ಕೊನೆಗೂ ಆಹುಡುಗಿ ಬದುಕಲೇ ಇಲ್ಲ, ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾದ ನಿರ್ಭಯ ದಾಮಿನಿ ಕೊನೆಗೂ ಸಾವನ್ನಪ್ಪಿದ್ದಾಳೆ. ಆದರೆ ಆಕೆಯನ್ನು ಬರ್ಭರವಾಗಿ ಅತ್ಯಾಚಾರವೆಸಗಿ ವಿಕೃತ ಆನಂದ ಪಟ್ಟ ಕದೀಮರು ಜೈಲಲ್ಲಿ ಆರಾಮಾಗಿದ್ದಾರೆ. ಇನ್ನು ನ್ಯಾಯಾಲಯದ ವಿಚಾರಣೆ ಅದೆಷ್ಟು ದಿನ ಎಳೆದಾಡುತ್ತೋ ? ಎಷ್ಟು ಜನರಿಗೆ ಘನ ನ್ಯಾಯಾಲಯ ಜಾಮೀನು ಕೊಟ್ಟು ಕಳಿಸುತ್ತೋ ? ಶಿಕ್ಷೆಯಾದರೂ ಅದೆಷ್ಟು ವರ್ಷ ಜೈಲಲ್ಲಿದ್ದಾರು ? ಈಗ ಭಾರತದ ಜೈಲಲ್ಲಿರುವುದು ಶಿಕ್ಷೆ ಅಂತ ಯಾರು ಹೇಳುತ್ತಾರೆ ? ಹೆಚ್ಚೆಂದರೆ ಜೀವಾವಧಿ ಶಿಕ್ಷೆಯಾಗಬಹುದು. ಎಂಟತ್ತು ವರ್ಷ ಜೈಲಲ್ಲಿದ್ದು ಹೊರ ಬಂದರೆ ಮುಗಿಯಿತು. ಮತ್ತೆ ಆರಾಮಾಗಿ ಜೀವನ ಕಳೆಯಬಹುದು. ಸತ್ತವಳು ಹೋದಳು ಅಷ್ಟೇ ಎಂದು ನಾವೂ ಸುಮ್ಮನಾಗುತ್ತೇವೆ. ಇದು ಮೊದಲಲ್ಲ, ಎಲ್ಲಾ ಕೆಟ್ಟ ಘಟನೆಗಳಂತೆಯೇ ಇದು ಕೊನೆಯಾಗುವುದೂ ಇಲ್ಲ. ಮತ್ತೆ ಮತ್ತೆ ಅತ್ಯಾಚಾರಗಳು, ಕೊಲೆಗಳು ನಡೆಯುತ್ತಲೇ ಇರುತ್ತವೆ. ನಾವು ಟಿವಿಯಲ್ಲಿ, ಪತ್ರಿಕೆಯಲ್ಲಿ ಸುದ್ದಿ ನೋಡಿ ಸುಮ್ಮನಗುತ್ತೇವೆ. ಬಿಡು, ನಮ್ಮೆನೆ ಹುಡುಗಿ ಅಲ್ಲವಲ್ಲ ಅಂದುಕೊಳ್ಳುವವರೆ ಹೆಚ್ಚು. ಆದರೆ ಇದೇ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದ್ದರೆ ? ಅಪರಾಧಿಗಳನ್ನು ಇಷ್ಟರಲ್ಲೇ ಬೀದಿಯಲ್ಲಿ ನಿಲ್ಲಿಸಿ ಕಲ್ಲು ಹೊಡೆದು ಸಾಯಿಸಿರುತ್ತಿದ್ದರು... ಆದರೆ ಇದು ಭಾರತ... ನಾವು ಎಲ್ಲವನ್ನೂ ಸಹಿಸಿಕೊಳ್ಳುವಂತಹವರು. ನಮ್ಮಲ್ಲಿ ಶಿಕ್ಷೆ ಆಗುವುದಾದರೂ ಹೇಗೆ ? ನಮ್ಮ ರಾಜಕಾರಣಿಗಳೇ ಹಲವರು ಅತ್ಯಾಚಾರವೆಸಗಿ ಅ
ಮನಸು ಹೃದಯಗಳ ಸವಿಮಾತು............