ವಿಷಯಕ್ಕೆ ಹೋಗಿ

ತಮಿಳರಿಗೆ ಡಬಲ್ ಧಮಾಕ !

ನಿನ್ನೆ ಚೆನ್ನೈಯಿಂದ ಲಾಲ್‌ಬಾಗ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಮರಳುತ್ತಿದ್ದೆ. ಟಿಕೇಟು ಕಾಯ್ದಿರಿಸಿರದಿದ್ದ ಕಾರಣ ಸಾಮಾನ್ಯ ಬೋಗಿಯಲ್ಲೇ ಹತ್ತಿದ್ದೆ. ಅದು ಹೆಸರಿಗೆ ಮಾತ್ರ ಎಕ್ಸ್‌ಪ್ರೆಸ್, ಆದರೆ ಬಹುತೇಕ ಎಲ್ಲಾ ನಿಲ್ದಾಣಗಳಲ್ಲೂ ನಿಲ್ಲುತ್ತೆ. ಚೆನ್ನೈ ನಂತರದ ಒಂದು ನಿಲ್ದಾಣದಲ್ಲಿ ಕೆಲವರು ಅಕ್ಕಿ ಮೂಟೆಗಳನ್ನು ಹೇರಿದರು. ಮೂರ್ನಾಲ್ಕು ನಿಲ್ದಾಣಗಳ ನಂತರ ಒಂದು ನಿಲ್ದಾಣದಲ್ಲಿ ಬಂದ ರೈಲ್ವೇ ಪೊಲೀಸರು ಅವುಗಳನ್ನು ವಶಪಡಿಸಿಕೊಂಡರು. ಆಗ ಮೂಟೆಗಳ ವಾರಸುದಾರರು ಯಾರೂ ಮುಂದೆ ಬರಲಿಲ್ಲ.

ರೈಲು ಅಲ್ಲಿಂದ ಹೊರಟ ನಂತರ ಮೂಟೆಗಳನ್ನು ತಂದಿದ್ದವರು 'ಅಷ್ಟು ಕೆ.ಜಿ. ಅಕ್ಕಿ ಇತ್ತು, ಇಷ್ಟು ಕೆ.ಜಿ. ಅಕ್ಕಿ ಇತ್ತು' ಎಂದು ತಮ್ಮ ಅಳಲು ತೋಡಿಕೊಂಡರು. ಆದರೆ ಯಾರ ಮುಖದಲ್ಲೂ ಅಕ್ಕಿ ಹೋದುದರ ದುಃಖ ಕಿಂಚಿತ್ತೂ ಇರದಿದ್ದುದನ್ನು ಕಂಡು ಆಶ್ಚರ್ಯವಾಯ್ತು. ನಂತರ ಅಕ್ಕಪಕ್ಕದವರನ್ನು ವಿಚಾರಿಸಿದೆ. ಆಗ ತಿಳಿದು ಬಂದ ವಿಷಯವೇ ಬೇರೆ.

ಅದೇನೆಂದರೆ ತಮಿಳುನಾಡಿನಲ್ಲಿ ಕರುಣಾನಿಧಿ ಮತ್ತು ಜಯಲಲಿತ ಪೈಪೋಟಿಯಲ್ಲಿ ಮತಬ್ಯಾಂಕ್ ರಾಜಕಾರಣ ಮಾಡಿದ್ದಾರೆ. ಅವುಗಳ ಅಂಗವಾಗಿ ಮನೆ ಮನೆಗೆ ಟಿವಿ, ಮಿಕ್ಸಿ, ಸೀರೆ ಮುಂತಾದ ವಸ್ತುಗಳು ಬಂದಿವೆ. ಜೊತೆಗೆ ಪಡಿತರ ಕಾರ್ಡುದಾರರಿಗೆ ತಿಂಗಳಿಗೆ ೨೦ ಕಿಲೋ ಅಕ್ಕಿ ಉಚಿತ! ಹಲವರು ಒಂದೇ ಕುಟುಂಬಕ್ಕೆ ನಾಲ್ಕೈದು ಕಾರ್ಡು ಹೊಂದಿದ್ದು ಉಚಿತವಾಗಿ ಸಿಗುವ ಕ್ವಿಂಟಾಲ್‌ಗಟ್ಟಲೇ ಅಕ್ಕಿಯನ್ನು ಬೆಂಗಳೂರು ಮುಂತಾದೆಡೆ ತಂದು ಒಳ್ಳೆಯ ಬೆಲೆಗೆ ಮಾರುತ್ತಾರೆ. ಇದು ಅವ್ಯಾಹತವಾಗಿ ನಡೆಯುತ್ತಿದೆ. ರೈಲ್ವೇ ಪೊಲೀಸರು ಆಗಾಗ ವಶಪಡಿಸಿಕೊಂಡರೂ ಸಹ ಕಳೆದುಕೊಂಡವರಿಗೆ ನೋವಿಲ್ಲ... ಕಳೆದುಕೊಂಡಿದ್ದು ಏನೂ ಇಲ್ಲ.. ಏಕೆಂದರೆ ಅದು ಉಚಿತವಾಗಿ ಸಿಕ್ಕಿದ್ದು !

ಕರ್ನಾಟಕದಲ್ಲಿ ವಾಸಿಸುವ ಬಹುತೇಕ ತಮಿಳರು ಅವರ ರಾಜ್ಯದಲ್ಲಿ ಪಡಿತರ ಚೀಟಿ, ಮತದಾರರ ಕಾರ್ಡುಗಳನ್ನು ಹಾಗೆಯೇ ಉಳಿಸಿಕೊಂಡಿದ್ದು ತಿಂಗಳು ತಿಂಗಳೂ ಹೋಗಿ ಅಲ್ಲಿನ ಉಚಿತ ಅಕ್ಕಿ ಪಡೆದು ಇಲ್ಲಿಗೆ ತರುತ್ತಾರೆ. ಕರ್ನಾಟಕ ಸರ್ಕಾರದ ಕದೀಮ ರಾಜಕಾರಣಿಗಳು, ಕಾರ್ಪೋರೇಟರುಗಳು ಇಲ್ಲೂ ಅವರಿಗೆ ಪಡಿತರ ಚೀಟಿ ನೀಡಿದ್ದಾರೆ. ಒಟ್ಟಿನಲ್ಲಿ ತಮಿಳರಿಗೆ ಡಬಲ್ ಧಮಾಕ !

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...