ್ಯದ ಕಾಂಗ್ರೆಸ್ಸಿಗರು ರಾಜ್ಯ ಸರ್ಕಾರದ ಪ್ರಮಾದವನ್ನು ಎತ್ತಿ ತೋರಿಸಿ ತಾವು ಬಚಾವಾಗಲು ಪ್ರಯತ್ನಿಸಿದ್ದಾರೆ. ಇನ್ನು ಉಳಿದ ಜೆಡಿಎಸ್ ಉರಿವ ಮನೆಯಲ್ಲಿ ಗಳ ಹಿರಿದಂತೆ ತನ್ನ ರಾಜಕೀಯ ಲಾಭವನ್ನು ಹುಡುಕಿಕೊಂಡಿದೆ. 

ಸಂದರ್ಶನವೊಂದರಲ್ಲಿ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ‍್ ಹೇಳಿದ್ದು, "ಎರಡೂ ರಾಜ್ಯಗಳ ರೈತರು ಸಂಧಾನ ನಡೆಸಿ ಇಬ್ಬರೂ ಸೌಹಾರ್ದಯುತವಾಗಿ ನೀರು ಹಂಚಿಕೊಳ್ಳಲು ಮಾತುಕತೆ ನಡೆದು ಅದು ಯಶಸ್ವಿ ಆಗಿತ್ತು. ತಮಿಳುನಾಡು ರೈತರೂ ಸಹ ರಾಜ್ಯಕ್ಕೆ ಇನ್ನಷ್ಟು ನೀರು ಬಿಟ್ಟು ಕೊಡಲು ತಯಾರಾಗಿದ್ದರು. ಅದೇ ಸಮಯಕ್ಕೆ ವಕ್ಕರಿಸಿದ ಜಯಲಲಿತಾ ಕುತಂತ್ರ ಮಾಡಿ ಎಲ್ಲಾ ಹಾಳಾಯ್ತು." ಅಂದರೆ ಈ ಸಮಸ್ಯೆ ಬಗೆ ಹರಿಯುವುದು ರಾಜಕಾರಣಿಗಳಿಗೆ ಬೇಕಾಗಿಲ್ಲ. ಇದನ್ನು ಜಯಾ ಮೇಲೆ ಮಾತ್ರ ಹೇಳಲಗದು. ನಮ್ಮ ರಾಜ್ಯದ ರಾಜಕಾರಣಿಗಳಿಗೂ ತಮ್ಮ ಅಸ್ತತ್ವಕ್ಕಾಗಿ ಕಾವೇರಿ ಸಮಸ್ಯೆ ಇರಲೇ ಬೇಕಾಗಿದೆ. ಇದು ದುರ್ದೈವ!

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...

ದೈವಜ್ಞರು ತಂದಿಟ್ಟ ಪಜೀತಿ!

ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ. ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು. ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ. ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...