ವಿಷಯಕ್ಕೆ ಹೋಗಿ

ಬಿಜೆಪಿಯವರು ದೇವರಲ್ಲ, ಕಾಂಗ್ರೆಸ್‌ನವರು ರಾಕ್ಷಸರಲ್ಲ



ಬಿಜೆಪಿಯ ಭಟ್ಟಂಗಿಗಳು 'ಕಾಂಗ್ರೆಸ್‌ನಿಂದ ಏನೂ ಅಭಿವೃದ್ದಿ ಆಗಿಲ್ಲ' ಎಂದು ಹೇಳುತ್ತಾ ಮತ್ತೊಂದು ಕಾಂಗ್ರೆಸ್ ವಿರೋಧಿ ಸಮೂಹ ಸನ್ನಿ ಸೃಷ್ಟಿಸುತ್ತಿದ್ದಾರೆ, ಅಥವಾ ಈಗಾಗಲೇ ಸೃಷ್ಟಿಸಿದ್ದಾರೆ. ಕಾಂಗ್ರೆಸ್‌ನಿಂದ ಅಭಿವೃದ್ದಿಯೇ ಆಗಿಲ್ಲ ಅನ್ನೋದನ್ನ ಒಪ್ಪಲು ಸಾಧ್ಯವೇ ?  ಖಂಡಿತಾ ಬೇಕಾದಷ್ಟು ಕೆಲಸಗಳಾಗಿವೆ. 

ನಮ್ಮ ಹಳ್ಳಿಯಲ್ಲಿ ಅವರು ಶಾಲೆಯನ್ನು ತೆರೆಯದೇ ಹೋಗಿದ್ದರೆ ನಾನಿವತ್ತು ನಮ್ಮ ತಂದೆ ತಾಯಿಯಂತೆ ನಮ್ಮೂರಿನ ಧನಿಕರ ಮನೆ ಸೆಗಣಿ ಬಳಿದುಕೊಂಡು ಜೀವಿಸಬೇಕಾಗಿತ್ತು! ನನಗಿಂತಾ ಹಿಂದಿನವರು ಕಲಿಯುವ ಅವಕಾಶವಿಲ್ಲದೇ ಆ ಕೆಲಸ ಮಾಡಿಕೊಂಡಿದ್ದಾರೆ.

ಅಂದು ಐದನೇ ತರಗತಿ ವರೆಗೆ ಮಾತ್ರ ಇದ್ದ ಶಾಲೆಯಲ್ಲಿ ಏಳನೇ ತರಗತಿ ವರೆಗೂ ಅವಕಾಶ ಕಲ್ಪಿಸಿದಾಗ ಅದೇ ಊರಿನ ಮೇಲ್ವರ್ಗದ ಧನಿಕರು ಶಾಲೆಗೆ ಬೀಗ ಜಡಿದು ಉಪಾಧ್ಯಾಯರಿಗೆ 'ನಮ್ಮ ಅನುಮತಿ ಇಲ್ಲದೇ ಹೇಗೆ ಏಳನೇ ತರಗತಿ ವರೆಗೂ ಪಾಠ ಮಾಡ್ತೀರಿ ?' ಎಂದು ಧಮಕಿ ಹಾಕಿದ್ದನ್ನ ನಾನಿನ್ನೂ ಮರೆತಿಲ್ಲ. ಈ ಊರಿನ ಬಡ ಮಕ್ಕಳೆಲ್ಲಾ ಹೆಚ್ಚು ಓದುತ್ತಾ ಹೋದಂತೆ ತಮ್ಮ ಮನೆ-ತೋಟದ ಕೆಲಸಕ್ಕೆ ಕೂಲಿಗಳ ಬರ ಏರ್ಪಡುತ್ತದೆ ಎಂಬ ಆತಂಕ ಅಂದೇ ಅವರನ್ನು ಕಾಡಿತ್ತು!

ಕಾಂಗ್ರೆಸ್ ಸರ್ಕಾರ ಸರ್ಕಾರಿ ಬಸ್ ಸೇವೆಯನ್ನು ನಮ್ಮ ಕುಗ್ರಾಮಗಳವರೆಗೂ ನೀಡದೇ ಹೋಗಿದ್ದರೂ ಸಹ ನನ್ನ ವಿಧ್ಯಾಭ್ಯಾಸ ಏಳನೇ ತರಗತಿಗೇ ಕೊನೆಯಾಗಿರುತ್ತಿತ್ತು. ಇಂತಹ ಅನೇಕ ಸವಲತ್ತುಗಳನ್ನು ಪಡೆದು ಬೆಳೆದ ನಾನು ಕಾಂಗ್ರೆಸ್‌ನಿಂದ ಏನೂ ಆಗಿಲ್ಲ ಅಂತ ಹೇಳಿ ಆತ್ಮವಂಚನೆ ಮಾಡಿಕೊಳ್ಳಲಾರೆ. (ನನ್ನಂತೆಯೇ ಅವಕಾಶಗಳನ್ನು ಬಳಸಿಕೊಂಡ ಅನೇಕರು ಇಂದು ಬಿಜೆಪಿ ಭಟ್ಟಂಗಿಗಳ ಸಮೂಹ ಸನ್ನಿಗೆ ಒಳಗಾಗಿ ಕಾಂಗ್ರೆಸ್‌ನಿಂದ ಏನೂ ಆಗಿಲ್ಲ ಅಂತ ಹೇಳುವುದನ್ನು ಕಂಡಾಗ ಖೇದವಾಗುತ್ತದೆ.)

ಇನ್ನು ದೊಡ್ಡ ದೊಡ್ಡ ವಿಷಯಗಳಿಗೆ ಬಂದಾಗ, ಇತರೆ ದೇಶಗಳ ಎದುರು ಎದೆ ತಟ್ಟಿ ನಿಲ್ಲುವ ಮಟ್ಟಕ್ಕೆ ನಮ್ಮ ಸೇನೆ ಬಲಿಷ್ಟವಾಗಿರುವುದು ಕಾಂಗ್ರೆಸ್‌ನ ಅವಧಿಯಲ್ಲೇ ಅಲ್ಲವೇ ? ಮೂರು ಯುದ್ಧಗಳಲ್ಲಿ ಪಾಕಿಸ್ತಾನದ ಸೊಕ್ಕನ್ನು ಅಡಗಿಸಿದ್ದು ಕಂಗ್ರೆಸ್‌ ಸರ್ಕಾರ ಅಲ್ಲವೇ ? ಮೊದಲ ಅಣುಬಾಂಬ್ ಪರೀಕ್ಷೆ ನಡೆದದ್ದು ಕಾಂಗ್ರೆಸ್‌ ಅವಧಿಯಲ್ಲಿ ಅಲ್ಲವೇ ? ಇನ್ಸಾಟ್‌ ಉಪಗ್ರಹಗಳನ್ನು ಹಾರಿಸಿ ಜಗತ್ತಿನ ಕೆಲವೇ ದೇಶಗಳ ಪಟ್ಟಿಯಲ್ಲಿ (ಉಪಗ್ರಹ ಅಭಿವೃದ್ದಿ/ಉಡಾವಣೆ) ಭಾರತವೂ ಸ್ಥಾನ ಪಡೆಯಲು ಕಾಂಗ್ರೆಸ್ ಸರ್ಕಾರ ಕಾರಣವಲ್ಲವೇ ? ಹೀಗೆ ಇನ್ನೂ ಪಟ್ಟಿ ಮಾಡಬಹುದು.

ನಿಜ, ಅವರಿಂದಲೂ ಯಡವಟ್ಟುಗಳಾಗಿವೆ, ತಪ್ಪುಗಳಾಗಿವೆ, ಭ್ರಷ್ಟಾಚಾರಗಳಾಗಿವೆ, ಇನ್ನೂ ಒಂದಿಷ್ಟು ಅಭಿವೃದ್ದಿ ಮಾಡಬಹುದಿತ್ತು. ನೆಹರು ಕುಟುಂಬದಿಂದ ಪಕ್ಷ ಹೊರ ಬರಬೇಕಾಗಿತ್ತು. ಮುಸ್ಲಿಂ ತುಷ್ಟೀಕರಣವನ್ನು ಮಾಡಬಾರದಿತ್ತು. ಆದರೆ ಇವೆಲ್ಲವನ್ನೂ ಬಿಜೆಪಿ ಈಗ ಮತ್ತೊಂದು ಬಗೆಯಲ್ಲಿ ಮಾಡುತ್ತಿದೆ ಅನ್ನೋದು ಕೂಡಾ ನಿಜವಲ್ಲವೇ ? ಕಾಂಗ್ರೆಸ್ ಅಂದರೆ ದೇಶದ್ರೋಹಿಗಳು ಅಂತ ಬಿಂಬಿಸೋದು ಎಷ್ಟು ಸರಿ ? 

ಬಿಜೆಪಿಯಿಂದ ಏನೂ ಅಭಿವೃದ್ದಿ ಆಗಲ್ಲ ಅಂತ ನಾನು ಹೇಳಲಾರೆ. ಇವರೂ ಮಾಡುತ್ತಾರೆ. ಇವರಿಂದಲೂ ತಪ್ಪುಗಳಾಗುತ್ತವೆ, ಭ್ರಷ್ಟಾಚಾರಗಳಾಗುತ್ತವೆ, ಏಕೆಂದರೆ ಎಲ್ಲರೂ ಮನುಷ್ಯರೆ. ಬಿಜೆಪಿಯವರು ದೇವರಲ್ಲ, ಕಾಂಗ್ರೆಸ್‌ನವರು ರಾಕ್ಷಸರಲ್ಲ. ಪಕ್ಷಗಳ ನಡುವೆ ಅಭಿವೃದ್ದಿಯಲ್ಲಿ ಪೈಪೋಟಿ ಇರಲಿ, ಎಲ್ಲರೂ ಸೇರಿ ದೇಶವನ್ನು ಮುನ್ನಡೆಸುವ ಬಗ್ಗೆ ಗಮನ ಹರಿಸಲಿ. ಈ ಮಾತು ಗೆದ್ದ ನಂತ ಮೋದಿಯ ಬಾಯಿಂದಲೇ ಬಂದಿದೆ, ಆದರೆ ಮೋದಿ ಬ್ರಿಗೇಡುಗಳು ಮಾತ್ರ ಇನ್ನೂ ಅಂಧಕಾರದ ಅಹಂನಲ್ಲೇ ಇದ್ದಾರೆ!

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...