ವಿಷಯಕ್ಕೆ ಹೋಗಿ

ಅ‘ಳ‘ಬೇಡ, ಕ‘ಳ‘ವ‘ಳ‘ ಬೇಡ, ಸ್ಯಾಮ್‌ಸಂಗ್‌ನವರಿಗೆ ಕನ್ನಡ ‘ಳ‘ ಬೇಡ !



'ಪಾಪಿ ಸಮುದ್ರಕ್ಕೆ ಹಾರಿದರೂ ಮೊಣಕಾಲುದ್ದ ನೀರು' ಅನ್ನೋ ಮಾತು ಅಂತೂ ಧೃಡವಾಯ್ತು. ಕಾರಣ ಇಷ್ಟೇ, ಮೊಬೈಲ್‌ನಲ್ಲಿ ಕನ್ನಡ ಬರೆಯಬೇಕೆಂಬ ನನ್ನ ಬಹುದಿನಗಳ ಕನಸು ಕನಸಾಗಿಯೇ ಇತ್ತು. ಆರ್ಥಿಕ ಸಂಕಷ್ಟದಿಂದಾಗಿ ಒಂದು ಉತ್ತಮ ಸ್ಮಾರ್ಟ್‌‌ಫೋನ್ ಕೊಂಡು ಸ್ನೇಹಿತರಿಗೆ ಕನ್ನಡದಲ್ಲಿ ಸಂದೇಶ ರವಾನಿಸಿ ಖುಷಿ ಪಡುವ ದಿನವು ದೂರವೇ ಇದ್ದವು.

ಒಂದು ದಿನ ಅವಸರದಲ್ಲಿ ಹೋಗಿ ಎಲ್‌ಜಿ ಸ್ಮಾರ್ಟ್‌‌ಫೋನ್ ಒಂದನ್ನು ಕೊಂಡು ತಂದೆ. ಕೊಂಡು ತಂದಿದ್ದು ಅವಸರದಲ್ಲಾದ್ದರಿಂದ ಅದರಲ್ಲಿ ಕನ್ನಡ ಇದೆಯೇ, ಅದಕ್ಕೆ ಕನ್ನಡ ಕಲಿಸಬಹುದೇ ಎಂಬುದನ್ನೆಲ್ಲಾ ಯೋಚಿಸಿರಲೇ ಇಲ್ಲ. ನನ್ನ ಅದೃಷ್ಟವೂ ನೆಟ್ಟಗಿರಲಿಲ್ಲ ಅಂತ ಕಾಣುತ್ತೆ. ನಾನು ತಂದ ಎಲ್‌.ಜಿ ಇ-೪೦೦ ಹ್ಯಾಂಡ್‌ಸೆಟ್‌ನಲ್ಲಿ ಕನ್ನಡ ಇರುವುದಂತಿರಲಿ ಅದಕ್ಕೆ ಕನ್ನಡ ತುಂಬುವುದೂ ಸಾಧ್ಯವಿರಲಿಲ್ಲ. ಇದರಿಂದ ತುಂಬಾ ನಿರಾಶಿತನಾದೆ. ಸ್ನೇಹಿತರು 'ಸ್ಯಾಮ್‌ಸಂಗ್ ಗೆಲಾಕ್ಸಿ' ತಗೊ, ಅದು ಕನ್ನಡ ಚೆನ್ನಾಗಿ ಬೆಂಬಲಿಸುತ್ತದೆ ಎಂದರು. ಅಂದಿನಿಂದ ಒಂದು ಸ್ಯಾಮ್‌ಸಂಗ್ ಸ್ಮಾರ್ಟ್‌‌ಫೋನ್ ಪಡೆಯಲೇ ಬೇಕೆಂದು ಸಿದ್ಲಿಂಗು ತರ ದುಡ್ಡು ಹೊಂದಿಸತೊಡಗಿದೆ. ಕೊನೆಗೂ ಸತತ ಆರು ಮಾಸದ ಪರಿಶ್ರಮದ ನಂತರ ಸ್ಯಾಮ್‌ಸಂಗ್ ಗೆಲಾಕ್ಸಿ ಪಡೆಯುವ ಮಟ್ಟಕ್ಕೆ ಬಂದೆ ಅಂತ ಆಯ್ತು.

ನಾನು ಹೊಂದಿಸಿದ ಕೆಲವೇ ಸಾವಿರ ರೂಪಾಯಿಗೆ ಸ್ಯಾಮ್‌ಸಂಗ್ ಗೆಲಾಕ್ಸಿ ಟ್ರೆಂಡ್ ಎಂಬ ಮೊಬೈಲ್ ಸೂಕ್ತ ಅನ್ನಿಸಿತು. ಇದರ ಬಗ್ಗೆ 
ಅಂತರ್ಜಾಲದಲ್ಲಿ ಸಿಕ್ಕಾಪಟ್ಟೆ ಸಂಶೋಧನೆ ಮಾಡಿ ಕಂಡುಕೊಂಡ ಪ್ರಕಾರ, ಈ ಮೊಬೈಲ್ ಕನ್ನಡದ ಜೊತೆಗೆ ಭಾರತದ ಇತರೆ ಒಂಬತ್ತು ಭಾಷೆಗಳನ್ನೂ ಬೆಂಬಲಿಸುತ್ತದೆ ಎಂದು ಅರಿವಿಗೆ ಬಂತು. ಫ್ಲಿಪ್‌ಕಾರ್ಟ್‌.ಕಾಮ್‌ ನಲ್ಲಿ ಹೊರಗಡೆಗಿಂತಾ ಎಂಟು ನೂರು ರೂಪಾಯಿ ಕಡಿಮೆಗೇ ಸಿಗುತ್ತದೆ ಎಂದೂ ಗೊತ್ತಾಯಿತು. ಕೂಡಲೇ ಅದನ್ನು ಬುಕ್‌ ಮಾಡಿ ಕಾಯುತ್ತಾ ಕುಂತೆ.

ಅಂತೂ ಮೊನ್ನೆ ಸೋಮವಾರದ ಮರುದಿನ ಶುಭದಿನದಲ್ಲಿ ಒಂದು ಶುಭಸಮಯದಲ್ಲಿ ನನ್ನ ಆಸೆಯ ಗೆಲಾಕ್ಸಿ ಟ್ರೆಂಡ್ ಬಂದೇ ಬಿಟ್ಟಿತು. ತಂದವನಿಗೆ ಹಣ ಪಾವತಿಸಿ ಪೆಟ್ಟಿಗೆ ತೆರೆದು ಉಪಯೋಗಿಸತೊಡಗಿದೆ. ಇದು ಕನ್ನಡವನ್ನು ಚೆನ್ನಾಗಿ ಬೆಂಬಲಿಸುತ್ತದೆ. ತುಂಬಾ ಖುಶಿಯಾಗಿ ಸ್ನೇಹಿತರೊಂದಿಗೆ ಕನ್ನಡದಲ್ಲಿ ಸಂದೇಶ ರವಾನಿಸಲೂ ತೊಡಗಿದೆ. ಆದರೆ ಮದನಗಿತ್ತಿ ಮೊದಲರಾತ್ರಿಯಂದು ಮತ್ತೆಲ್ಲಾ ಸರಸ ಮುಗಿಸಿ ಮುಖ್ಯ ಕೆಲಸಕ್ಕೆ ತೊಡಗಿದಾಗಲೇ ಮದುವೆ ಗಂಡಿಗೆ ಅದೇ ಇಲ್ಲ ಅಂತ ಗೊತ್ತಾದಂತೆ ನನ್ನ ನೆಚ್ಚಿನ ಗೆಲಾಕ್ಸಿ ಟ್ರೆಂಡ್‌ನಲ್ಲಿ ಕನ್ನಡದ ಕೊನೆಯ ಅಕ್ಷರವೇ ಇಲ್ಲ ಅಂತ ಗೊತ್ತಾಯಿತು ! ನನ್ನನ್ನು ನಾನೇ ನಂಬದೇ ಮತ್ತೆ ಮತ್ತೆ ಹುಡುಕಿದೆ, ಏನು ಪ್ರಯೋಜನ ? ಅದು ಇದರಲ್ಲಿ ಇಲ್ಲ, ಬೇಕಾದರೆ ಚಿತ್ರದಲ್ಲಿ ನೋಡಿ. ಕೀಪ್ಯಾಡ್‌ನಲ್ಲಿ ಕನ್ನಡ ಅಕ್ಷರ ಮಾಲೆ 'ಹ' ಅಕ್ಷರದೊಂದಿಗೆ ಕೊನೆಯಾಗಿದೆ. ಅದರ ನಂತರ ಇರಬೇಕಾಗಿದ್ದ ಅಕ್ಷರವೊಂದು ಕಾನೆಯಾಗಿದೆ.

ಅದಿಲ್ಲ ಅಂತ ಗೊತ್ತಾದ ಕ್ಷಣದಿಂದ ಅದಿಲ್ಲದೇ ಬೆರಳಚ್ಚಿಸುವುದನ್ನ ರೂಢಿ ಮಾಡಿಕೊಳ್ಳುತ್ತಿದ್ದೇನೆ. ಅದಕ್ಕಾಗಿಯೇ ನಿಮಗೆ ಲೇಖನದಲ್ಲಿ ಆ ಅಕ್ಷರವನ್ನೇ ಬಳಸದೇ ಬರೆದುಬಿಟ್ಟಿದ್ದೇನೆ. ಅದು ಯಾವ ಅಕ್ಷರ ಅಂತ ಲೇಖನದ ತಲೆಬರಹದಲ್ಲೇ ಇದೆ ನೋಡಿ !

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.