ವಿಷಯಕ್ಕೆ ಹೋಗಿ

ಮಹಾನ್ ಪತ್ರಕರ್ತ ವಿಶ್ವೇಶ್ವರ ಭಟ್ಟರು ಬಡವರಿಗೆ ಬತ್ತಿ ಇಟ್ಟ ಕತೆ!


ಇವರು ಇವತ್ತೊಂದು ಕತೆ ಹೇಳಿದ್ದಾರೆ... ಅದು ಸೋಮಾರಿ ಮಿಡತೆ ಹಾಗೂ ಶ್ರಮಜೀವಿ ಇರುವೆ ಕತೆ.  ಇರುವೆ ಕಷ್ಟ ಪಟ್ಟು ಮುಂದಾಲೋಚನೆಯಿಂದ ದುಡಿದು ಆಹಾರ ಸಂಗ್ರಹಿಸಿ ಇಡುತ್ತೆ, ಆದರೆ ಮಿಡತೆ ಸೋಮಾರಿಯಾಗಿ ಆಡಿಕೊಂಡಿರುತ್ತೆ. ಆದರೆ ಮುಂದೆ ಮಿಡತೆ ಹಸಿವಿನಿಂದ ಬಳಲುವಾಗ ಇರುವೆ ಸಹಾಯ ಮಾಡಲಿಲ್ಲ ಎಂದು ಹಲವರು ಹೋರಾಟ ನಡೆಸುತ್ತಾರೆ... ಇತ್ಯಾದಿ ಇತ್ಯಾದಿಯಾಗಿದೆ ಇವರು ಹೇಳಿದ ಕತೆ. ಇದನ್ನೂ ಇವರು ಈ ಹಿಂದೆಯೂ ಒಮ್ಮೆ ಬರೆದಿದ್ದರು, ಈಗ ಕತೆಗೆ ಸ್ವಲ್ಪ ಸುಣ್ಣ-ಬಣ್ಣ ಬಂದಿದೆ. 
ಆದರೆ ಇದನ್ನು ಓದುತ್ತಾ ಹೋದಂತೆ ಮಿಡತೆ ಹಾಗೂ ಇರುವೆಯನ್ನು ಯಾರು ಯಾರಿಗೆ ಹೋಲಿಸಿದ್ದಾರೆ ಎಂದು ತಿಳಿದಾಗ ಮೈ ಉರಿಯುತ್ತದೆ. ಕಾರಣ ಇವರ ಪ್ರಕಾರ "ಮುಂದಾಲೋಚನೆಯಿಂದ" ಕೂಡಿಸಿ ಇಟ್ಟುಕೊಂಡಿರುವ ಇರುವೆಗಳೆಂದರೆ ಇಂದಿನ ಶ್ರೀಮಂತರು, ಹಾಗೂ ಬಡತನದಲ್ಲಿ ಹೊಟ್ಟೆಗಿಲ್ಲದೇ ಒದ್ದಾಡುತ್ತಿರುವ ಬಡವರೆಲ್ಲಾ ಸೋಮಾರಿ ಮಿಡತೆಗಳ ತರದವರು... ನಾಚಿಕೆಯಾಗಬೇಕು ಇವರಿಗೆ.

ವಿಶ್ವೇಶ್ವರ ಭಟ್ಟರು ಈ ಕೆಲವು ಉದಾಹರಣೆಗಳಿಗೆ ಯಾವ ರೀತಿ ಹೋಲಿಕೆ ಮಾಡುತ್ತಾರೆ ?
ಧರ್ಮಸ್ಥಳದ ವೀರೆಂದ್ರ ಹೆಗ್ಗಡೆಯವರು ಬಡವರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಅಂದರೆ ಹೆಗ್ಗಡೆವರು ಪಾಪ ಗೊತ್ತಿಲ್ಲದೇ ಸೋಮಾರಿ ಮಿಡತೆಗಳಿಗೆ ಸಹಾಯ ಮಾಡುತ್ತಿದ್ದಾರಾ ? ಅಜೀಂ ಪ್ರೇಮ್‌ಜೀ ತಾವು ಗಳಿಸಿದ ಸಾವಿರಾರು ಕೋಟಿ ರೂಪಾಯಿಗಳನ್ನು ದೀನ ದಲಿತರ ಉದ್ದಾರಕ್ಕಾಗಿ ಸಮರ್ಪಿಸಿದ್ದಾರೆ... ಹಾಗಿದ್ದರೆ ಸಾವಿರಾರು ಸೋಮಾರಿಗಳಿಗೆ ಇದರಿಂದ ಲಾಭವಾಯ್ತು... ಭಟ್ಟರು ಅಜೀಂರಿಗೆ ಸ್ವಲ್ಪ ಬುದ್ಧಿ ಹೇಳಿ ಅದನ್ನು ಶ್ರೀಮಂತ ಇರುವೆಗಳಿಗೇ ನೀಡಲು ತಿಳಿಸಬಹುದು. ಇದೇ ರೀತಿ ನೋಡುತ್ತಾ ಹೋದರೆ ನೂರಾರು ನಿಸ್ವಾರ್ಥದ ಧನಿಕರು ತಮ್ಮ ಆಸ್ತಿಯನ್ನು ಬಡವರಿಗೆ ಹಂಚಿ ಜನಸೇವೆಯಲ್ಲೇ ಜನಾರ್ದನ ಸೇವೆಯನ್ನು ಕಂಡಿದ್ದಾರೆ. ಬಹುಶಃ ಅವರೆಲ್ಲಾ ಬಡವರು ಸೋಮಾರಿ ಮಿಡತೆಗಳು ಎಂಬ ಜ್ಞಾನವನ್ನು ಗ್ರಹಿಸದವರಿರಬೇಕು!

ಇದೇ ಭಟ್ಟರ ಊರಾದ ಕುಮಟಾ ಸಹ ಸೇರಿದಂತೆ ಕರ್ನಾಟಕದಾಂದ್ಯಂತ ಭಟ್ಟರಂತಹ ಧನಿಕರ ಗದ್ದೆ ತೋಟಗಳಲ್ಲಿ ದುಡಿಯುತ್ತಿರುವ ಕೆಲಸಗಾರರು ಸೋಮಾರಿ ಮಿಡತೆಗಳೇ ? ಅಥವಾ ಅವರಿಂದ ದುಡಿಸಿಕೊಂಡು ಕಡಿಮೆ ಸಂಬಳ ನೀಡಿ ಲಾಭ ಮಾಡಿಕೊಳ್ಳುವ ಮಿಟಕಲಾಡಿಗಳು ಮಿಡತೆಗಳೇ ಅನ್ನುವುದನ್ನು ಇವರು ಅರ್ಥಮಾಡಿಕೊಳ್ಳಬೇಕಿದೆ. 

ಇಂತಹ ನೀಚರಿಗೆ ಪತ್ರಿಕೋದ್ಯಮ ಬೇರೆ ಕೇಡು. ಸರ್ಕಾರ ಬಡವರಿಗೆ ನೀಡುವ ಮೀಸಲಾತಿ ಸವಲತ್ತುಗಳನ್ನು ಟೀಕಿಸುವ ಇವರು ಒಂದು ವೇಳೆ ಸರ್ಕಾರ ಅದನ್ನು ನಿಲ್ಲಿಸಿದರೆ ಪರಿಣಾಮ ಏನಾಗುತ್ತೆ ಅನ್ನೋದನ್ನು ಊಹಿಸಿರಲಿಕ್ಕಿಲ್ಲ. ಶಕ್ತಿವಂತರಾದ ಬಡವರು ಭಟ್ಟರಂತಹ ಧನಿಕರನ್ನು ಬೀದಿ ಬೀದಿಯಲ್ಲಿ ಅಟ್ಟಾಡಿಸಿಕೊಂಡು ದೋಚತೊಡಗಿದರೆ ಆಗ ಇವರು ಯಾವ ಮಿಡತೆ-ಇರುವೆ ಕತೆ ಹೊಸೆಯುತ್ತಾರೋ?

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...

ದೈವಜ್ಞರು ತಂದಿಟ್ಟ ಪಜೀತಿ!

ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ. ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು. ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ. ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...