ವಿಷಯಕ್ಕೆ ಹೋಗಿ

ಜನರ ಹೃದಯ ಸಿಂಹಾಸನವೇರದ ರಾಜ !


ನಿನ್ನೆ ತೀರಿಕೊಂಡ ಮೈಸೂರು ರಾಜವಂಶದ ಕೊನೆಯ ಕುಡಿ ಶ್ರೀಕಂಠದತ್ತ ಒಡೆಯರ‍್ ಅವರಿಗೆ ನನ್ನ ಶ್ರದ್ದಾಂಜಲಿಗಳಿವೆ. ಒಬ್ಬ ವ್ಯಕ್ತಿ ತೀರಿಕೊಂಡಾಗಲೂ ಅವರ ಬಗ್ಗೆ ಋಣಾತ್ಮಕವಾಗಿ ಯೋಚಿಸಬಹುದಾ ? ಬರೆಯಬಹುದಾ ? ಅಂತ ಕೇಳಬಹುದು. ಧನಾತ್ಮಕವಾಗಿ ಯೋಚಿಸಲು ಯಾವುದೇ ವಿಷಯವನ್ನು ಬಿಟ್ಟು ಹೋಗದ ವ್ಯಕ್ತಿಯ ಬಗ್ಗೆ ಋಣಾತ್ಮಕ ಯೋಚನೆಗಳೇ ಬರುವುದು. ನಿಜ, ಎಲ್ಲಾ ವ್ಯಕ್ತಿಗಳಲ್ಲೂ ಅದರಲ್ಲೂ ಮೇಲ್ಮಟ್ಟದ ವ್ಯಕ್ತಿಗಳ ಜೀವನವನ್ನು ಅವಲೋಕಿಸಿದಾಗ ಅವರೆಷ್ಟೇ ಉತ್ತಮ ಜೀವನ ನಡೆಸಿದ್ದರೂ ಕೆಲವೊಂದು ತಪ್ಪುಗಳು ಇರಲೂ ಬಹುದು. ಆದರೆ ಅವುಗಳನ್ನು ಮರೆಸಿ ಹಾಕುವಷ್ಟು ಉತ್ತಮ ಸಾಧನೆ/ಕೆಲಸಗಳನ್ನು ಅವರು ಮಾಡಿದ್ದಾಗ ಮಾತ್ರ ಅವರ ಬಗ್ಗೆ ಧನಾತ್ಮಕವಾಗಿ ಮಾತನಾಡಲು ಸಾಧ್ಯ. 

ಆದರೆ ಶ್ರೀಕಂಠದತ್ತರು ಅಂತಹ ಯಾವ ಘನಾಂಧಾರಿ ಕೆಲಸ ಮಾಡಿದ್ದಾರೆ ? ಇಂದಿನ ಪತ್ರಿಕೆಗಳನ್ನ ಹೊರಳಿಸಿದಾಗ ಒಬ್ಬ ಹಳ್ಳಿಯ ಕ್ರಿಕೆಟಿಗ 'ಒಂದು ಬಾರಿ ಚೆನ್ನೈಗೆ ನಮ್ಮೊಟ್ಟಿಗೇ ಬಂದರು, ಚೆನ್ನಾಗಿ ಬೆರೆತು ಮಾತನಾಡಿದರು' ಅನ್ನುವ ಒಂದಂಶವನ್ನು ಬಿಟ್ಟರೆ ಬೇರ‍್ಯಾವ ಸಮಾಜಮುಖಿ ಕೆಲಸಗಳನ್ನು ಮಾಡಿರುವ ಮಾಹಿತಿಯೂ ಸಿಗಲಿಲ್ಲ. ಅದರ ಬಗ್ಗೆ ಈ ಹಿಂದೆ ಸುದ್ದಿ ಬಂದುದರ ಬಗ್ಗೆಯೂ ನನಗೆ ತಿಳಿದಿಲ್ಲ. ಇರುವಷ್ಟು ದಿನವೂ ರಾಜವೈಭೋಗ ಅನುಭವಿಸುತ್ತಾ, ಅರಮನೆಯನ್ನು ಉಳಿಸಿಕೊಳ್ಳಲು ಸರ್ಕಾರದೊಂದಿಗೆ ಕಿತ್ತಾಡುತ್ತಾ, ತಮಗೆ ಸಂಬಂಧವೇ ಇಲ್ಲದ ಕರ್ನಾಟಕ ಕ್ರಿಕೆಟ್‌ ಮಂಡಳಿಯ ಅಧಿಕಾರವನ್ನು ಅನುಭವಿಸುತ್ತಾ, ಅಲ್ಲಿ ಇಲ್ಲ ಸಲ್ಲದ ರಾಜಕೀಯ ತಂದು ಪ್ರತಿಭಾವಂತರನ್ನೂ ಕಡೆಗಣಿಸುತ್ತಾ, ತಂದೆ, ತಾತಂದಿರಿಂದ ಬಂದ ಪುಕ್ಕಟೆ ಆಸ್ತಿ ಹಾಗೂ ಗೌರವವನ್ನು ಅನುಭವಿಸುತ್ತಾ ಕಾಲ ಕಳೆದ 'ರಾಜ' ಈಗ ಇಲ್ಲವಾಗಿದ್ದಾರೆ. ಇದರಿಂದ ನಮ್ಮ ರಾಜ್ಯಕ್ಕೆ ಯಾವ ನಷ್ಟವೂ ಆದಂತೆ ಕಾಣಿಸುವುದಿಲ್ಲ. 

ಅವರು ಮನಸ್ಸು ಮಾಡಿದ್ದರೆ ಬಿದ್ದು ಕೊಳೆಯುತ್ತಿರುವ ಕೋಟ್ಯಾಂತರ ಮೌಲ್ಯದ ಆಸ್ತಿಯಿಂದ ಮೈಸೂರು ಸುತ್ತಮುತ್ತಲಿನ ಹಳ್ಳಿಗರಿಗೆ, ಬಡ ಬಗ್ಗರಿಗೆ ಸಹಾಯ ಮಾಡಿ ಅವರ ಹೃದಯ ಸಿಂಹಾಸನದಲ್ಲಿ ವಿರಾಜಮಾನರಾಗುವ ಮೂಲಕ ನಿಜವಾದ 'ರಾಜ'ನಾಗಬಹುದಿತ್ತು. ಆದರೆ ಅದ್ಯಾವುದನ್ನೂ ಮಾಡಲಿಲ್ಲ. ಅಂದು ವಿಶ್ವೇಶ್ವರಯ್ಯ ತೀರಿಕೊಂಡಾಗ ಅಥವಾ ಜಯಚಾಮರಾಜೇಂದ್ರ ಒಡೆಯರ‍್ ತೀರಿಕೊಂಡಾಗ ಮೈಸೂರು, ಮಂಡ್ಯದ ಜನತೆ ಕಣ್ಣೀರು ಹಾಕಿದ್ದರು. ಆದರೆ ಇಂದು ಅಂತಹ ಸಂದರ್ಭವೇ ಜನರಿಗೆ ಎದುರಾಗಲಿಲ್ಲ! ಇವರು ಬಹುವಾಗಿ ಪ್ರೀತಿಸಿದ (?!) ಹಾಗೂ ಕಾಡಿದ ಕರ್ನಾಟಕ ಕ್ರಿಕೆಟ್ ಸಂಸ್ಥೆಯನ್ನಾದರೂ ಮಾದರಿಯನ್ನಾಗಿಸಿ ಉದ್ದಾರ ಮಾಡಬಹುದಿತ್ತು. ಅದನ್ನೂ ಮಾಡಲಿಲ್ಲ. ಹೀಗೆ ನಾಮ್‌ಕಾವಾಸ್ತೆಯಾಗಿ ರಾಜನ ಹೆಸರಲ್ಲಿ ಮೆರೆದ ವ್ಯಕ್ತಿ ನಿಧನರಾಗಿದ್ದಾರೆಯೇ ಹೊರತೂ ಅವರಲ್ಲಿ ಇನ್ಯಾವ ವಿಶೇಷವೂ ಕಂಡು ಬರುತ್ತಿಲ್ಲ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...

ದೈವಜ್ಞರು ತಂದಿಟ್ಟ ಪಜೀತಿ!

ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ. ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು. ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ. ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...