ಏನೂ ಮಾಡಲು ಕೆಲಸವಿಲ್ಲದ ಬಡಗಿ ಮತ್ತೇನೋ ಮಾಡಿದ್ದನಂತೆ, ಹಾಗೇ ಆಗಿದೆ ನಮ್ಮ ಹಿರಿಯ ಸಾಹಿತಿ 'ಚಂಪಾ' ಎಂದು ನಾಮಾಂಕಿತಗೊಂಡಿರುವ ಶ್ರೀ ಚಂದ್ರಶೇಖರ ಪಾಟೀಲರ ಕಥೆ. ಬೆಕ್ಕಿಗೇಕೆ ಕಬ್ಬಿಣದ ಕೆಲಸ ಅನ್ನುವಂತೆ ಇವರಿಗೆ ಯಾಕೆ ಬೇಕಿತ್ತೋ ರಾಜಕೀಯ ಕೆಲಸ? ಸಾಹಿತ್ಯದಲ್ಲೇ ಆಗಬೇಕಾದ ನೂರಾರು ಕೆಲಸಗಳು ಇವೆ. ಕನ್ನಡದ ಕೆಲಸಗಳು ಮಾಡಿದಷ್ಟೂ ತೀರದು. ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದ ಚಂಪಾ ಏಕಾಏಕಿ ಯಡಿಯೂರಪ್ಪನವರ ಕೆಜೆಪಿಗೆ ಲಾಂಗ್ ಜಂಪ್ ಮಾಡಿರುವುದು ಆಶ್ಚರ್ಯಕ್ಕಿಂತ ಹೆಚ್ಚಾಗಿ ಕುಚೋದ್ಯವಾಗಿಯೇ ಕಾಣಿಸುತ್ತಿದೆ. ಏಕೆಂದರೆ ಯಡಿಯೂರಪ್ಪ ಹಾಗೂ ಚಂಪಾ ಮೊದಲಿನಿಂದಲೂ ಜಿಗ್ರಿ ದೋಸ್ತ್ಗಳೇನಲ್ಲ. ಈ ಹಿಂದೆ ಹಾವು ಮುಂಗುಸಿಯಂತೆ ಕಿತ್ತಾಡಿಕೊಂಡವರು. ಶಿವಮೊಗ್ಗದ ಸಾಹಿತ್ಯ ಸಮ್ಮೇಳನದಲ್ಲಿ ತಾವು ಬರುವ ಮುಂಚೆಯೆ ಕಾರ್ಯಕ್ರಮ ಪ್ರಾರಂಭಿಸಿದರು ಎಂದು ಚಂಪಾ ಮೇಲೆ ಯಡ್ಡಿ ಎಗರಾಡಿದರೆ ಅದಕ್ಕೆ ಎದಿರೇಟಾಗಿ ಚಂಪಾ ಸಿಕ್ಕ ಸಿಕ್ಕ ವೇದಿಕೆಯಲ್ಲೆಲ್ಲಾ ಯಡ್ಡಿಯನ್ನು ಹಿಗ್ಗಾ ಮುಗ್ಗಾ ಎಳೆದಾಡಿದ್ದರು. ಇದಕ್ಕೆ ಮತ್ತೆ ಎದಿರೇಟು ನೀಡಿದ ಯಡ್ಡಿ ಚಂಪಾಗೆ ದಕ್ಕಿದ್ದ 'ಪಂಪ' ಪ್ರಶಸ್ತಿಗೆ ವರ್ಷಗಟ್ಟಲೆ ಅಡ್ಡಗಾಲು ಹಾಕಿ ಸೇಡು ತೀರಿಸಿಕೊಂಡಿದ್ದರು. ಹೀಗೆ ಏಟು ಎದಿರೇಟು ಕೊಟ್ಟುಕೊಳ್ಳುತ್ತಾ ವಿರೋಧಿಗಳಾಗಿದ್ದ ಚಂಪಾಗೆ ಈಗ ಯಡ್ಡಿ ಎಷ್ಟು ರೇಟು ಕೊಟ್ಟರೋ ತಿಳಿಯದು... ಕೆಜೆಪಿ ಕೋಟು ತೊಟ್ಟು ಬೀಗಲು ತಯಾರಾಗಿದ್ದಾರೆ. ಹಾವು ಮುಂಗುಸಿಯಾಗಿದ್ದವ
ಮನಸು ಹೃದಯಗಳ ಸವಿಮಾತು............