ವಿಷಯಕ್ಕೆ ಹೋಗಿ

ಬಿಜೆಪಿಯವರು ದೇವರಲ್ಲ, ಕಾಂಗ್ರೆಸ್‌ನವರು ರಾಕ್ಷಸರಲ್ಲ



ಬಿಜೆಪಿಯ ಭಟ್ಟಂಗಿಗಳು 'ಕಾಂಗ್ರೆಸ್‌ನಿಂದ ಏನೂ ಅಭಿವೃದ್ದಿ ಆಗಿಲ್ಲ' ಎಂದು ಹೇಳುತ್ತಾ ಮತ್ತೊಂದು ಕಾಂಗ್ರೆಸ್ ವಿರೋಧಿ ಸಮೂಹ ಸನ್ನಿ ಸೃಷ್ಟಿಸುತ್ತಿದ್ದಾರೆ, ಅಥವಾ ಈಗಾಗಲೇ ಸೃಷ್ಟಿಸಿದ್ದಾರೆ. ಕಾಂಗ್ರೆಸ್‌ನಿಂದ ಅಭಿವೃದ್ದಿಯೇ ಆಗಿಲ್ಲ ಅನ್ನೋದನ್ನ ಒಪ್ಪಲು ಸಾಧ್ಯವೇ ?  ಖಂಡಿತಾ ಬೇಕಾದಷ್ಟು ಕೆಲಸಗಳಾಗಿವೆ. 

ನಮ್ಮ ಹಳ್ಳಿಯಲ್ಲಿ ಅವರು ಶಾಲೆಯನ್ನು ತೆರೆಯದೇ ಹೋಗಿದ್ದರೆ ನಾನಿವತ್ತು ನಮ್ಮ ತಂದೆ ತಾಯಿಯಂತೆ ನಮ್ಮೂರಿನ ಧನಿಕರ ಮನೆ ಸೆಗಣಿ ಬಳಿದುಕೊಂಡು ಜೀವಿಸಬೇಕಾಗಿತ್ತು! ನನಗಿಂತಾ ಹಿಂದಿನವರು ಕಲಿಯುವ ಅವಕಾಶವಿಲ್ಲದೇ ಆ ಕೆಲಸ ಮಾಡಿಕೊಂಡಿದ್ದಾರೆ.

ಅಂದು ಐದನೇ ತರಗತಿ ವರೆಗೆ ಮಾತ್ರ ಇದ್ದ ಶಾಲೆಯಲ್ಲಿ ಏಳನೇ ತರಗತಿ ವರೆಗೂ ಅವಕಾಶ ಕಲ್ಪಿಸಿದಾಗ ಅದೇ ಊರಿನ ಮೇಲ್ವರ್ಗದ ಧನಿಕರು ಶಾಲೆಗೆ ಬೀಗ ಜಡಿದು ಉಪಾಧ್ಯಾಯರಿಗೆ 'ನಮ್ಮ ಅನುಮತಿ ಇಲ್ಲದೇ ಹೇಗೆ ಏಳನೇ ತರಗತಿ ವರೆಗೂ ಪಾಠ ಮಾಡ್ತೀರಿ ?' ಎಂದು ಧಮಕಿ ಹಾಕಿದ್ದನ್ನ ನಾನಿನ್ನೂ ಮರೆತಿಲ್ಲ. ಈ ಊರಿನ ಬಡ ಮಕ್ಕಳೆಲ್ಲಾ ಹೆಚ್ಚು ಓದುತ್ತಾ ಹೋದಂತೆ ತಮ್ಮ ಮನೆ-ತೋಟದ ಕೆಲಸಕ್ಕೆ ಕೂಲಿಗಳ ಬರ ಏರ್ಪಡುತ್ತದೆ ಎಂಬ ಆತಂಕ ಅಂದೇ ಅವರನ್ನು ಕಾಡಿತ್ತು!

ಕಾಂಗ್ರೆಸ್ ಸರ್ಕಾರ ಸರ್ಕಾರಿ ಬಸ್ ಸೇವೆಯನ್ನು ನಮ್ಮ ಕುಗ್ರಾಮಗಳವರೆಗೂ ನೀಡದೇ ಹೋಗಿದ್ದರೂ ಸಹ ನನ್ನ ವಿಧ್ಯಾಭ್ಯಾಸ ಏಳನೇ ತರಗತಿಗೇ ಕೊನೆಯಾಗಿರುತ್ತಿತ್ತು. ಇಂತಹ ಅನೇಕ ಸವಲತ್ತುಗಳನ್ನು ಪಡೆದು ಬೆಳೆದ ನಾನು ಕಾಂಗ್ರೆಸ್‌ನಿಂದ ಏನೂ ಆಗಿಲ್ಲ ಅಂತ ಹೇಳಿ ಆತ್ಮವಂಚನೆ ಮಾಡಿಕೊಳ್ಳಲಾರೆ. (ನನ್ನಂತೆಯೇ ಅವಕಾಶಗಳನ್ನು ಬಳಸಿಕೊಂಡ ಅನೇಕರು ಇಂದು ಬಿಜೆಪಿ ಭಟ್ಟಂಗಿಗಳ ಸಮೂಹ ಸನ್ನಿಗೆ ಒಳಗಾಗಿ ಕಾಂಗ್ರೆಸ್‌ನಿಂದ ಏನೂ ಆಗಿಲ್ಲ ಅಂತ ಹೇಳುವುದನ್ನು ಕಂಡಾಗ ಖೇದವಾಗುತ್ತದೆ.)

ಇನ್ನು ದೊಡ್ಡ ದೊಡ್ಡ ವಿಷಯಗಳಿಗೆ ಬಂದಾಗ, ಇತರೆ ದೇಶಗಳ ಎದುರು ಎದೆ ತಟ್ಟಿ ನಿಲ್ಲುವ ಮಟ್ಟಕ್ಕೆ ನಮ್ಮ ಸೇನೆ ಬಲಿಷ್ಟವಾಗಿರುವುದು ಕಾಂಗ್ರೆಸ್‌ನ ಅವಧಿಯಲ್ಲೇ ಅಲ್ಲವೇ ? ಮೂರು ಯುದ್ಧಗಳಲ್ಲಿ ಪಾಕಿಸ್ತಾನದ ಸೊಕ್ಕನ್ನು ಅಡಗಿಸಿದ್ದು ಕಂಗ್ರೆಸ್‌ ಸರ್ಕಾರ ಅಲ್ಲವೇ ? ಮೊದಲ ಅಣುಬಾಂಬ್ ಪರೀಕ್ಷೆ ನಡೆದದ್ದು ಕಾಂಗ್ರೆಸ್‌ ಅವಧಿಯಲ್ಲಿ ಅಲ್ಲವೇ ? ಇನ್ಸಾಟ್‌ ಉಪಗ್ರಹಗಳನ್ನು ಹಾರಿಸಿ ಜಗತ್ತಿನ ಕೆಲವೇ ದೇಶಗಳ ಪಟ್ಟಿಯಲ್ಲಿ (ಉಪಗ್ರಹ ಅಭಿವೃದ್ದಿ/ಉಡಾವಣೆ) ಭಾರತವೂ ಸ್ಥಾನ ಪಡೆಯಲು ಕಾಂಗ್ರೆಸ್ ಸರ್ಕಾರ ಕಾರಣವಲ್ಲವೇ ? ಹೀಗೆ ಇನ್ನೂ ಪಟ್ಟಿ ಮಾಡಬಹುದು.

ನಿಜ, ಅವರಿಂದಲೂ ಯಡವಟ್ಟುಗಳಾಗಿವೆ, ತಪ್ಪುಗಳಾಗಿವೆ, ಭ್ರಷ್ಟಾಚಾರಗಳಾಗಿವೆ, ಇನ್ನೂ ಒಂದಿಷ್ಟು ಅಭಿವೃದ್ದಿ ಮಾಡಬಹುದಿತ್ತು. ನೆಹರು ಕುಟುಂಬದಿಂದ ಪಕ್ಷ ಹೊರ ಬರಬೇಕಾಗಿತ್ತು. ಮುಸ್ಲಿಂ ತುಷ್ಟೀಕರಣವನ್ನು ಮಾಡಬಾರದಿತ್ತು. ಆದರೆ ಇವೆಲ್ಲವನ್ನೂ ಬಿಜೆಪಿ ಈಗ ಮತ್ತೊಂದು ಬಗೆಯಲ್ಲಿ ಮಾಡುತ್ತಿದೆ ಅನ್ನೋದು ಕೂಡಾ ನಿಜವಲ್ಲವೇ ? ಕಾಂಗ್ರೆಸ್ ಅಂದರೆ ದೇಶದ್ರೋಹಿಗಳು ಅಂತ ಬಿಂಬಿಸೋದು ಎಷ್ಟು ಸರಿ ? 

ಬಿಜೆಪಿಯಿಂದ ಏನೂ ಅಭಿವೃದ್ದಿ ಆಗಲ್ಲ ಅಂತ ನಾನು ಹೇಳಲಾರೆ. ಇವರೂ ಮಾಡುತ್ತಾರೆ. ಇವರಿಂದಲೂ ತಪ್ಪುಗಳಾಗುತ್ತವೆ, ಭ್ರಷ್ಟಾಚಾರಗಳಾಗುತ್ತವೆ, ಏಕೆಂದರೆ ಎಲ್ಲರೂ ಮನುಷ್ಯರೆ. ಬಿಜೆಪಿಯವರು ದೇವರಲ್ಲ, ಕಾಂಗ್ರೆಸ್‌ನವರು ರಾಕ್ಷಸರಲ್ಲ. ಪಕ್ಷಗಳ ನಡುವೆ ಅಭಿವೃದ್ದಿಯಲ್ಲಿ ಪೈಪೋಟಿ ಇರಲಿ, ಎಲ್ಲರೂ ಸೇರಿ ದೇಶವನ್ನು ಮುನ್ನಡೆಸುವ ಬಗ್ಗೆ ಗಮನ ಹರಿಸಲಿ. ಈ ಮಾತು ಗೆದ್ದ ನಂತ ಮೋದಿಯ ಬಾಯಿಂದಲೇ ಬಂದಿದೆ, ಆದರೆ ಮೋದಿ ಬ್ರಿಗೇಡುಗಳು ಮಾತ್ರ ಇನ್ನೂ ಅಂಧಕಾರದ ಅಹಂನಲ್ಲೇ ಇದ್ದಾರೆ!

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಗುರುವಿನಂತಹ ಆಂಟಿಯಿರಬೇಕು

ಎಲ್ಲರಿಗೂ ಅಂಥಹ ಆಂಟಿ ಸಿಕ್ಕಿಬಿಡುತ್ತಾರೆನ್ನಲಾಗದು. ಆದರೂ ಸಿಕ್ಕಿವರೇ ಅದೃಷ್ಟವಂತರು. ಆಂಟಿಯೆಂದರೆ `ಚಿಕ್ಕಮ್ಮ' ಎಂದು ಆರ್ಥ. ಅಂದರೆ ಅಮ್ಮನಿಗೇ ಸಮಾನ. ಆದರೆ ಆಂಟಿ ನೀಡುವ ಪ್ರೀತಿ. ವಿಶ್ವಾಸ ವಿಭಿನ್ನ. ಆಂಟಿ ಎಂಬುದರ ಅರ್ಥ ಚಿಕ್ಕಮ್ಮನೇ ಆದರೂ ಎಲ್ಲರಿಗೂ ಚಿಕ್ಕಮ್ಮ ಇರುವ ಸಂದರ್ಭ ಕಡಿಮೆ. ಇದ್ದರೂ ನಾವು ಬಯಸುವಂತಹ ದೇವರಂತಹ ಅಥವಾ ಗುರುವಿನಂತಹ ಆಂಟಿಯಾಗಿರಲೂ ಸಾಧ್ಯವಿಲ್ಲ. ಆಗ ಬೇರೆ ಯಾರೋ ಒಬ್ಬರು ಆ ಜಾಗಕ್ಕೆ ಬಂದರೆ ಉತ್ತಮ. ಆದರಲ್ಲೂ ಟೀನೇಜ್ನ ಹುಡುಗ ಹುಡುಗಿಯರಿಗೆ ಅಪ್ಯಾಯಮಾನಳಾದ ಒಬ್ಬ ಆಂಟಿ ಇರಲೇಬೇಕು. ಆಕೆಗೆ ಮೂವತ್ತರಿಂದ ನಲವತ್ತು ವರ್ಷ ವಯಸ್ಸಿರಬೇಕು. ಅಂದಾಗ ಮದುವೆಯಾಗಿರುತ್ತದೆ. ಮತ್ತು ಹೆಚ್ಚು ಕಡಿಮೆ ಟೀನೇಜು ಪ್ರವೇಶಿಸುವ ಅಥವಾ ಪ್ರವೇಶಿಸಿರುವ ಮಕ್ಕಳಿರುತ್ತಾರೆ. ಗೆಳೆತನದ ಅನುಭವದ ಜೊತೆಗೆ ತಾಯ್ತನದ ಅನುಭವವೂ ಇರುತ್ತದೆ. ಆಕೆಯ ಮೇಲೆ ಗೌರವವೂ ಮೂಡುತ್ತದೆ. ಅವರು ನಮ್ಮನ್ನು ಪ್ರೀತಿಸುತ್ತಾಳೆ. ಒಳ್ಳೆಯ ಗುಣಗಳನ್ನು ಹೇಳಿಕೊಡುತ್ತಾಳೆ. ತಪ್ಪು ಮಾಡಿದಾಗ ಖಂಡಿಸುತ್ತಾಳೆ, ಜೋಕು ಹೇಳಿದಾಗ ನಕ್ಕು ಪ್ರೋತ್ಸಾಹಿಸುತ್ತಾಳೆ. ಅಲ್ಪಸ್ವಲ್ಪ ಪೋಲಿತನಗಳನ್ನೂ ಸಹಿಸುತ್ತಾಳೆ. ಹೆಚ್ಚಾದರೆ ತಿವಿದು ಬುದ್ಧಿ ಕಲಿಸುತ್ತಾಳೆ. ಹೆಚ್ಚಾಗಿ ಸ್ವಂತ ಚಿಕ್ಕಮ್ಮನಿಲ್ಲದೇ ಹೋದಾಗ ಗೆಳೆಯ ಗೆಳತಿಯರ ತಾಯಿ ಈ ಪಾತ್ರ ವಹಿಸಬಲ್ಲರು. ಬಾಲ್ಯದಲ್ಲಿ ನಮ್ಮನ್ನು ಎತ್ತಿ ಮುದ್ದಾಡಿದ ಪಕ್ಕದ ಮನೆ ಆಂಟಿ ಈ ಸ್ಥಾನ ತುಂಬಲು ತೀರಾ ಯೋಗ್ಯ. ಈ ಆ...

ದೈವಜ್ಞರು ತಂದಿಟ್ಟ ಪಜೀತಿ!

ಇದು ನಿನ್ನೆ ತಾನೆ ನಡೆದ ಘಟನೆ. ನನ್ನ ಆತ್ಮೀಯ ಸ್ನೇಹಿತನೊಬ್ಬ ಸ್ವಲ್ಪ ಆರ್ಥಿಕ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಆತನ ಸಂಬಂಧಿಕರು ಯಾರೋ ಪರಿಹಾರಕ್ಕಾಗಿ ಹಿರಿಯ ಆಧ್ಯಾತ್ಮಿಕವಾದಿಯಾದ ದೈವಜ್ಞ ಬಿರುದಾಂಕಿತ ಶ್ರೀ ಸೋಮಯಾಜಿಯವರ ಬಳಿ ಹೋಗಿ ಸಲಹೆ ಕೇಳುವಂತೆ ತಿಳಿಸಿದ್ದಾರೆ. ಅದರ ಪ್ರಕಾರ ನನ್ನ ಸ್ನೇಹಿತ ಮತ್ತು ಅವನ ಪತ್ನಿ ನಿನ್ನೆ ಇವರ ಬಳಿ ತೆರಳಿದ್ದಾರೆ. ಸಮಸ್ಯೆಯನ್ನು ಪೂರ್ತಿ ಆಲಿಸಿದ ಬಳಿಕ ಅವರು ನನ್ನ ಸ್ನೇಹಿತನಿಗೆ ಅವನ ಪತ್ನಿಯ ಎದುರೇ ಹೇಳಿದ್ದು "ನಿಮಗೆ ಈಗ ಅಥವಾ ಹಿಂದೆ ಬೇರೆ ಹೆಣ್ಣಿನೊಂದಿಗೆ ಸಂಬಂಧ ಇದ್ದುದರಿಂದ ಆಕೆಯ ಶಾಪ ತಟ್ಟಿದೆ. ಆ ಕಾರಣದಿಂದಲೇ ನೀವು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದೀರ. ಇದರ ಪರಿಹಾರಕ್ಕೆ ಒಂದು ಪೂಜೆ ಮಾಡಬೇಕು." ಎಂದು. ನನ್ನ ಆ ಸ್ನೇಹಿತನನ್ನು ನಾನು ಹತ್ತು ವರ್ಷದಿಂದ ತೀರಾ ಹತ್ತಿರದಿಂದ ಬಲ್ಲೆ. ಆತನ ಖಾಸಗಿ ವಿಷಯ ಎಲ್ಲವೂ ನನಗೆ ಗೊತ್ತು. ಆತನಿಗೆ ಯಾವ ಹೆಣ್ಣಿನ ಸಂಬಂಧವೂ ಇರಲಿಲ್ಲ ಮತ್ತು ಇಲ್ಲ. ಅವರು ಇಂತಹ ಸುಳ್ಳು ಹೇಳುವ ಅಗತ್ಯ ಇರಲಿಲ್ಲ. ಒಂದು ವೇಳೆ ಅಂತಹುದೊಂದು ಸಂಬಂಧ ಇತ್ತು ಎಂದೇ ಭಾವಿಸಿದರೂ ಹಿರಿಯರಾದ ಸೋಮಯಾಜಿಯವರು ಅದನ್ನು ಆತನ ಪತ್ನಿಯ ಎದುರೇ ಹೇಳುವ ಅಗತ್ಯ ಏನಿತ್ತು ? ( ನಿಜಕ್ಕೂ ಗೆಳೆಯನ ಪತ್ನಿ ಗಂಡನ ಮೇಲೆ ಮುನಿಸಿಕೊಂಡಿದ್ದಾರೆ ) ಸಮಸ್ಯೆಯನ್ನು ಬಗೆ ಹರಿಸಿ ಎಂದು ಇಂತವರ ಬಳಿ ತೆರಳಿದರೆ ಹೊಸ ಸಮಸ್ಯೆಯನ್ನು ಹುಟ್ಟು ಹಾಕಿ ಕಳಿಸ್ತಾರಲ್ಲ...

ನಾಲ್ಕು ಎರಡು ಸಾಲಿನ ಕತೆಗಳು

1. ಕಾಡಿನಲ್ಲಿ ದಾರಿ ಕಾಣದೇ ಅತ್ತಿತ್ತ ಅಲೆದಾಡುತ್ತಿದ್ದವನ ಪಕ್ಕದಲ್ಲೇ ಒಂದು ಕಾರು ಬಂದು ನಿಂತಿತು. ಅದರಿಂದ ಇಣುಕಿದ ಸುಂದರ ಯುವತಿ "ಬನ್ನಿ ಡ್ರಾಪ್ ಮಾಡ್ತೀನಿ" ಎಂದು ಉಲಿದಳು. ಸಂತೋಷದಿಂದ ಹತ್ತಿ ಕುಳಿತ.... ಮರುಕ್ಷಣವೇ ಎಚ್ಚರಾಗಿ ಹೋಯ್ತು. 2. "ನೀನು ತುಂಬಾ ಸುಂದರಿ" "ನೀನು ತುಂಬಾ ತುಂಟ" 3."ನಿನಗೆ ವಯಸ್ಸಾಯ್ತು ಕಣೆ" "ನಿಮಗೆ ಕೈಲಾಗಲ್ಲ" 4. ಆತ ತಡವರಿಸಿ ತಡವರಿಸಿ "ಐ ಲವ್ ಯೂ" ಅಂದ. ಆಕೆ ತಡವರಿಸದೇ ನುಡಿದಳು.. "ನೀನು ಇನ್ನೂ ಶುರುನಲ್ಲೇ ಇದೀಯಲ್ಲೋ" 5. ನೀರಿನಲ್ಲಿ ಮೀನಿನ ಹೆಜ್ಜೆ ಗುರುತನ್ನು ಹುಡುಕುತ್ತಾ ಹೊರಟ ಅವನಿಗೆ ಅವಳು ಅವನ ಹೃದಯದೊಳಗೆ ಬಂದು ಹೋದ ಗುರುತು ಕಾಣಿಸಲೇ ಇಲ್ಲ. 6. "ಹೆಣ್ಣೇ ಆದರೂ ಈ ಸಲ ಭ್ರೂಣ ಹತ್ಯೆ  ಮಾಡಿಸುವುದು ಬೇಡ" ಅವರು ಮಾತಾಡಿಕೊಂಡರು. ಆದರೆ ಅದೇಕೋ ಅವಳ ಮುಟ್ಟು ನಿಲ್ಲಲೇ ಇಲ್ಲ. 7. "ಅಮ್ಮಾ... ಯಾವ ಸೀಮೆಯ ರಾಜಕುಮಾರ ಬಂದು ಕರೆದರೂ ನಾ ನಿನ್ನ ಬಿಟ್ಟು ಹೋಗಲಾರೆ" ಅಂದಿದ್ದ ಮಗಳು ಗಮಾರನೊಬ್ಬನ ಪ್ರೇಮಕ್ಕೆ ಸಿಲುಕಿ ಓಡಿ ಹೋದಳು. 8. ಜೀವನದಲ್ಲಿ ಏನೂ ಸಾಧಿಸಲಾಗದೆ ಅವನು ಜಿಗುಪ್ಸೆಗೊಂಡು ಕಾಡಿಗೆ ಹೋಗಿ ದೊಡ್ಡ ಮರವೊಂದಕ್ಕೆ ಹಗ್ಗ ಕಟ್ಟಿ ನೇಣು ಹಾಕಿಕೊಂಡ. ಹಗ್ಗ ತುಂಡಾದ ಕಾರಣ ಸಾವನ್ನೂ ಸಾಧಿಸಲಾಗೆದೇ ಮನೆಗೆ ಹಿಂದಿರುಗಿದ. 9. ಎರಡು ಸಾಲಿನ ಕಥೆ ಹೇಳ...