ಮೊನ್ನೆ ಅಲ್ಲಿ ಇಲ್ಲಿ ಸುತ್ತಾಡಿಕೊಂಡು ಕೊನೆಗೆ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಹೋದೆವು. ಅಲ್ಲಿ ದಿನದ ಎಲ್ಲಾ ಸಮಯದಲ್ಲೂ ಊಟದ ವ್ಯವಸ್ಥೆ ಇರುತ್ತದೆ ಎಂದು ಯಾರೋ ರೈಲು ಹತ್ತಿಸಿದ್ದರು. ಆದರೆ ಅಲ್ಲಿ ನಾವು ಹೋಗುವಾಗ ಸಂಜೆ ನಾಲ್ಕು ಗಂಟೆ. ಆ ಸಮಯದಲ್ಲಿ ಊಟ ದೊರೆಯುವುದಿಲ್ಲ ಎಂದು ಹೇಳಿದರು. ಹಾಗಾಗಿ ವಿಧಿ ಇಲ್ಲದೆ ಎದುರಲ್ಲೆ ಇರುವ ಒಂದು ಹೋಟೆಲಿಗೆ ಉಪಹಾರಕ್ಕೆಂದು ಹೋದೆವು. ಅಲ್ಲಿ ಯಾವ ತಿಂಡಿಯೂ ಚೆನ್ನಾಗಿರಲಿಲ್ಲ. ನಾವು ಪಡೆದ ದೋಸೆ ಬೆಂದಿರಲಿಲ್ಲ. ಚಟ್ನಿಯನ್ನು ತೆಂಗಿನಕಾಯಿ ಹಾಕಿ ಮಾಡಿರದೇ ಉಪ್ಪಿನಿಂದಲೇ ಮಾಡಿದ್ದರು. ಅವಲಕ್ಕಿ ಕೊಂಡರೆ ಖಾರವೋ ಖಾರ. ಆದರೆ ಬೆಲೆ ಮಾತ್ರ ಕಡಿಮೆ ಏನಿರಲಿಲ್ಲ. ಅಂತಹ ಪ್ರವಾಸಿ ಸ್ಥಳದಲ್ಲಿ ದುಡ್ಡು ಕೊಟ್ಟರೂ ಒಳ್ಳೆಯ ಉಪಹಾರ ದೊರೆಯುವುದಿಲ್ಲ ಎಂದಾದರೆ ಪ್ರವಾಸಿಗರು ಹೇಗೆ ತಾನೆ ಹೋಗಲು ಇಷ್ಟ ಪಡುತ್ತಾರೆ ? ಅಲ್ಲಿನ ನಿರ್ವಾಹಕರು ಇದನ್ನೆಲ್ಲಾ ಗಮನಿಸಿದರೆ ಒಳ್ಳೆಯದಲ್ಲವೆ?
* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು. ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. - ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ. ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. - ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ, ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಕಾಮೆಂಟ್ಗಳು