ವಿಷಯಕ್ಕೆ ಹೋಗಿ

ನಾ ಕಂಡಂತೆ ಜಾತಿಯ ಏರ್ಪಾಡುಗಳು.

ನಮ್ಮೂರಿನಲ್ಲಿರುವ ಪ್ರಮುಖ ಜಾತಿಗಳ ನಡುವಿನ ವ್ಯವಸ್ಥೆ ಈ ರೀತಿ ಇದೆ. ಈ ಎಲ್ಲಾ ಜಾತಿಗಳವರನ್ನೂ ನಾನು ಹುಟ್ಟಿನಿಂದಲೂ ನೋಡಿದ್ದುದರಿಂದ ನಿಖರವಾಗಿ ಬರೆದಿದ್ದೇನೆ.
೧. ಬ್ರಾಹ್ಮಣ
೨. ಲಿಂಗಾಯಿತ
೩. ಒಕ್ಕಲಿಗ
೪. ಶೆಟ್ಟರು, ಪೂಜಾರಿಗಳು, ಇತ್ಯಾದಿ (ಕುಂದಾಪುರದ ಕಡೆಯವರು)
೫. ದೀವರು (ಈಡಿಗರು)
೬. ಹಸಲರು
೭. ಹೊಲೆಯರು
೮. ಉಪ್ಪಾರರು
[ಅಲ್ಲಿ ಇಲ್ಲಿ ಒಂದೆರಡು ಕುಟುಂಬ ಮಾತ್ರ ಇರುವ ಕೆಲವೊಂದು ಜಾತಿಗಳನ್ನು ಸೇರಿಸಿಲ್ಲ]
ಈಗ ಈ ಮೇಲ್ಕಂಡ ಜಾತಿಗಳವರಲ್ಲಿ ಮೇಲು ಕೀಳು ಹೇಗಿದೆ ಎಂದರೆ...
* ಬ್ರಾಹ್ಮಣರು ಅತ್ಯಂತ ಉತ್ತಮ ಜಾತಿ ಎಂತಲೂ, ಉಪ್ಪಾರರು ಅತ್ಯಂತ ಕೀಳು ಜಾತಿ ಎಂತಲೂ ಎಲ್ಲರೂ ನಂಬುತ್ತಾರೆ. (ಲಿಂಗಾಯಿತರು ಅನೇಕರು ಬ್ರಾಹ್ಮಣರಿಗಿಂತಲೂ ತಮ್ಮದೇ ಉತ್ತಮ ಜಾತಿ ಎಂದೂ ಹೇಳುವುದಿದೆ.) ಬ್ರಾಹ್ಮಣರು ಅವರ ನಂತರದ ಲಿಂಗಾಯಿತರನ್ನು ಹೊರತು ಪಡಿಸಿ ಬೇರೆ ಯಾರನ್ನೂ ಮನೆಯೊಳಗೆ ಸೇರಿಸುವುದಿಲ್ಲ. (ಬೇರೆಯವರು ಹೋಗುವುದೂ ಇಲ್ಲ). ದೀವರ ವರೆಗೆ ಮುಟ್ಟಿಸಿಕೊಂಡರೆ ತೊಂದರೆ ಇಲ್ಲ. ಆದರೆ ಕೊನೆಯ ಮೂರು ಜಾತಿಗಳವರು ಮುಟ್ಟಬಾರದು, ಮೈಲಿಗೆ.
* ನಂತರದ ಸ್ಥಾನ ಲಿಂಗಾಯಿತರದ್ದು. ಇವರು ಇವರ ಕೆಳಗಿನ ಯಾರನ್ನೂ ಮನೆಯೊಳಗೆ ಸೇರಿಸುವುದಿಲ್ಲವಾದರೂ ಒಕ್ಕಲಿಗರಿಗೆ ಕೆಲವು ಸಮಯಗಳಲ್ಲಿ ಅವಕಾಶ ನೀಡುವುದಿದೆ. (ಹಬ್ಬದ ಕೆಲಸಗಳನ್ನು ಮನೆಯೊಳಗೆ ಹೋಗಿ ಒಕ್ಕಲಿಗರು ಮಾಡಿ ಕೊಡುತ್ತಾರೆ.) ಉಳಿದ ಯಾರನ್ನೂ ಇವರು ಮನೆಯೊಳಗೆ ಸೇರಿಸುವುದಿಲ್ಲ. ಕೊನೆಯ ಮೂರು ಜಾತಿಗಳವರನ್ನು ಮುಟ್ಟಿಸುವುದಿಲ್ಲ.
ಬ್ರಾಹ್ಮಣರು ಮತ್ತು ಲಿಂಗಾಯಿತರ ನಡುವೆ ಅಂತಹ ಮೇಲು ಕೀಳು ಭಾವನೆ ಇಲ್ಲ. ಆದರೆ ಹಣ್ಣು ಗಂಡಿನ ವಿನಿಮಯ ಇಲ್ಲ.
* ಒಕ್ಕಲಿಗರು ಮೇಲಿನ ಎರಡು ಜಾತಿಗಳವರನ್ನೂ ತಮಗಿಂತ ಉತ್ತಮವೆಂತಲೂ ಕೆಲಗಿನ ಎಲ್ಲರನ್ನೂ ಕೀಳು ಎಂತಲೂ ಭಾವಿಸುತ್ತಾರೆ. ಶೆಟ್ಟರು, ಪೂಜಾರಿ ಹಗೂ ದೀವರ ಜೊತೆ ಮೇಲು ಕೀಳು ಭಾವ ಇಲ್ಲವಾದರೂ ಸಂಬಂಧ ಬೆಳೆಸುವುದಿಲ್ಲ. ಕೊನೆಯ ಮೂರು ಜಾತಿಗಳವರನ್ನು ಮುಟ್ಟುವುದಿಲ್ಲ. 
* ಶೆಟ್ಟರು, ಪೂಜಾರಿಗಳು, ದೀವರು - ಒಕ್ಕಲಿಗರನ್ನು ತಮ್ಮ ಸಮಾನ ಜತಿ ಎಂದು ಭಾವಿಸಿದ್ದಾರೆ. ಹಾಗೆಯೆ ಬ್ರಾಹ್ಮಣ ಲಿಂಗಯಿತರನ್ನು ಮೇಲೆಂದೂ ಕೊನೆಯ ಮೂರು ಜಾತಿಗಳನ್ನು ಕೀಳೆಂದೂ ಭಾವಿಸುತ್ತಾರೆ. ಕೊನೆಯ ಮೂರು ಜಾತಿಗಳವರನ್ನು ಮುಟ್ಟುವುದಿಲ್ಲ. 
* ಹಸಲರು - ಇವರು ಹೊಲೆಯರು ಹಾಗೂ ಉಪ್ಪಾರರನ್ನು ಮನೆಯೊಳಗೆ ಸೇರಿಸುವುದಿಲ್ಲ. ಅವರು ಕೀಳೆಂದು ಭಾವಿಸುತ್ತಾರೆ.
* ಹೊಲೆಯರು - ಇವರು ಉಪ್ಪಾರರನ್ನು ಮನೆಯೊಳಗೆ ಸೇರಿಸುವುದಿಲ್ಲ. ಅವರೂ ಕೀಳೆಂದು ಭಾವಿಸುತ್ತಾರೆ.
[ಇತ್ತೀಚಿಗೆ ಮುಟ್ಟುವುದರಿಂದ ಮೈಲಿಗೆ ಎಂಬ ಭಾವನೆ ಕೊಂಚೆ ಕಡಿಮೆ ಆಗಿದೆಯಾದರೂ ಪೂರ್ತಿಯಂತೂ ಹೋಗಿಲ್ಲ. ಉಳಿದಂತೆ ಮೇಲು ಕೀಳು ಭಾವನೆ ಹಾಗೆಯೆ ಇದೆ]

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...