ವಿಷಯಕ್ಕೆ ಹೋಗಿ

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!



ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು.

ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು.

ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ ಸಾಯುವ ಸಂಭವ ಇದೆ. ಅದೇ ಸಮಯ ಡಿಕ್ಕಿ ಹೊಡೆದಾತನಿಗೂ ಪೆಟ್ಟಾಗುತ್ತದೆ. ಡಿಕ್ಕಿ ಹೊಡೆದ ಕಮೆಂಟೇಟರನಿಗೆ ರತ್ನಾಗರ‍್ ಅವರನ್ನು ಕೊಲ್ಲುವ ಉದ್ದೇಶವೇ ಇದ್ದಿರಬಹುದು. ಆದುದರಿಂದ ಮೊದಲೇ ಯೋಚಿಸಿ ಶಿರಸ್ತ್ರಾಣ ಹಾಕಿಕೊಂಡು ಬಂದು ಯಾಕೆ ಡಿಕ್ಕಿ ಹೊಡೆದಿರಬಾರದು ? ಆದರೆ ರತ್ನಾಗರ‍್ ಖ್ಯಾತ ವ್ಯಕ್ತಿ ಆಗಿರುವುದರಿಂದ ಅಷ್ಟು ಸುಲಭದಲ್ಲಿ ಕೊಲೆ ಮಾಡಲು ಸಾಧ್ಯವಾಗಿರಲಾರದು. ಅದೂ ಸಹ ಓಡಿ ಬಂದು ಡಿಕ್ಕಿ ಹೊಡೆದು?! ಅಥವಾ ಬೆಳಗಿನ ಜಾವ ವಾಕಿಂಗ್‌ಗೆ ಹೋದಾಗ ಈತ ಈ ಕೃತ್ಯವನ್ನು ಮಾಡಿರಬಹುದೇ ?

ಅಥವಾ ಕಮೆಂಟೇಟರ‍್ ಯಾವುದಾದರೂ ವಾಹನದಲ್ಲಿ ಡಿಕ್ಕಿ ಹೊಡೆದಿರಬಹುದೆ ? ಬೈಕ್, ಕಾರು, ಲಾರಿ ? 

ಹೀಗೆ ನಾನಾ ರೀತಿ ಯೋಚಿಸಿ ಕೊನೆಗೂ ೧೫ನೇ ಪುಟಕ್ಕೆ ಹೋಗಿ ಸುದ್ದಿಯನ್ನು ನೋಡಿದೆ. ನನಗೇ ನಗು ಬಂತು.. ಕಾರಣ ರತ್ನಾಗರ‍್ ಯಾರ ಡಿಕ್ಕಿಯಿಂದಲೂ ಸತ್ತಿರಲಿಲ್ಲ ಪಾಪ, ಅವರ ಹೆಸರೇ "ಡಿಕ್ಕಿ ರತ್ನಾಗರ‍್" ಆಗಿತ್ತು, ಹಾಗೂ ಅವರು ರೇಡಿಯೋ ಕಾಮೆಂಟೇಟರ‍್ ಸಹ ಆಗಿದ್ದರಂತೆ !

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ನಿರ್ಜೀವ ವಸ್ತುಗಳಿಂದ ಜೀವಕೋಶದ ರಚನೆ...

ಜೀವಿಗಳ ಉಗಮ ಆಕಸ್ಮಿಕವಾದುದು ಎಂಬ ವಿಜ್ಞಾನಿಗಳ ಹೇಳಿಕೆಗೆ ಈಗಾಗಲೇ ಸಾವಿರಾರು ಪುರಾವೆಗಳು ಸಿಕ್ಕಿವೆ. ಅವುಗಳಲ್ಲಿ ಪ್ರಮುಖವಾದುದು ಜೀವಕೋಶಗಳ ರಚನೆ ಆಗುತ್ತಿರುವು ಮುಖ್ಯವಾಗಿ ಕೇವಲ ಐದು ಮೂಲ ವಸ್ತುಗಳಿಂದ. ಅವುಗಳೆಂದರೆ .. ೧. ಹೈಡ್ರೋಜನ್‌ ೨. ಆಕ್ಸಿಜನ್‌ ೩. ಕಾರ್ಬನ್‌ ೪. ನೈಟ್ರೋಜನ್‌ ೫. ಕ್ಯಾಲ್ಸಿಯಂ ಈ ಐದು ಮೂಲ ವಸ್ತುಗಳೇ ನಮ್ಮ ದೇಹದ ೯೯% ಭಾಗವನ್ನು ಆವರಿಸಿಕೊಂಡಿರುವುದು. ಇದನ್ನು ಹೇಳಿದ ಕೂಡಲೇ ಆಸ್ತಕರು ತಕ್ಷಣ "ಹಾಗಿದ್ದರೆ ಈ ವಸ್ತುಗಳನ್ನು ಕೊಡುತ್ತೇನೆ, ಜೀವಿಯೊಂದನ್ನು ಮಾಡಿ ಕೊಡಿ ನೋಡುವ" ಅನ್ನುವ ಸವಾಲನ್ನು ಒಡ್ಡುತ್ತಾರೆ. ಆ ಸವಾಲನ್ನು ವಿಜ್ಞಾನಿಗಳು ಈಗಾಗಲೇ ಸ್ವೀಕರಿಸಿದ್ದಾರೆ, ಮತ್ತು ನಿರ್ಜೀವ ವಸ್ತುಗಳಿಂದ ಜೀವಕೋಶವನ್ನು ಸೃಷ್ಟಿಸಲು ಹೆಣಗುತ್ತಿದ್ದಾರೆ.  ಮೇಲೆ ತಿಳಿಸಿದ ಮೂಲವಸ್ತುಗಳ ಯಾವುದೋ ಒಂದು ವಿಶಿಷ್ಟ ಮಿಶ್ರಣದಲ್ಲೇ ಜೀವಿಗಳ ಉದಯ ಆಯ್ತು ಅನ್ನುವುದುವಿಜ್ಞಾನಿಗಳ ಬಲವಾದ ನಂಬಿಕೆ. ಏಕೆಂದರೆ ಮೇಲ್ಕಾಣಿಸಿದ ಎಲ್ಲಾ ಐದೂ ವಸ್ತುಗಳೂ ಸಹ ಜ್ವಾಲಾಮುಖಿಯ ಲಾವಾರಸ ನೀರಿನೊಂದಿಗೆ ಬೆರೆಯುವ ಸ್ಥಳದಲ್ಲಿ ಹೆಚ್ಚಾಗಿ ಇರುವುದನ್ನು ಕಾಣಬಹುದು. ಆ ಜಾಗವು ಒಂದು ವಿಶಿಷ್ಟ ರಾಸಾಯನಿಕ ಕ್ರಿಯೆಯನ್ನು ನಡೆಸುತ್ತಾ ಇರುತ್ತದೆ. ಇಂತಹ ಸಮಯದಲ್ಲೇ ಜೀವಿಯ ಉಗಮ ಆಗಿರುವ ಸಾಧ್ಯತೆ ಬಲವಾಗಿದೆ. ಏಕೆಂದರೆ ಭೂಮಿಯು ರಚನೆಗೊಂಡು ತಂಪಾಗುತ್ತಿದ್ದ ಸಮಯದಲ್ಲಿ ಕೂಡಾ ಇದೇ ತೆರನಾದ ಸ್ಥಿತಿಯು ಲಕ್ಷಾಂತರ ವರ್ಷಗಳ ವರೆಗೆ ಮುಂದ...