ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ್ ಡಿಕ್ಕಿಯಿಂದಾಗಿ ರತ್ನಾಗರ್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ್ ಡಿಕ್ಕಿಯಿಂದಾಗಿ ರತ್ನಾಗರ್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ
ಮನಸು ಹೃದಯಗಳ ಸವಿಮಾತು............