ವಿಷಯಕ್ಕೆ ಹೋಗಿ

ಹೊಸ ಸರ್ಕಾರ, ಹಳೆ ಆಶಯಗಳು !


​ಎನ್‌.ಡಿ.ಎ.ಗೆ ಸ್ಪಷ್ಟ ಬಹುಮತ ಬಂದಿರುವುದರಿಂದ ಕೆಲವೊಂದು ವಿಷಯಗಳು ಸ್ಪಷ್ಟವಾಗಿವೆ. 
೧. ಅತಂತ್ರ ಲೋಕಸಭೆ ಏನಾದರೂ ಆಗಿದ್ದರೆ ಅದರಿಂದ ದೇಶಕ್ಕೆ ತುಂಬಾ ನಷ್ಟವೇ ಆಗುತ್ತಿತ್ತು. 
೨. ರಾಹುಲ್‌ / ಸೋನಿಯಾಗಾಂಧಿಗೆ ಪಕ್ಷವನ್ನು/ದೇಶವನ್ನು ಮುನ್ನಡೆಸುವಂತಾ ಶಕ್ತಿ ಇಲ್ಲ ಅನ್ನುವುದು ಸಾಬೀತಾಯ್ತು.
೩. ಹತ್ತಾರು ವರ್ಷಗಳಿಂದ ಒಂದೇ ಪಕ್ಷದ ಅಧಿಕಾರ ಇರುವುದು ಕೂಡಾ ಉತ್ತಮ ಬೆಳವಣಿಗೆ ಅಲ್ಲ. ಅದರಲ್ಲೂ ೨ಜಿ, ಕಾಮನ್‌ವೆಲ್ತ್‌ನಂತಹ ಲಕ್ಷಾಂತರ ಕೋಟಿ ರೂಪಾಯಿಗಳ ಹಗರಣ ನಡೆದ ಬಳಿಕವೂ ಯುಪಿಎ ಯನ್ನು ಮುಂದುವರಿಸಿದ್ದರೆ ಅದು ಅವರ ಭ್ರಷ್ಟಾಚಾರಕ್ಕೆ ನೀಡುವ ಕುಮ್ಮಕ್ಕಿನಂತೆ ಆಗುವ ಸಾಧ್ಯತೆ ಇತ್ತು.
೪. ಕಾಂಗ್ರೆಸ್ ಅಲ್ಪಸಂಖ್ಯಾತರ ಮತಬ್ಯಾಂಕ್ ರಾಜಕಾರಣ ಮಾಡುತ್ತಾ ಬಂದಿರುವುದೇ ಬಹುಸಂಖ್ಯಾತರು ಬಿಜೆಪಿಯತ್ತ ಒಲಿಯಲು ಪ್ರಮುಖ ಕಾರಣ. 
೫. ಕಾಂಗ್ರೆಸ್ ಮಾಡಿದ ಒಳ್ಳೆಯ ಕೆಲಸಗಳನ್ನೂ ಪ್ರಚಾರ ಮಾಡದೇ ಕೇವಲ ರಾಹುಲ್‌ಗಾಂಧಿ ಬಜನೆಯಲ್ಲಿ ತೊಡಗಿದ್ದು ಮತ್ತೊಂದು ತಪ್ಪು. (ನೆಹರು ಕುಟುಂಬದಿಂದ ಆ ಪಕ್ಷ ಹೊರ ಬಾರದಿದ್ದುದರ ಪರಿಣಾಮ ಇದು)
೫. ಆಮ್ ಆದ್ಮಿ ಪಕ್ಷ ಸ್ಪಷ್ಟ ದಾರಿಯನ್ನು ಕಂಡುಕೊಳ್ಳಲಿಲ್ಲ. ಅದೂ ಕೂಡಾ ಕೇಜ್ರೀವಾಲ್ ಕೇಂದ್ರೀಕೃತವಾಯ್ತು, ಅಲ್ಲದೇ 'ಆಮ್ ಆದ್ಮಿ' ಎಂಬ ಹೆಸರೇ ಹಿಂದಿಯೇತರ ರಾಜ್ಯಗಳಿಗೆ ಪರಕೀಯವೆನ್ನಿಸುತ್ತದೆ.

ಅದೇನೇ ಇದ್ದರೂ ಜನರ ತೀರ್ಮಾನವೇ ಅಂತಿಮ. ಮುಂಬರುವ ಸರ್ಕಾರ, ಪ್ರಧಾನಿ ಜನರ/ದೇಶದ ಆಶೋತ್ತರಗಳಿಗೆ ಸ್ಪಂದಿಸಲಿ. ಮೋದಿ ಪ್ರಧಾನಿಯಾದಲ್ಲಿ ಚೆಡ್ಡಿಗಳನ್ನು ದೂರವಿಟ್ಟು ಉತ್ತಮ ಆಡಳಿತ ನೀಡಲಿ. ಸ್ವತಃ ಕೆಳ ಸಮುದಾಯದಿಂದ ಬಂದಿರುವ ಮೋದಿಯಿಂದಾದರೂ ದೇಶದ ಕೆಳವರ್ಗ ಮುಖ್ಯವಾಹಿನಿಗೆ ಬರುವಂತಾಗಲಿ. ಚೆಡ್ಡಿ ಬಳಗ ಹೇಳುವಂತೆ ಪಾಕಿಸ್ತಾನ, ಚೀನಾದ ಮೇಲೆಲ್ಲಾ ದಂಡೆತ್ತಿ ಹೋಗಿ ನಮ್ಮ ಸೈನಿಕರ ಪ್ರಾಣ ಪಣಕ್ಕಿಡುವುದರ ಬದಲಾಗಿ ಎಲ್ಲಾ ದೇಶಗಳ ಜೊತೆಗೂ ಉತ್ತಮ ಬಾಂಧವ್ಯವನ್ನು ವೃದ್ದಿಸಲಿ. ಭ್ರಷ್ಟಾಚಾರಕ್ಕೆ ಕೊನೆ ಹಾಡಿ ತಾನೇ ಹೇಳಿರುವಂತೆ 'ಎಲ್ಲಾ ಪಕ್ಷಗಳ ಭ್ರಷ್ಟಾಚಾರಿಗಳನ್ನೂ ಜೈಲಿಗೆ ಕಳಿಸಲಿ'. ಗುಜರಾಥಿಯೂ ಸೇರಿದಂತೆ ಎಲ್ಲಾ ಪ್ರಾದೇಶಿಕ ಭಾಷೆಗಳನ್ನೂ ಹಿಂದಿಯವರ ದಬ್ಬಾಳಿಕೆಯಿಂದ ಮುಕ್ತಗೊಳಿಸಿ ನಿಜವಾದ ಪ್ರಜಾಪ್ರಭುತ್ವವನ್ನು ನೀಡಲಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಪಡುವಣಕ್ಕೆ ಹೊರಟ ವಿಮಾನ ಏಕೆ ಬೇಗನೆ ತಲುಪುವುದಿಲ್ಲ ?

ಭೂಮಿ ವೇಗವಾಗಿ ಸುತ್ತುತ್ತಿದೆ ಎಂಬುದನ್ನು ಒಪ್ಪದವರು ಮುಂದಿಡುವ ಒಂದು ಪ್ರಶ್ನೆ ಹೀಗಿದೆ. "ಭೂಮಿ ಅಷ್ಟು ವೇಗವಾಗಿ ತಿರುಗುತ್ತ ಇದ್ದರೆ ಒಂದು ವಿಮಾನವು ಚೀನಾದಿಂದ ಸೌದಿಗೆ ಹೋಗಬೇಕಾದಲ್ಲಿ ಸ್ವಲ್ಪ ಮೇಲೆ ಹೋಗಿ ನಿಂತುಕೊಂಡರೆ ಸಾಕಲ್ಲ, ಭೂಮಿ ತಿರುಗುವುದರಿಂದ ಸೌದಿ ಅರೇಬಿಯಾ ತಾನಾಗಿಯೇ ವಿಮಾನದ ಕೆಳಗೆ ಬರುತ್ತದೆ. ಅಥವಾ ಮೂಡಣ ದಿಕ್ಕಿಗೆ ಹೊರಟ ವಿಮಾನವು ತಡವಾಗಿ ತಲುಪಬೇಕು ಮತ್ತು ಪಡುವಣ ದಿಕ್ಕಿಗೆ ಹೊರಟ ವಿಮಾನವು ಬೇಗನೆ ತಲುಪಬೇಕು" ಎಂಬ ವಾದವನ್ನು ಮುಂದಿಡುತ್ತಾರೆ. ಆದರೆ ಹಾಗೆ ಆಗಲು ಸಾಧ್ಯವಿಲ್ಲ, ಏಕೆಂದರೆ ಭೂಮಿ ಅಂದರೆ ಬರೀ ನೆಲವಷ್ಟೇ ಅಲ್ಲ, ಅದರ ಸುತ್ತಲಿನ ವಾತಾವರನವೂ ಸೇರಿ ಅದರ ಜೊತೆಗೇ ತಿರುಗುತ್ತಾ ಇದೆ. ಹಾಗಾಗಿ ವಿಮಾನವು ಮೇಲೆ ಹೋಗಿ ನಿಂತರೂ ಸಹ ಅದು ಭೂಮಿಯ ಜೊತೆಗೇ ಸಾಗುತ್ತದೆಯಾದ್ದರಿಂದ ಕೆಳಗಿನ ನೆಲ ಮಾತ್ರ ಜರುಗಲು ಸಾಧ್ಯ ಇಲ್ಲ. ಇದನ್ನು ನಾವೇ ಪರಿಶೀಲಿಸಬಹುದು. ಹೇಗೆಂದರೆ.. ವೇಗವಾಗಿ ಹೋಗುತ್ತಿರುವ ರೈಲಿನ ಎಲ್ಲಾ ಕಿಟಕಿಗಳನ್ನೂ ಮುಚ್ಚಿ ಅದರ ಮಾಡಿನ ಹತ್ತಿರದಿಂದ ಒಂದು ಚಿಕ್ಕ ವಸ್ತುವನ್ನು (ಉದಾ : ಗೋಲಿ) ಬಿಟ್ಟರೆ ಅದು ನಾವು ಬಿಟ್ಟಬಿಂದುವಿನ ನೇರಕ್ಕೇ ಬಿಳುತ್ತದೆಯೆ ಹೊರತಾಗಿ ರೈಲು ಓಡುತ್ತಿರುವುದರಿಂದ ಸ್ವಲ್ಪ ಹಿಂದೆ ಬೀಳುವುದಿಲ್ಲ. ಹಾಗೆಯೇ ಗಾಳಿಯಾಡದಂತೆ ಮುಚ್ಚಿದ ರೈಲು ಬೋಗಿಯ ಒಳಗೆ ಒಂದು ತುದಿಯಿಂದ ಇನ್ನೊಂದು ತುದಿಗೆ ಚೆಂಡನ್ನು ಒಂದೇ ಜೋರಿನಲ್ಲಿ ಎಸೆದರೆ ಅದು ಎರಡೂ ದಿಕ್ಕಿಗೂ (ಮುಂದಿನಿ...