ವಿಷಯಕ್ಕೆ ಹೋಗಿ

ಓವೈಸಿ ಎಂಬಂತಹ ಅತೃಪ್ತ ಆತ್ಮಗಳ ಬಗ್ಗೆ...


"ಹದಿನೈದು ನಿಮಿಷ ಪೊಲೀಸರು ಸುಮ್ಮನಾಗಲಿ, ನಮ್ಮ ಹದಿನೈದು ಕೋಟಿ ಮುಸ್ಲಿಮರು ಹೇಗೆ ನೂರು ಕೋಟಿ ಹಿಂದುಗಳನ್ನು ಹೊಸಕಿ ಹಾಕುತ್ತಾರೆ ಎಂದು ನೋಡುತ್ತೀರಿ" ಎಂದು ಪರಮ ಅಪದ್ಧಕಾರಿಯಾಗಿ ಹಾಗೂ ಅಷ್ಟೇ ಆತಂಕಕಾರಿಯಾಗಿ ಹೇಳಿದವನು ಯಾರೋ ಭಯೋತ್ಪಾದಕರ ನಾಯಕನೋ ಅತವಾ ತಲೆ ಕೆಟ್ಟ ಮುಲ್ಲಾನೋ ಅಲ್ಲ. ಈತನೊಬ್ಬ ಜನ ನಾಯಕ ಹಾಗೂ ಈ ದೇಶದ ಸಂವಿಧಾನದ ಮೂಲಕ ಆರಿಸಿ ಬಂದಂತಹ ಶಾಸಕ ಕೂಡಾ. ಇಂತಹವನ ಬಾಯಿಂದ ಇಂತಹ ಆಣಿಮುತ್ತುಗಳು ಉದುರಿದ್ದು ಕಂಡು ಒಂದಿಷ್ಟು ಅಪ್ರಬುದ್ಧ ಮುಸ್ಲಿಂ ಜೀವಗಳು ಕೈ ತಟ್ಟಿ ಖುಷಿ ಪಟ್ಟಿರಲಿಕ್ಕೂ ಸಾಕು, ಹಾಗೆಯೇ ಹಿಂದುಗಳೋಳಗೆ ಸಾವಿರ ತೂತುಗಳಿದ್ದರೂ ಹಿಂದುಸ್ಥಾನ ಕಟ್ಟುತ್ತೇವೆಂದು ಬೊಗಳೆ ಬಿಡುತ್ತಾ ಕೆಳವರ್ಗದವರನ್ನು ಎಂಜಲೆಲೆ ಮೇಲೆ ಉರುಳಿಸಿ ಕುಷಿ ಪಡುವ ಹಲವು ಹಿಂದೂ ಮಹಾನುಭಾವರು "ಹೋ..." ಎಂದು ಹೋರಾಟಕ್ಕೆ ಅಣಿಯಾಗಿರಬಹುದು.

ಓವೈಸಿಯಂತಹವರನ್ನು ಕೇವಲ ಧರ್ಮಾಂಧರು ಅನ್ನಲು ಸಾಧ್ಯವಿಲ್ಲ. ಎಕೆಂದರೆ ಎಷ್ಟೇ ಧರ್ಮಾಂಧನಾಗಿದ್ದರೂ ಸಹ ಕನಿಷ್ಟ ಜ್ಞಾನವಿರುವ ಎಂತಹವನಿಗಾದರೂ ತಿಳಿದಿರುವ ವಿಷಯ ಸಾವಿರಾರು ವರ್ಷಗಳಿಂದ ಸಾಧ್ಯವಾಗದಿರುವ ಹಿಂದುಗಳ ನಿರ್ನಾಮ ಹದಿನೈದು ನಿಮಿಷಗಳಲ್ಲಿ ಸಾಧ್ಯವಿಲ್ಲ ಎಂಬುದು. ವಾಸ್ತವವಾಗಿ ಹದಿನೈದು ನಿಮಿಷವಲ್ಲ, ಹದಿನೈದು ವರ್ಷ ಪೊಲೀಸರಿಲ್ಲದಿದ್ದರೂ ಸಹ ಓವೈಸಿಯಂತಹ ಮತಿಗೇಡಿಗಳ ಬಯಕೆ ನೆರವೇರದು. ಇಂತಹವರಿಂದ ಹೆಚ್ಚೆಂದರೆ ದೊಡ್ಡದೊಂದು ರಕ್ತಪಾತವನ್ನು ನಡೆಸಲು ಸಾಧ್ಯವಾಗಬಹುದಷ್ಟೇ. ಅಲ್ಲ, ಹದಿನೈದು ಕೋಟಿ ಮುಸ್ಲಿಮರು ಮೇಲೆರಗುವಾಗ ನೂರು ಕೋಟಿ ಹಿಂದುಗಳು ಕೈ ಕಟ್ಟಿ ಕುಳಿತಿರುತ್ತಾರೆಯೇ ? ಇವರ ಜೊತೆ ಪಾಕಿಸ್ತಾನದ ಇನ್ನಷ್ಟು ಕೋಟಿ ಜನ ಮುಸ್ಲಿಮರು ಸೇರಿ ಬಂದರು ಇವರ ಬಯಕೆ ನೆರವೇರದು. ಇಷ್ಟಕ್ಕೂ ಇವನು ಹೇಳಿದ ಅಂತ ಹಿಂದುಗಳ ಮೇಲೆರಗಲು ಇರುವ ಎಲ್ಲಾ ಮುಸ್ಲಿಮರೂ ಇವನಂತೆಯೇ ಧರ್ಮಾಂಧರೆ ? ಹಾಗೆನಾದರೂ ಆಗಿದ್ದರೆ ಹದಿನೈದು ನಿಮಿಷವಲ್ಲ, ಹದಿನೈದು ಗಂಟೆಗಳವರೆಗೇ ಪೊಲೀಸರನ್ನ ನಿಷ್ಕ್ರಿಯಗೊಳಿಸಿ ನೋಡೇ ಬಿಡೋಣ!

ಬಹುಶಃ ಅಂತಹುದೊಂದು ಸಂದರ್ಭ ಬಂದರೆ ಓವೈಸಿಯಂತಹ ಹೇತ್ಲಾಂಡಿಯನ್ನು ಸ್ವತಃ ಮುಸ್ಲಿಮರೇ ಟಾರ್ಚು ಹಾಕಿ ಹುಡುಕಬೇಕಾದೀತು. ಏಕೆಂದರೆ ಇಂತಹವರಿಗೆ ಮುನ್ನುಗ್ಗಿ ಹೋರಾಡುವ ಸ್ಥೈರ್ಯ ಕಂಡಿತಾ ಇರುವುದಿಲ್ಲ. ಕೇವಲ ಹೇಳಿಕೆ ಕೊಟ್ಟು ಒಂದಿಷ್ಟು ಮುಸ್ಲಿಮರನ್ನು ಎತ್ತಿ ಕಟ್ಟಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾ ಜೀವನ ಸಾಗಿಸುವುದು ಇವರ ಗುರಿ. ಅಕಸ್ಮಾತ್ ಇವರು ಅಂತಹುದೊಂದು ಹೋರಾಟಕ್ಕೆ ಹೊರಟರೂ ಸಹ ಇವರಿಗೆ ಸಮಸ್ತ ಮುಸ್ಲಿಮರ ಬೆಂಬಲವೂ ದಕ್ಕುವುದಿಲ್ಲ. ಮುಸ್ಲಿಮರಿಗೂ ಹೊಟ್ಟೆಪಾಡು, ಜೀವನ, ಕುಟುಂಬ ಎಲ್ಲಾ ಇದೆ. ಎಲ್ಲೋ ಕೆಲವು ಪಟ್ಟೆಗಳು ಇಂತಹವನ ಹಿಂಬಾಲಕರಾಗಿ ನಡೆದಾಡಬಹುದು. 

ಆದರೂ ಇಂತಹ ಸುದ್ದಿ ಶಿಖಂಡಿಗಳನ್ನು ಹಾಗೆಯೇ ಬಿಡಬಾರದು. ಎರಡು ಧರ್ಮಗಳ ಜನರೊಳಗೆ ಅಂತಃಕಲಹ ಉಂಟು ಮಾಡುವ ಕೃತ್ಯಗಳನ್ನೂ ಸಹ ದೇಶದ್ರೋಹವೆಂದೇ ಪರಿಗಣಿಸಿ ಕಠಿಣ ಶಿಕ್ಷೆಯನ್ನು ಈತನಿಗೆ ನೀಡಬೇಕು. ಮೊದಲಿಗೆ ಈತನ ಶಾಸಕತ್ವವನ್ನು ಹಿಂಪಡೆದು ಜೈಲಿಗೆ ತಳ್ಳಬೇಕಾದುದು ಮೊದಲಿನ ಕೆಲಸವಾಗಿದೆ. ಇವರೆಲ್ಲಾ ದೇಶದ ಸುಭದ್ರತೆಗೆ ಸದಾ ಧಕ್ಕೆ ತರುವ ಕ್ರಿಮಿಗಳು. ಇವರನ್ನು ಹೊಸಕಿ ಹಾಕೆದೇ ಹೋದರೆ ತೊಂದರೆ ಕಟ್ಟಿಟ್ಟ ಬುತ್ತಿ. ರಕ್ತದೊಳಗಿನ ಕ್ಯಾನ್ಸರ‍್ ರೋಗಾಣುವಿನಂತೆ ನಮ್ಮೊಳಗೇ ಇದ್ದು ಒಂದಲ್ಲಾ ಒಂದು ದಿನ ತಮ್ಮದೇ ಒಂದು ಪಡೆ ಕಟ್ಟಿಕೊಂಡು ದೊಡ್ಡ ಗಾಯ ಮಾಡಲು ತಯಾರಾಗಬಹುದು. ಹಾಗಾಗಿ ಇವನಿಗೆ ಕೂಡಲೆ ಶಿಕ್ಷೆಯಾಗಲಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಕಾರ್ಗಿಲ್ ಕಥೆ : ಸೈನಿಕನೆಂದರೆ

"ನಿನಗೇನಾದರೂ ಪೆಟ್ಟಾಯಿತೆ?" ಎಂದು ಕೇಳಿದನು ಮಹರ್ಷಿ. ನಾನು ನನ್ನ ಕೈ ಮೈಯನ್ನು ನೋಡಿಕೊಂಡೆ. ಮುಂಗೈಗೆ ಒಂದು ಮೊನಚು ಕಲ್ಲು ಹೊಡೆದು ಅರ್ಧ ಇಂಚಿನಷ್ಟು ಅಳಕ್ಕೆ ಗಾಯವಾಗಿತ್ತು. ರಕ್ತದ ಹನಿಗಳು ಪಟಪಟನೆ ಸುರಿಯುತ್ತಿದ್ದವು. ಅದನ್ನು ಕಂಡ ಅವನು  ತನ್ನಲ್ಲಿದ್ದ ಹತ್ತಿಯನ್ನು ಗಾಯದ ಮೇಲಿಟ್ಟು ಕರವಸ್ತ್ರದಿಂದ ಗಟ್ಟಿಯಾಗಿ ಕಟ್ಟು ಹಾಕಿದನು. ಮತ್ತೆ ನಮ್ಮ ನಮ್ಮ ಬಂದೂಕುಗಳನ್ನು ಎತ್ತಿಕೊಂಡೆವು! ಶತ್ರು ಪಡೆಗಳ ಸೆಲ್‌ಗಳೂ ಅವರ ಗನ್‌ಗಳ ಗುಂಡುಗಳೂ ಅಲ್ಲಲ್ಲಿ ಬಿದ್ದು ಸಿಡಿಯುತ್ತಿದ್ದವು. ನಾವಿಬ್ಬರೂ ಈಗ ಆ ದೊಡ್ಡ ಬಂಡೆಯ ಹಿಂದೆ ರಕ್ಷಣೆ ಪಡೆದಿದ್ದೆವು. ಮತ್ತೆ ಕೇಳಿದನು ಮಹರ್ಷಿ...... ``ಈಗೇನು ಮಾಡೋಣ?" ``ಇರು... ನಮ್ಮವರು ಬಂದು ನಮ್ಮನ್ನು ಸೇರಿಕೊಳ್ಳಲಿ. ಇದೀಗ ನಾವು ಆಯಕಟ್ಟಿನ ಸ್ಥಳಕ್ಕೆ ಬಂದಾಗಿದೆ... ಇನ್ನೇನಿದ್ದರೂ ಮುಖಾಮುಖಿ" ಎಂದೆ. ``ಇದು ನಮಗೆ ಎಷ್ಟನೇ ಮುಖಾಮುಖಿ? ಅವನ ಬೆನ್ನು ತಟ್ಟಿ ಹೇಳಿದೆ ``ಮೂರನೆಯದು" ``ಈ ಕುನ್ನಿಗಳಿಂದ ನಮ್ಮನ್ನೇನು ಮಾಡಲು ಸಾಧ್ಯವಿಲ್ಲ ಅಲ್ಲವಾ?" ಎನ್ನುತ್ತ ಅವನು ನನ್ನ ಕೈ ಕುಲಕಿದ್ದನು. ಆದರೆ ನನ್ನ ಮನಸ್ಸು ಮಾತ್ರ ಹಿಂದೆ ಓಡುತ್ತಿತ್ತು. *  *  *  ಒಂದೇ ಊರಿನಲ್ಲಿ ಹುಟ್ಟಿ ಬೆಳೆದ ನಮಗೆ ಊರಿನ ಜನರಲ್ಲಿ ಗೆಳೆಯರು ಎಂಬುದಕ್ಕಿಂತ ಅಣ್ಣ ತಮ್ಮಂದಿರೆಂಬ ಪರ್ಯಾಯ ಸಂಬಂಧವಿತ್ತು. ``ಮನು ಮಹರ್ಷಿಯರು ಅಗಲಿದ್ದುದನ್ನು ನಾವೆಂದೂ ನೋಡೇ ಇಲ್ಲ" ಎಂದು ಊರ ಜ...