ವಿಷಯಕ್ಕೆ ಹೋಗಿ

ಜನರ ಹೃದಯ ಸಿಂಹಾಸನವೇರದ ರಾಜ !


ನಿನ್ನೆ ತೀರಿಕೊಂಡ ಮೈಸೂರು ರಾಜವಂಶದ ಕೊನೆಯ ಕುಡಿ ಶ್ರೀಕಂಠದತ್ತ ಒಡೆಯರ‍್ ಅವರಿಗೆ ನನ್ನ ಶ್ರದ್ದಾಂಜಲಿಗಳಿವೆ. ಒಬ್ಬ ವ್ಯಕ್ತಿ ತೀರಿಕೊಂಡಾಗಲೂ ಅವರ ಬಗ್ಗೆ ಋಣಾತ್ಮಕವಾಗಿ ಯೋಚಿಸಬಹುದಾ ? ಬರೆಯಬಹುದಾ ? ಅಂತ ಕೇಳಬಹುದು. ಧನಾತ್ಮಕವಾಗಿ ಯೋಚಿಸಲು ಯಾವುದೇ ವಿಷಯವನ್ನು ಬಿಟ್ಟು ಹೋಗದ ವ್ಯಕ್ತಿಯ ಬಗ್ಗೆ ಋಣಾತ್ಮಕ ಯೋಚನೆಗಳೇ ಬರುವುದು. ನಿಜ, ಎಲ್ಲಾ ವ್ಯಕ್ತಿಗಳಲ್ಲೂ ಅದರಲ್ಲೂ ಮೇಲ್ಮಟ್ಟದ ವ್ಯಕ್ತಿಗಳ ಜೀವನವನ್ನು ಅವಲೋಕಿಸಿದಾಗ ಅವರೆಷ್ಟೇ ಉತ್ತಮ ಜೀವನ ನಡೆಸಿದ್ದರೂ ಕೆಲವೊಂದು ತಪ್ಪುಗಳು ಇರಲೂ ಬಹುದು. ಆದರೆ ಅವುಗಳನ್ನು ಮರೆಸಿ ಹಾಕುವಷ್ಟು ಉತ್ತಮ ಸಾಧನೆ/ಕೆಲಸಗಳನ್ನು ಅವರು ಮಾಡಿದ್ದಾಗ ಮಾತ್ರ ಅವರ ಬಗ್ಗೆ ಧನಾತ್ಮಕವಾಗಿ ಮಾತನಾಡಲು ಸಾಧ್ಯ. 

ಆದರೆ ಶ್ರೀಕಂಠದತ್ತರು ಅಂತಹ ಯಾವ ಘನಾಂಧಾರಿ ಕೆಲಸ ಮಾಡಿದ್ದಾರೆ ? ಇಂದಿನ ಪತ್ರಿಕೆಗಳನ್ನ ಹೊರಳಿಸಿದಾಗ ಒಬ್ಬ ಹಳ್ಳಿಯ ಕ್ರಿಕೆಟಿಗ 'ಒಂದು ಬಾರಿ ಚೆನ್ನೈಗೆ ನಮ್ಮೊಟ್ಟಿಗೇ ಬಂದರು, ಚೆನ್ನಾಗಿ ಬೆರೆತು ಮಾತನಾಡಿದರು' ಅನ್ನುವ ಒಂದಂಶವನ್ನು ಬಿಟ್ಟರೆ ಬೇರ‍್ಯಾವ ಸಮಾಜಮುಖಿ ಕೆಲಸಗಳನ್ನು ಮಾಡಿರುವ ಮಾಹಿತಿಯೂ ಸಿಗಲಿಲ್ಲ. ಅದರ ಬಗ್ಗೆ ಈ ಹಿಂದೆ ಸುದ್ದಿ ಬಂದುದರ ಬಗ್ಗೆಯೂ ನನಗೆ ತಿಳಿದಿಲ್ಲ. ಇರುವಷ್ಟು ದಿನವೂ ರಾಜವೈಭೋಗ ಅನುಭವಿಸುತ್ತಾ, ಅರಮನೆಯನ್ನು ಉಳಿಸಿಕೊಳ್ಳಲು ಸರ್ಕಾರದೊಂದಿಗೆ ಕಿತ್ತಾಡುತ್ತಾ, ತಮಗೆ ಸಂಬಂಧವೇ ಇಲ್ಲದ ಕರ್ನಾಟಕ ಕ್ರಿಕೆಟ್‌ ಮಂಡಳಿಯ ಅಧಿಕಾರವನ್ನು ಅನುಭವಿಸುತ್ತಾ, ಅಲ್ಲಿ ಇಲ್ಲ ಸಲ್ಲದ ರಾಜಕೀಯ ತಂದು ಪ್ರತಿಭಾವಂತರನ್ನೂ ಕಡೆಗಣಿಸುತ್ತಾ, ತಂದೆ, ತಾತಂದಿರಿಂದ ಬಂದ ಪುಕ್ಕಟೆ ಆಸ್ತಿ ಹಾಗೂ ಗೌರವವನ್ನು ಅನುಭವಿಸುತ್ತಾ ಕಾಲ ಕಳೆದ 'ರಾಜ' ಈಗ ಇಲ್ಲವಾಗಿದ್ದಾರೆ. ಇದರಿಂದ ನಮ್ಮ ರಾಜ್ಯಕ್ಕೆ ಯಾವ ನಷ್ಟವೂ ಆದಂತೆ ಕಾಣಿಸುವುದಿಲ್ಲ. 

ಅವರು ಮನಸ್ಸು ಮಾಡಿದ್ದರೆ ಬಿದ್ದು ಕೊಳೆಯುತ್ತಿರುವ ಕೋಟ್ಯಾಂತರ ಮೌಲ್ಯದ ಆಸ್ತಿಯಿಂದ ಮೈಸೂರು ಸುತ್ತಮುತ್ತಲಿನ ಹಳ್ಳಿಗರಿಗೆ, ಬಡ ಬಗ್ಗರಿಗೆ ಸಹಾಯ ಮಾಡಿ ಅವರ ಹೃದಯ ಸಿಂಹಾಸನದಲ್ಲಿ ವಿರಾಜಮಾನರಾಗುವ ಮೂಲಕ ನಿಜವಾದ 'ರಾಜ'ನಾಗಬಹುದಿತ್ತು. ಆದರೆ ಅದ್ಯಾವುದನ್ನೂ ಮಾಡಲಿಲ್ಲ. ಅಂದು ವಿಶ್ವೇಶ್ವರಯ್ಯ ತೀರಿಕೊಂಡಾಗ ಅಥವಾ ಜಯಚಾಮರಾಜೇಂದ್ರ ಒಡೆಯರ‍್ ತೀರಿಕೊಂಡಾಗ ಮೈಸೂರು, ಮಂಡ್ಯದ ಜನತೆ ಕಣ್ಣೀರು ಹಾಕಿದ್ದರು. ಆದರೆ ಇಂದು ಅಂತಹ ಸಂದರ್ಭವೇ ಜನರಿಗೆ ಎದುರಾಗಲಿಲ್ಲ! ಇವರು ಬಹುವಾಗಿ ಪ್ರೀತಿಸಿದ (?!) ಹಾಗೂ ಕಾಡಿದ ಕರ್ನಾಟಕ ಕ್ರಿಕೆಟ್ ಸಂಸ್ಥೆಯನ್ನಾದರೂ ಮಾದರಿಯನ್ನಾಗಿಸಿ ಉದ್ದಾರ ಮಾಡಬಹುದಿತ್ತು. ಅದನ್ನೂ ಮಾಡಲಿಲ್ಲ. ಹೀಗೆ ನಾಮ್‌ಕಾವಾಸ್ತೆಯಾಗಿ ರಾಜನ ಹೆಸರಲ್ಲಿ ಮೆರೆದ ವ್ಯಕ್ತಿ ನಿಧನರಾಗಿದ್ದಾರೆಯೇ ಹೊರತೂ ಅವರಲ್ಲಿ ಇನ್ಯಾವ ವಿಶೇಷವೂ ಕಂಡು ಬರುತ್ತಿಲ್ಲ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...