ವಿಷಯಕ್ಕೆ ಹೋಗಿ

ಗುರುತ್ವ ಬಲದಿಂದ ವಿಶ್ವದ ನಿರ್ದಿಷ್ಟ ಭಾಗಕ್ಕೆ ಚಲಿಸಬಹುದೇ ?


ಬೇರೆ ಗ್ರಹದ ಜೀವಿಗಳು ಭೂಮಿಯನ್ನು ತಲುಪುವುದು ಇಂದಿಗೂ ಬಿಡಿಸಲಾಗದ ರಹಸ್ಯವಾಗಿದೆ. ಅಷ್ಟು ದೂರದಿಂದ ಬರಲು ಅಗಾಧವಾದ ಇಂದನ ಬೇಕಾಗುತ್ತದೆ. ಹಾಗೂ ಅದಕ್ಕಿಂತಲೂ ಮಿಗಿಲಾದ ವೇಗವೂ ಬೇಕು.

ಅವರು ಎಲ್ಲಾ ಗ್ರಹಗಳಿಗೂ ಇರುವ ಪ್ರತ್ಯೇಕ ಗುರುತ್ವ ಶಕ್ತಿಯನ್ನೋ ಅಥವಾ ಕಾಂತ ಶಕ್ತಿಯನ್ನೋ ಬಳಸಿ ಆ ಗ್ರಹದ ಸಮೀಪ ಹೋಗುವ ವಿಶಿಷ್ಟ ಯಂತ್ರಗಳನ್ನು ಬಳಸುತ್ತಿರಬಹುದೇ ? 

ಉದಾಹರಣೆಗೆ ನಮ್ಮ ಭೂಮಿಗೆ ಇರುವ ಗುರುತ್ವ ಬಲ ಇನ್ನೊಂದು ಗ್ರಹಕ್ಕೆ ಇಷ್ಟೇ ಪ್ರಮಾಣದಲ್ಲಿ ಇರಲಾರದು. ಈ ಗುರುತ್ವ ಬಲವನ್ನು ಗ್ರಹಿಸುವ ಯಂತ್ರವೊಂದನ್ನು ಕಂಡು ಹಿಡಿದಿದ್ದೇ ಆದಲ್ಲಿ ಪ್ರತಿ ಗ್ರಹವನ್ನೂ ಪ್ರತ್ಯೇಕವಾಗಿ ಗುರುತಿಸಬಹುದಾಗಿದೆ. ಸೌರ ಮಂಡಲದಿಂದ ಹೊರಗಿರುವಾಗ ಸೌರಮಂಡಲದ ಗುರುತ್ವ ಬಲವನ್ನು ಗ್ರಹಿಸಿ ಸೌರ ಮಂಡಲ ಪ್ರವೇಶಿಸಬಹುದು. ಕ್ಷೀರ ಪಥದಿಂದ ಹೊರಗಿರುವಾಗ ಕ್ಷೀರಪಥದ ಗುರುತ್ವ ಬಲವನ್ನು ಗ್ರಹಿಸಿ ನಮ್ಮ ಗೆಲಾಕ್ಸಿಯನ್ನು ಪ್ರವೇಶಿಸಬಹುದು. ಅಂದರೆ ಪ್ರತಿ ಗೆಲಾಕ್ಸಿಗೂ, ಸೌರವ್ಯೂಹಕ್ಕೂ (ನಕ್ಷತ್ರ), ಗ್ರಹಗಳಿಗೂ ಪ್ರತ್ಯೇಕವಾದ ಪ್ರಮಾಣದ ಗುರುತ್ವ ಬಲ ಇದೆ. ಅದನ್ನು ಗ್ರಹಿಸಿ ಅದನ್ನು ಬಳಸಿಕೊಂಡು ಪ್ರಯಾಣಿಸುವ ಯಂತ್ರಗಳನ್ನು ಅನ್ಯಗ್ರಹವಾಸಿಗಳು ತಯಾರಿಸಿರಲೂ ಬಹುದು.

ಅಂದರೆ ಕ್ಷೀರ ಪಥದಿಂದ ಬಲು ದೂರ ಇರುವ ಅನ್ಯಗ್ರಹವಾಸಿಗಳು ಮೊದಲು ಕ್ಷೀರಪಥದ ಗುರುತ್ವವನ್ನು ಗ್ರಹಿಸಿ ಅದರ ಸಮೀಪ ಬರುತ್ತಾರೆ. ನಂತರ ಕ್ಷೀರಪಥದಲ್ಲಿನ ಕೋಟ್ಯಾಂತರ ನಕ್ಷತ್ರಗಳ ನಡುವೆ ಸೂರ್ಯನ ಗುರುತ್ವವನ್ನು ಗ್ರಹಿಸಿ ಸೌರಮಂಡಲ ಪ್ರವೇಶಿಸುತ್ತಾರೆ. ತದನಂತರ ಭೂಮಿಯ ಗುರುತ್ವಬಲವನ್ನು ಗ್ರಹಿಸಿ ಭೂಮಿಯ ಸಮೀಪ ಬರುತ್ತಾರೆ.ಭೂಮಿಯ ಸಮೀಪ ಬಂದ ನಂತರ ಹಾರುವ ತಟ್ಟೆಯಲ್ಲಿನ ಇಂದನದ ಮೂಲಕ ಇಲ್ಲಿ ಸಂಚಾರ ನಡೆಸುತ್ತಾರೆ. 
ಇದು ಸಾಧ್ಯವೋ ಅಸಾಧ್ಯವೋ ನನಗೆ ತಿಳಿಯದು. ಸಾಧ್ಯವಾದರೂ ಆಗಬಹುದು, ಇದು ನನ್ನ ಕಲ್ಪನೆ ಮಾತ್ರ!

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...