ವಿಷಯಕ್ಕೆ ಹೋಗಿ

ಅಲ್ಲಾ ಕೊಟ್ಟರೂ ಮುಲ್ಲಾ ಬಿಡ !


ತಮಿಳುನಾಡಿನ ಕುತಂತ್ರಿಗಳು ಕಮಲಹಾಸನರ "ವಿಶ್ವರೂಪಂ" ಚಿತ್ರಕ್ಕೂ ಕೊಕ್ಕೆ ಹಾಕಿ ಕೇಕೆ ಹಾಕಿದ್ದಾರೆ. ಅದು ಭಯೋತ್ಪಾದನೆಯ ವಿಷಯವನ್ನು ಒಳಗೊಂಡಿದೆ ಅನ್ನುವುದು ಕುಮಾರಿ (?!) ಜಯಲಲಿತ ಸರ್ಕಾರ ನೀಡಿರುವ ಕಾರಣವಾದರೂ ಅದರ ಹಿಂದಿನ ನಿಗೂಢ ವಿಷಯಗಳು ಬೇರೆಯೇ ಇವೆ. 

ಭಯೋತ್ಪಾದನೆಯ ವಿಷಯವಿರುವುದಕ್ಕೂ ಮುಸ್ಲಿಮರಿಗೂ ಏನು ಸಂಬಂಧ ? ದೇಶದಲ್ಲಿ ಅಷ್ಟೇ ಅಲ್ಲದೇ ಪ್ರಪಂಚದಲ್ಲೆಲ್ಲಾ ಭಯೋತ್ಪಾದನೆ ಹರಡಿರುವುದು ಸುಳ್ಳೇ ? ತಮಿಳು ಭಯೋತ್ಪಾದನೆ ಈ ಕುಮರಿಯನ್ನೇ ಉಡಾಯಿಸುವಷ್ಟು ಬೆಳೆದಿದ್ದರಿಂದಲೇ ಅಲ್ಲವೇ ಈಕೆ ಝಡ್ + ಕಾವಲು ಹಾಕಿಸಿಕೊಂಡಿದ್ದು? 

ವಿಶ್ವರೂಪಂ ಚಿತ್ರವು ತಯಾರಾಗುತ್ತಲೇ ಕಮಲ್ ಒಂದು ವಿವಾದವನ್ನು ಮೈಮೇಲೆಳೆದುಕೊಂಡಿದ್ದರು. ಅದು ಹಂಚಿಕೆ ವಿವಾದ. ಏರ್‌ಟೆಲ್ ನವರಿಗೆ ಚಿತ್ರದ ಸ್ಯಾಟಲೈಟ್ ಬಿತ್ತರಣೆ ಹಕ್ಕನ್ನು ಮಾರಿಕೊಂಡಿದ್ದು ತಮಿಳುನಾಡಿನ ಚಿತ್ರ ವಿತರಕರ ಕಣ್ಣು ಕೆಂಪಾಗಿಸಿತ್ತು. ಆದರೆ ಅವರಿಗೆ ಕಮಲ್ ಬಗ್ಗಿರಲಿಲ್ಲ. ಆದನ್ನೇ ನೆಪವಾಗಿಟ್ಟುಕೊಂಡ ವಿತರಕ ಮಹಾಷಯರು ಈಗ ಜಯಾ ಮೂಲಕ ಮುಸ್ಲಿಮರ ಭಾವನೆಗೆ ಧಕ್ಕೆಯಾಗುತ್ತದೆ ಎಂಬ ಕಪೋಲಕಲ್ಪಿತ ವದಂತಿಯನ್ನು ಹರಿಯ ಬಿಟ್ಟು ಚಿತ್ರ ಬಿಡುಗಡೆಯನ್ನು ಮುಂದೂಡಿದ್ದಾರೆ. ಮುಸ್ಲಿಂ ಮತಗಳ ಬೇಟೆಯ ಚಿಕ್ಕ ಅವಕಾಶವನ್ನೂ ಕಳೆದುಕೊಳ್ಳಲಿಚ್ಚಿಸದ ಲಜ್ಜೆಗೆಟ್ಟ ರಾಜಕಾರಣಿಗಳಿಗೆ ಇಂತಹ ಸುವರ್ಣಾವಕಾಶ ಸಿಕ್ಕರೆ ಕೇಳಬೇಕೆ?  ಈಗ ನಡೆದಿರುವುದೂ ಅದೇನೆ. ಇಲ್ಲವೆಂದರೆ ಸೆನ್ಸಾರ‍್ ಮಂಡಳಿ ಒಪ್ಪಿಗೆ ನೀಡಿರುವ ಚಿತ್ರಕ್ಕೆ ಸರ್ಕಾರ ತಡೆ ಹಾಕುವುದಂದರೇನು? ಇದೀಗ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು ತೀರ್ಮಾನ ಏನಾಗುವುದೆಂದು ಕಾದು ನೋಡಬೇಕಾಗಿದೆ. ಆದರೂ ಕಮಲ್‌ರಂತಹ ಶ್ರೇಷ್ಟ ನಟರಿಗೂ ಈ ರೀತಿ ತೊಂದರೆ ಕೊಡುವುದು ಅಕ್ಷಮ್ಯ.

ಮುಸ್ಲಿಮರೇ ದೇವರನ್ನು ಅವನಷ್ಟಕ್ಕೆ ಬಿಡಿ..

ಕನ್ನಡದಲ್ಲೊಂದು ಗಾದೆ ಮಾತಿದೆ, "ದೇವರು ಕೊಟ್ಟರೂ ಪೂಜಾರಿ ಕೊಡ" ಅಂತ, ಅದನ್ನು ಇಸ್ಲಾಮಿನ ಮುಲ್ಲಾಗಳಿಗೆ ಅನ್ವಯಿಸಿದರೆ "ಅಲ್ಲಾಹ್ ಕೊಟ್ಟರೂ ಮುಲ್ಲಾ ಬಿಡ !" ಎಂದು ಹೇಳಬಹುದು. ಹಿಂದುಗಳಲ್ಲಿ ಇರುವಂತೆಯೇ ಪುರೋಹಿತಶಾಯಿ ವರ್ಗ ಈ ಮುಲ್ಲಾಗಳದ್ದು. ಮಾತೆತ್ತಿದರೆ ಇವರು ಪತ್ವಾ ಹೊರಡಿಸುತ್ತಾರೆ, ತಲೆ ಕಡಿಯಲು ಹೇಳುತ್ತಾರೆ. ವಿಮರ್ಶೆಯನ್ನು ಎದುರಿಸುವ ತಾಕತ್ತು ಇವರಿಗೆ ಇಲ್ಲ. ಇಸ್ಲಾಮಿನ ಬಗ್ಗೆಯೋ ಅಥವಾ ಆ ಧರ್ಮದ ಪ್ರಮುಖರ ಬಗ್ಗೆಯೋ ಚಿಕ್ಕ ಟೀಕೆ ವ್ಯಕ್ತವಾದರೂ ಸಾಕು, ಇವರು ಫತ್ವಾ ಪುಸ್ತಕವನ್ನು ಎದುರಿಗಿಟ್ಟುಕೊಂಡು ಕುಳಿತುಬಿಡುತ್ತಾರೆ. 

ನಾನು ಖುರಾನ್‌ನ ಕನ್ನಡ ಅವತರಣಿಕೆಯನ್ನು ಓದಿದ್ದೇನೆ. ಅದರಲ್ಲಿ ಎಲ್ಲಿಯೂ ಈ ಮುಲ್ಲಾಗಳು ಹೇಳುವ ಷರಿಯತ್ ಕಾನೂನಿನ ಉಲ್ಲೇಖವಿಲ್ಲ. ಖುರಾನ್‌ನಲ್ಲಿ ಸ್ಪಷ್ಟಪಡಿಸಿರುವುದೇನೆಂದರೆ "ಮನುಷ್ಯ ಮಾಡುವ ತಪ್ಪಿಗೆ ಶಿಕ್ಷೆ ಕಡ್ಡಾಯ, ಆದರೆ ಅದನ್ನು ದೇವರೇ ತೀರ್ಮಾನಿಸಿ ಶಿಕ್ಷೆ ವಿಧಿಸುತ್ತಾನೆ. ಆ ಶಿಕ್ಷೆ ಜಾರಿಯಾಗುವುದು ಮನುಷ್ಯನ ಈ ಜೀವನ ಮುಗಿದ ನಂತರ. ಹಾಗಾಗಿ ಭೂಮಿಯ ಮೇಲೆ ಮಾಡುವ ತಪ್ಪಿಗೆ ಸರ್ಕಾರ ಯಾವುದೇ ಶಿಕ್ಷೆ ಕೊಟ್ಟರೂ ಅದು ಅವನು ಮಾಡಿರುವ ಅಪರಾಧಕ್ಕೆ ದಂಡನೆಯಾಗುವುದಿಲ್ಲ. ಅವನು ಮಾಡಿರುವ ಅಪರಾಧಕ್ಕೆ ನಿಜವಾದ ಶಿಕ್ಷೆ ನೀಡುವವನು ದೇವರು ಮಾತ್ರ" ಎಂದಿರುವುದನ್ನು ಓದಿದ್ದೇನೆ. ಹಾಗಿದ್ದ ಮೇಲೆ ಈ ಮುಲ್ಲಾಗಳ ಪ್ರತ್ಯೇಕ ಶಿಕ್ಷೆ ಅನ್ನುವುದು ಅರ್ಥವಿಲ್ಲದ್ದಾಗುತ್ತದೆ.

ನಿಜ, ಸಮಾಜವು ಹದ್ದುಬಸ್ತಿನಲ್ಲಿರಬೇಕಾದರೆ ಇಲ್ಲಿನ ಅಪರಾಧಕ್ಕೆ ಶಿಕ್ಷೆಯ ವ್ಯವಸ್ಥೆ ಇರಲೇ ಬೇಕು, ಆದರೆ ಅದು ಆಯಾ ದೇಶಗಳ ಕಾನೂನು ವ್ಯವಸ್ಥೆಯಲ್ಲೇ ಇರುವಾಗ ಈ ಮುಲ್ಲಾಗಳ ಮತ್ತೊಂದು ಕಾನೂನು ಯಾಕೆ ? ಒಟ್ಟಿನಲ್ಲಿ ಈ ಮುಲ್ಲಾಗಳು ಅಮಾಯಕ ಮುಸ್ಲಿಮರ ಮನಸ್ಸನ್ನು ಕೆಡಿಸಿ ದಾರಿ ತಪ್ಪಿಸುತ್ತಿದ್ದಾರೆ. ದೇವರ ಹೆಸರಲ್ಲಿ, ಧರ್ಮದ ಹೆಸರಲ್ಲಿ ಒಂದೇ ದೇಶದೊಳಗೆ ವಿಷ ಬೀಜ ಬಿತ್ತುವ ಇಂತಹ ಕದೀಮರನ್ನು ಮೊದಲು ಆಯಾ ಧರ್ಮದವರೇ ಒದ್ದೋಡಿಸಬೇಕು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಕಾರ್ಗಿಲ್ ಕಥೆ : ಸೈನಿಕನೆಂದರೆ

"ನಿನಗೇನಾದರೂ ಪೆಟ್ಟಾಯಿತೆ?" ಎಂದು ಕೇಳಿದನು ಮಹರ್ಷಿ. ನಾನು ನನ್ನ ಕೈ ಮೈಯನ್ನು ನೋಡಿಕೊಂಡೆ. ಮುಂಗೈಗೆ ಒಂದು ಮೊನಚು ಕಲ್ಲು ಹೊಡೆದು ಅರ್ಧ ಇಂಚಿನಷ್ಟು ಅಳಕ್ಕೆ ಗಾಯವಾಗಿತ್ತು. ರಕ್ತದ ಹನಿಗಳು ಪಟಪಟನೆ ಸುರಿಯುತ್ತಿದ್ದವು. ಅದನ್ನು ಕಂಡ ಅವನು  ತನ್ನಲ್ಲಿದ್ದ ಹತ್ತಿಯನ್ನು ಗಾಯದ ಮೇಲಿಟ್ಟು ಕರವಸ್ತ್ರದಿಂದ ಗಟ್ಟಿಯಾಗಿ ಕಟ್ಟು ಹಾಕಿದನು. ಮತ್ತೆ ನಮ್ಮ ನಮ್ಮ ಬಂದೂಕುಗಳನ್ನು ಎತ್ತಿಕೊಂಡೆವು! ಶತ್ರು ಪಡೆಗಳ ಸೆಲ್‌ಗಳೂ ಅವರ ಗನ್‌ಗಳ ಗುಂಡುಗಳೂ ಅಲ್ಲಲ್ಲಿ ಬಿದ್ದು ಸಿಡಿಯುತ್ತಿದ್ದವು. ನಾವಿಬ್ಬರೂ ಈಗ ಆ ದೊಡ್ಡ ಬಂಡೆಯ ಹಿಂದೆ ರಕ್ಷಣೆ ಪಡೆದಿದ್ದೆವು. ಮತ್ತೆ ಕೇಳಿದನು ಮಹರ್ಷಿ...... ``ಈಗೇನು ಮಾಡೋಣ?" ``ಇರು... ನಮ್ಮವರು ಬಂದು ನಮ್ಮನ್ನು ಸೇರಿಕೊಳ್ಳಲಿ. ಇದೀಗ ನಾವು ಆಯಕಟ್ಟಿನ ಸ್ಥಳಕ್ಕೆ ಬಂದಾಗಿದೆ... ಇನ್ನೇನಿದ್ದರೂ ಮುಖಾಮುಖಿ" ಎಂದೆ. ``ಇದು ನಮಗೆ ಎಷ್ಟನೇ ಮುಖಾಮುಖಿ? ಅವನ ಬೆನ್ನು ತಟ್ಟಿ ಹೇಳಿದೆ ``ಮೂರನೆಯದು" ``ಈ ಕುನ್ನಿಗಳಿಂದ ನಮ್ಮನ್ನೇನು ಮಾಡಲು ಸಾಧ್ಯವಿಲ್ಲ ಅಲ್ಲವಾ?" ಎನ್ನುತ್ತ ಅವನು ನನ್ನ ಕೈ ಕುಲಕಿದ್ದನು. ಆದರೆ ನನ್ನ ಮನಸ್ಸು ಮಾತ್ರ ಹಿಂದೆ ಓಡುತ್ತಿತ್ತು. *  *  *  ಒಂದೇ ಊರಿನಲ್ಲಿ ಹುಟ್ಟಿ ಬೆಳೆದ ನಮಗೆ ಊರಿನ ಜನರಲ್ಲಿ ಗೆಳೆಯರು ಎಂಬುದಕ್ಕಿಂತ ಅಣ್ಣ ತಮ್ಮಂದಿರೆಂಬ ಪರ್ಯಾಯ ಸಂಬಂಧವಿತ್ತು. ``ಮನು ಮಹರ್ಷಿಯರು ಅಗಲಿದ್ದುದನ್ನು ನಾವೆಂದೂ ನೋಡೇ ಇಲ್ಲ" ಎಂದು ಊರ ಜ...