ವಿಷಯಕ್ಕೆ ಹೋಗಿ

ಪೊಲೀಸರಿಗೂ ಬೇಕಿದೆ ಆಧುನಿಕ ಆಯುಧ ಮತ್ತು ರಕ್ಷಾ ಕವಚ


ಮೋದಿ ಬರುತ್ತಾನೆಂದರೆ ಕನಿಷ್ಟ ಸಾವಿರ ಜನ ಪೊಲೀಸರು ಆತನ ರಕ್ಷಣೆಗೆ ನಿಲ್ಲಬೇಕು. ಯಕಶ್ಚಿತ್ ಒಂದು ರಾಜ್ಯದ ಮುಖ್ಯಮಂತ್ರಿಗೆ ಅಷ್ಟೊಂದು ರಕ್ಷಣೆ, ಬೊಕ್ಕಸಕ್ಕೆ ಹೊಡೆತ. ಇನ್ನು ಏನೂ ಅಲ್ಲದ ಕೇವಲ ಸಂಸದೆ ಸೋನಿಯಾ ರಕ್ಷಣೆಗಾಗಿ ಖರ್ಚು ಮಾಡುತ್ತಿರುವುದೆಷ್ಟು ? ಸಂಸದ ರಾಹುಲನ ರಕ್ಷಣೆಗೆ ? ಮಾಜಿ ಮಂತ್ರಿ ಅದ್ವಾನಿಗಾಗಿ ? ಏನು ಕಡಿದು ಕಟ್ಟೆ ಹಾಕಿದ್ದಾರೆ ಎಂದು ಇವರಿಗೆ ಇಷ್ಟೆಲ್ಲಾ ರಕ್ಷಣೆ ? ಇರಲಿ ವಿಷಯಕ್ಕೆ ಬರೋಣ..

ಮೊನ್ನೆ ಮೊನ್ನೆ ಕಲಬುರ್ಗಿಯಲ್ಲಿ ರೌಡಿಯೊಬ್ಬನನ್ನು ಹಿಡಿಯಲು ಹೋದ ದಕ್ಷ ಪೊಲೀಸ್ ಅಧಿಕಾರಿಗಳು ರೌಡಿಯ ಗುಂಡಿಗೇ ಎದೆಕೊಡಬೇಕಾಯ್ತು. ಪೊಲೀಸರ ಗುಂಡಿಗೆ ರೌಡಿಯೇನೋ ಸತ್ತನಾದರೂ ನಮ್ಮ ಒಬ್ಬ ದಕ್ಷ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡಿ ಅವರನ್ನೂ ಕಳೆದುಕೊಳ್ಳಬೇಕಾಯ್ತು. ಮತ್ತೊಬ್ಬ ಕಿರಿಯ ಪೊಲೀಸ್ ಅಧಿಕಾರಿ ಪ್ರಾಣಾಪಾಯದಿಂದ ಪಾರಾದರು. ಆದರೆ ಒಮ್ಮೆ ಯೋಚಿಸಿ ನೋಡಿ, ನಿಜವಾಗಿಯೂ ಪ್ರಾಣದ ಹಂಗು ತೊರೆದು ನಮಗಾಗಿ ಹೋರಾಡುವವರು ಇಂತಹ ಅಧಿಕಾರಿಗಳೂ, ಸೈನಿಕರುಗಳೇ ಅಲ್ಲವೇ ? ಧರ್ಮ-ಧರ್ಮಗಳ ನಡುವೆ ಬೆಂಕಿ ಹಾಕಿ, ಸಾರ್ವಜನಿಕರ ನೆಮ್ಮದಿ ಕೆಡಿಸಿ, ಅದರಿಂದ ರಾಜಕೀಯ ಲಾಭ ಮಾಡಿಕೊಂಡು ಓಡಾಡುವ ಕದೀಮರಿಗೆಲ್ಲಾ ಸಾವಿರಾರು ಪೊಲೀಸರ, ನೂರಾರು ಸೈನಿಕರ ರಕ್ಷಣೆ, ಆದರೆ ಜೀವದ ಹಂಗು ತೊರೆದು ಸಾರ್ವಜನಿಕರ ರಕ್ಷಣೆಗೆ ನಿಲ್ಲುವ ಅಧಿಕಾರಿಗಳಿಗೆ ಅಂತ ಕೊಡುವುದು ಒಂದು ಪಡಪೋಸಿ ಪಿಸ್ತೂಲು ಪೇದೆಗಳಿಗೆ ಓಬಿರಾಯನ ಕಾಲದ ಹಂದಿ ಹೊಡೆಯಲೂ ಯೋಗ್ಯವಲ್ಲದ ಬಂದೂಕು. ಇದಿಷ್ಟು ಸಾಕೆ ?

ಬೆಂಗಳೂರಿನ ಕೆಲವೇ ಪ್ರಮುಖ ಪೊಲೀಸ್ ಅಧಿಕಾರಿಗಳು ಹಾಗೂ ನಕ್ಸಲ್ ನಿಗ್ರಹ ಪಡೆಯ ಪೊಳಿಸರನ್ನು ಹೊರತು ಪಡಿಸಿ ಉಳಿದವರಿಗ್ಯಾರಿಗೂ ಬುಲೆಟ್‌ಪ್ರೋಫ್ ನೀಡಿಲ್ಲ. ಎಕೆ-೪೭ ನಂತಹ ಆಧುನಿಕ ಬಂದೂಕುಗಳನ್ನ ನಮ್ಮ ಯಾವ ಅಧಿಕಾರಿಗಳಿಗೂ ನೀಡಿರುವ ಬಗ್ಗೆ ಮಾಹಿತಿ ಇಲ್ಲ. ಒಂದಿಷ್ಟು ಉತ್ತಮ ಅನ್ನುವಂತಹ ರಿವಾಲ್ವಾರ‍್ ಬಿಟ್ಟರೆ ರೌಡಿಗಳನ್ನು ಎದುರುಗೊಳ್ಳುವ ಎಸ್‌.ಐ. ದರ್ಜೆಯೆ ಅಧಿಕಾರಿಗಳಿಗೆ ಬೇರೆ ರಕ್ಷಣೆಯೇ ಇಲ್ಲ. ಆದರೂ ಅವರು ರೌಡಿಗಳ ವಿರುದ್ಧ, ಸಮಾಜ ಕಂಟಕರ ವಿರುದ್ಧ ಹೋರಾಡಲೇ ಬೇಕು. ಇಷ್ಟಾದರೂ ಪೊಲೀಸರು ದಂಗೆಯೇಳುವುದಿಲ್ಲ. ಸರ್ಕಾರ ದಯಪಾಲಿಸಿದಾಗ ಕೊಟ್ಟದ್ದನ್ನು ಪಡೆದು ಕೆಲಸ ನಿರ್ವಹಿಸಬೇಕು. ಅದೇ ರಾಜಕಾರಣಿಗಳಿಗೆ ಏನಾದರೂ ಬೇಕಾಗಲಿ ? ಒಂದೇ ದಿನದಲ್ಲಿ ಮಸೂದೆಯನ್ನು ಮಂಡಿಸಿ ಜಾರಿಗೆ ತಂದು ಬೀಗುತ್ತಾರೆ. ಆದರೆ ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಇದುವರೆಗೂ ಯಾವ ಮುಖ್ಯಮಂತ್ರಿಯೂ ಗಂಭೀರವಾಗಿ ಚಿಂತನೆ ನಡೆಸಿಯೇ ಇಲ್ಲ. 

ಪ್ರಾರಂಭದಲ್ಲಿ ಏನೋ ಆಶಾಭಾವನೆ ಮೂಡಿಸಿದ ಸಿದ್ದರಾಮಯ್ಯ ಈಗಾಗಲೇ ಹತ್ತರೊಳಗೆ ಹನ್ನೊಂದನೆಯವರಾಗಿ ಇತಿಹಾಸದ ಬುಟ್ಟಿಯನ್ನು ಸೇರಿಯಾಯ್ತು. ಇನ್ನು ಇವರಿಂದ ರಾಜ್ಯಕ್ಕೆ ಏನೋ ಉತ್ತಮ ಕೆಲಸ ಆಗಿ ಹೋಗುತ್ತದೆ ಎಂದು ನಿರೀಕ್ಷಿಸುವುದರಲ್ಲಿ ಪ್ರಯೋಜನವಿಲ್ಲ. ಆದರೆ ಬಂಡಿ ಅವರ ನಿಧನದಿಂದಲಾದರೂ ಮುಖ್ಯಮಂತ್ರಿಯ ಗಮನ ಇತ್ತ ಹರಿಯಲಿ. ಪ್ರತಿ ಠಾಣೆಗೂ ಕನಿಷ್ಟ ಒಂದಾದರೂ ಅತ್ಯಾಧುನಿಕ ಬಂದೂಕು ಹಾಗೂ ನಾಲ್ಕಾದರೂ ಬುಲೆಟ್‌ಪ್ರೂಫ್ ಜಾಕೆಟ್ ಒದಗಿಸಲಿ. ನಮ್ಮನ್ನು ನೆಮ್ಮದಿಯಾಗಿ ನಿದ್ರಿಸಲು ಪಣ ತೊಟ್ಟಿರುವ ಪೊಲೀಸರ ಪ್ರಾಣಕ್ಕಾದರೂ ನಾವು ಬೆಲೆ ಕೊಡೋಣ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.