ಮೇಲಿನ ವಾಕ್ಯದಲ್ಲಿ ಮಲೆನಾಡಿನ ಹೊರತಾದ ಜನರಿಗೆ ಎರಡು ಪದಗಳು ಹೊಸತೆನಿಸಬಹುದು. ಮೊದಲನೆಯದು ಹೆಗ್ಗಾಲ್ ಹಾಗೂ ಎರಡನೆಯದು ಕಟ್ಟುಮಟ್ಲೆ. ಹೆಗ್ಗಾಲ್ ಅಣಬೆ ಇದೊಂದು ಜಾತಿಯ ಅಣಬೆ ಮಾತ್ರ. ಮಲೆನಾಡಿನ ಕಾಡು ಮೇಡುಗಳಲ್ಲಿ ಮಳೆಗಾಲದ ಶುರುವಿಗೆ ಗುಡುಗು ಸಿಡಿಲು ಬಂದಾಗ ಭೂಮಿಯಿಂದ ಏಳುವ ಅಣಬೆಗಳಲ್ಲಿ ಹೆಗ್ಗಾಲ್ ಹೆಸರಿನ ಅಣಬೆ ತುಂಬಾ ಪ್ರಸಿದ್ಧ. ಕಾರಣ ಇದು ತುಂಬಾ ರುಚಿ. ಇದರ ಎದುರು ಪೇಟೆಯಲ್ಲಿ ಸಿಗುವ ಎಲ್ಲಾ ಅಣಬೆಗಳನ್ನೂ ನಿವಾಳಿಸಬೇಕು. ಇವು ಎಲ್ಲೆಂದರಲ್ಲಿ ವಿನಾಕಾರಣ ಹುಟ್ಟುವುದಿಲ್ಲ. ಇವುಗಳಿಗೆ ನಿರ್ದಿಷ್ಟ ಸ್ಥಳವಿರುತ್ತದೆ. ಅಲ್ಲಿ ಮಾತ್ರ ಮುಂಗಾರು ಶುರವಾಗುವಾಗ ಸಿಡಿಲಬ್ಬರ ಇರುವ ಒಂದು ನಿರ್ದಿಷ್ಟ ದಿನ ಬೆಳ ಬೆಳಗ್ಗೆ ನೂರಾರು ಅಣಬೆಗಳು ಹಿಂದಿನ ವರ್ಷ ಹುಟ್ಟಿದ ಸ್ಥಳದಲ್ಲೇ ಹುಟ್ಟುತ್ತವೆ. ಇವುಗಳ ಆಯಸ್ಸು ಕಡಿಮೆ. ಹುಟ್ಟಿದ ದಿನವೇ ನಾವು ನೋಡಿ ಕಿತ್ತು ತಂದು ಸಾರು, ಪಲ್ಯ ಮಾಡಿ ಸೇವಿಸಬೇಕು. ಒಂದು ದಿನ ಕಳೆದರೂ ಅವು ಬಾಡುತ್ತವೆ. ಅದರಲ್ಲೂ ಹುಟ್ಟಿದ ದಿನ ಬೆಳಗ್ಗೆ ಮೊಳಕೆ ರೂಪದಲ್ಲಿದ್ದರೆ ಸಂಜೆಯ ಹೊತ್ತಿಗೆ ಪೂರ್ತಿ ಅರಳಿ ನಿಂತಿರುತ್ತವೆ. ಸಂಜೆಯೊಳಗೆ ಕೀಳದೇ ಹೋದರೆ ವ್ಯರ್ಥವಾದಂತೆಯೆ. ನಾನು ಶಾಲೆಗೆ ಹೋಗುತ್ತಿದ್ದ ಸಮಯದಲ್ಲಿ ನಮ್ಮ ಮನೆಯ ಆಜುಬಾಜಿನಲ್ಲಿ, ಶಾಲೆಗೆ ಹೋಗುವ ಕಾಡು ದಾರಿಯಲ್ಲಿ ಈ ಅಣಬೆಗಳು ಏಳುವ ಅನೇಕ ಜಾಗಗಳನ್ನು ಗುರುತಿಸಿ ಇಟ್ಟಿದ್ದೆ. ಪ್ರತಿ ವರ್ಷ ಮಳೆಗಾಲದ ಶುರುವಿನಲ್ಲಿ ರಾತ್ರಿ ಗುಡುಗು ಸಿಡಿಲು ಹೆ
ಮನಸು ಹೃದಯಗಳ ಸವಿಮಾತು............