ವಿಷಯಕ್ಕೆ ಹೋಗಿ

ವ್ಯಂಗ್ಯಚಿತ್ರಾಚಾರ್ಯ !


ಇತ್ತೀಚಿನ ದಿನಗಳಲ್ಲಿ ದೇಶದ ಮುಂಚೂಣಿ ವ್ಯಂಗ್ಯಚಿತ್ರಕಾರರ ಸಾಲಿಗೆ ಕುಂದಾಪುರದ ಸತೀಶ್ ಆಚಾರ್ಯ ಸಹ ಸೇರ್ಪಡೆಯಾಗಿದ್ದಾರೆ. ಇವರ ವ್ಯಂಗ್ಯಚಿತ್ರಗಳ ಸಂಗ್ರಹದ ಮೊದಲ ಪುಸ್ತಕ 'ಮೈನ್, ಹಮ್ & ಆಪ್' ಇತ್ತೀಚಿಗೆ ಬಿಡುಗಡೆಯಾಗಿದೆ. 

ನಿನ್ನೆ ತಾನೆ ಪುಸ್ತಕವನ್ನು ತರಿಸಿಕೊಂಡೆ. ಇದೀಗ ಎದುರಾಗಿರುವ ಲೋಕಸಭೆಯ ಚುನಾವಣೆಯ ಹೊಸ್ತಿಲಲ್ಲಿರುವುದರಿಂದ ಚುನಾವಣೆ ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ವಸ್ತುಗಳೇ ಇಲ್ಲಿನ ವ್ಯಂಗ್ಯಚಿತ್ರಗಳಲ್ಲಿ ಇರುವುದು. 

ಡೆಮಿ ಅಳತೆಯ ಪುಸ್ತಕವನ್ನು ಅತ್ಯುತ್ತಮವಾಗಿ ಬಣ್ಣದಲ್ಲಿ ಆರ್ಟ್‌ ಪೇಪರ‍್ ಬಳಸಿ ಕುಂದಾಪುರದಲ್ಲಿಯೇ ಮುದ್ರಿಸಲಾಗಿದೆ ಅನ್ನುವುದು ವಿಶೇಷ. ಹಾಗೆಯೆ ಈ ಪುಸ್ತಕವನ್ನು ಆನ್‌ಲೈನ್‌ನಲ್ಲಿ ಕೊಂಡರೆ  ಜೊತೆಗೆ ಆಚಾರ್ಯರು ಬಿಡಿಸಿದ ವ್ಯಂಗ್ಯಚಿತ್ರದ ಅಸಲಿ ಪ್ರತಿಯೊಂದು ಸಹ ನಮಗೆ ಸಿಗಲಿದೆ.

 ಕುಂದಾಪುರದಲ್ಲಿ ಹುಟ್ಟಿ ಬೆಳೆದ ಸತೀಶ್ ಅವರು ಓದಿದ್ದು ಬಿ.ಕಾಂ, ಹಾಗೂ ಎಂಬಿಎ. ಕಾಲೇಜು ದಿನಗಳಲ್ಲೇ ಕನ್ನಡದ ಪತ್ರಿಕೆಗಳಿಗೆ ವ್ಯಂಗ್ಯಚಿತ್ರಗಳನ್ನು ಬರೆಯಲಾರಂಬಿಸಿದರು. ನಂತರ ವ್ಯಂಗ್ಯಚಿತ್ರದ ಗೀಳು ಹತ್ತಿಸಿಕೊಂಡು ಮುಂಬೈಗೆ ತೆರಳಿ ಅಲ್ಲಿ ಹತ್ತಾರು ವರ್ಷಗಳ ಕಾಲ ಕಂಡ ಕಂಡ ಪತ್ರಿಕೆಗಳಿಗೆ ಗೆರೆ ಗೀಚಿದ ನಂತರ ಮಿಡ್-ಡೇ ಪತ್ರಿಕೆಯಲ್ಲಿ ವ್ಯಂಗ್ಯಚಿತ್ರಕಾರರಾಗಿ ಉದ್ಯೋಗ ದೊರೆಯಿತು. ಕಳೆದ ಒಂಬತ್ತು ವರ್ಷಗಳಿಂದಲೂ ಆ ಪತ್ರಿಕೆಗೆ ದಿನನಿತ್ಯ ವ್ಯಂಗ್ಯಚಿತ್ರಗಳನ್ನು ಬರೆಯುತ್ತಿದ್ದಾರೆ. ಹಾಗೆಯೆ ಹೆಸರಾಂತ ಜಾಲತಾಣಗಳಿಗೂ, ಅನೇಕ ಕನ್ನಡ ಪತ್ರಿಕೆಗಳಿಗೂ ವ್ಯಂಗ್ಯಚಿತ್ರ ಬರೆಯುತ್ತಿದ್ದಾರೆ.

ರಾಜಕೀಯ ವ್ಯಕ್ತಿಗಳೇ ಇವರ ಪ್ರಮುಖ ವಿಷಯಗಳು. ಇವರ ಗೆರೆಗಳು ಹೆಚ್ಚು ಸ್ಫುಟವಾಗಿದ್ದು ವ್ಯಕ್ತಿಗಳ ಚಿತ್ರಣ ಸ್ಪಷ್ಟವಾಗಿರುತ್ತದೆ. ಹಾಗೂ ವಾಸ್ತವಕ್ಕೆ ಕನ್ನಡಿ ಹಿಡಿವ ಇವರ ಚಿತ್ರಗಳ ಹಿಂದೆ ಕೇವಲ ಹಾಸ್ಯವಷ್ಟೇ ಇರದೇ ರಾಜಕಾರಣಿಗಳ ಗೋಸುಂಬೆತನ, ಮೋಸ, ವಂಚನೆ, ಮೂರ್ಖತನಗಳು ಅನಾವರಣಗೊಂಡಿರುತ್ತವೆ. 

ವ್ಯಂಗ್ಯಚಿತ್ರಗಳಿಗೆ ಭಾಷೆ ಬೇಡವಾಗಿದ್ದರೂ 'ಮೈನ್, ಹಮ್ & ಆಪ್' ಪುಸ್ತಕದ ಚಿತ್ರಗಳ ಸಂಭಾಷಣೆ, ಅಡಿ ಬರಹಗಳು ಆಂಗ್ಲದಲ್ಲಿವೆ. ಕನ್ನಡದಲ್ಲಿ ಈ ರೀತಿಯ ಪುಸ್ತಕಗಳು ಕಡಿಮೆಯೇ. ಆದುದರಿಂದ ಸತೀಶ್ ಅವರು ಆದಷ್ಟು ಬೇಗನೆ ಕನ್ನಡದಲ್ಲೂ ತಮ್ಮ ವ್ಯಂಗ್ಯಚಿತ್ರಗಳ ಪುಸ್ತಕವನ್ನು ಪ್ರಕಟಿಸಲಿ ಎಂದು ಆಶಿಸೋಣ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...