ವಿಷಯಕ್ಕೆ ಹೋಗಿ

ಜನ-ಧನ್‌ ಹಾಗೂ ಆಧಾರ್‌ !



ಮೊನ್ನೆ ಮೊನ್ನೆ ಕೆಂದ್ರ ಸರ್ಕಾರದ ಜನ-ಧನ್ ಯೋಜನೆಯಲ್ಲಿ ಕೋಟ್ಯಾಂತರ ಜನರಿಗೆ  ಬ್ಯಾಂಕ್‌ ಖಾತೆ ನೀಡಲಾಯ್ತು. ಪ್ರತಿಯೊಬ್ಬ ಪ್ರಜೆಗೂ ಒಂದು ಬ್ಯಾಂಕ್‌ ಖಾತೆ ಇರಲೇ ಬೇಕು, ಹಾಗಾಗಿ ಇದೊಂದು ಅತ್ಯುತ್ತಮ ಯೋಜನೆ. 
ಆದರೆ ಇದನ್ನು ಜಾರಿಗೊಳಿಸಿದ ರೀತಿಯಲ್ಲಿನ ಯಡವಟ್ಟು ನೋಡಿ...
ಈ ಯೋಜನೆಯ ಪ್ರತಿಫಲ ಸಿಗಬೇಕಾಗಿದ್ದುದು ಈ ಮೊದಲೇ ಬ್ಯಾಂಕ್‌ ಖಾತೆ ಹೊಂದಿಲ್ಲದಿರುವವರಿಗೆ ಮಾತ್ರ. ಆದರೆ ಮೊದಲೇ ಬ್ಯಾಂಕ್‌ ಖಾತೆ ಇದ್ದವರೂ ಈ ಯೋಜನೆಯಡಿ ಲಕ್ಷಾಂತರ ಜನರು ಮತ್ತೊಂದು ಖಾತೆ ಮಾಡಿಸಿಕೊಂಡಿದ್ದಾರೆ ಎಂಬುದು ಈಗ ಸರ್ಕಾರದ ಅರಿವಿಗೆ ಬಂದಿದೆ. (ಹೀಗಾಗುತ್ತದೆ ಎಂದು ಮೊದಲೇ ತಿಳಿದಿರಲಿಲ್ಲ ಎನ್ನಲಾಗದು, ಸಂಖ್ಯೆಯ ಲಾಭ ಪಡೆಯಲು ಸುಮ್ಮನಾಗಿದ್ದಿರಲೂ ಬಹುದು.) ಈಗ ಅಂತಹ ಖಾತೆದಾರರನ್ನು ಹೊರ ಹಾಕಲು ಇನ್ನೊಂದು ಮೂರ್ನಾಲ್ಕು ತಿಂಗಳು ಬೇಕಾಗುತ್ತದೆ ಎಂಬ ಸುದ್ದಿ ಬಂದಿದೆ. ಅದು ಆರು ತಿಂಗಳೋ ವರ್ಷವೋ ಹಿಡಿದರೆ ಅಚ್ಚರಿಯೇನಲ್ಲ, ಅಥವಾ ಎಷ್ಟರ ಮಟ್ಟಿಗೆ ಸರಿಯಾದ ಫಲಾನುಭವಿಗಳನ್ನು ಮಾತ್ರ ಉಳಿಸಿಕೊಳ್ಳುತ್ತಾರೆ ಎಂಬುದನ್ನಂತೂ ಕೇಳುವುದೇ ಬೇಡ.
ಆದರೆ ಕೇಂದ್ರ ಸರ್ಕಾರ ಈ ರೀತಿ ಮಾಡಿದಿದ್ದರೆ ???
ಹೇಗಿದ್ದರೂ ಆಧಾರ್‌ ಕಾರ್ಡ್‌ ನೀಡಿದರೆ ಬೇರೆ ಯಾವುದೇ ದಾಖಲೆ ಬೇಡ ಅಂತ ತಿಳಿಸಿದ್ದರು. ಅದನ್ನೇ ಆಧಾರ್‌ ಕಾರ್ಡ್‌ ಇದ್ದವರಿಗೆ ಮಾತ್ರ ಈ ಯೋಜನೆ ಅನ್ವಯ ಅಂತ ಕಡ್ಡಾಯ ಮಾಡಿದ್ದಿದ್ದರೆ ? ಅದಕ್ಕೂ ಮೊದಲು ಬ್ಯಾಂಕ್‌ ಖಾತೆ ಇರುವವರೆಲ್ಲಾ ಆಧಾರ್‌ ಕಾರ್ಡ್‌ ಹೊಂದಿರಲೇ ಬೇಕು ಎಂದು ಕಡ್ಡಾಯ ಮಾಡಿದ್ದಿದ್ದರೆ? ಅಂದು ಅರ್ಜಿ ನೀಡಿದಾಗಲೇ ಐದು ಸೆಕೆಂಡಿನಲ್ಲಿ ಅರ್ಜಿದಾರರು ಇನ್ನೊಂದು ಬ್ಯಾಂಕ್‌ ಖಾತೆ ಹೊಂದಿದ್ದಾರೋ ಇಲ್ಲವೋ ಎಂಬುದು ತಿಳಿದು ಹೋಗಿರುತ್ತಿತ್ತು. ಈ ಯೋಜನೆಯನ್ನು ಇನ್ನೊಂದು ೩-೬ ತಿಂಗಳು ಮುಂದೂಡಿ ಆಧಾರ್‌ ಕಾರ್ಡ್‌‌ನ್ನು ಎಲ್ಲರಿಗೂ ವಿತರಿಸಿದ ನಂತರವೇ ಜಾರಿಗೊಳಿಸಬಹುದಿತ್ತು.
ಇನ್ನಾದರೂ ಕೇಂದ್ರ-ರಾಜ್ಯ ಸರ್ಕಾರಗಳು ಆಧಾರ್‌ ಅನ್ನು ಎಲ್ಲಾ ಇಲಾಖೆ/ಯೋಜನೆಗಳಿಗೂ ಕಡ್ಡಾಯ ಮಾಡಲಿ. ದೇಶವನ್ನು ಭ್ರಷ್ಟರಿಂದ ರಕ್ಷಿಸಲಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ರೇಡಿಯೋ ಕಾಮೆಂಟೇಟರ‍್ ಡಿಕ್ಕಿ ರತ್ನಾಗರ‍್ ನಿಧನ!

ಈ ಸುದ್ದಿಯ ತಲೆ ಬರಹವನ್ನು ಇಂದಿನ ಕನ್ನಡಪ್ರಭದಲ್ಲಿ ನೋಡಿ ಕೊಂಚ ಯೋಚಿಸುವಂತಾಯ್ತು. ಮೊದಲಿಗೆ ರತ್ನಾಗರ‍್ ಯಾರೆಂದು ನನಗೆ ತಿಳಿದಿಲ್ಲ. ಆದರೂ ಅವರು ನಿಧನರಾಗಿರುವ ಸುದ್ದಿ ಪತ್ರಿಕೆಯಲ್ಲಿ ಬಂದಿರುವುದರಿಂದ ಅವರೊಬ್ಬ ಖ್ಯಾತ ವ್ಯಕ್ತಿ ಎಂದು ಅರಿವಾಯ್ತು. ಇಲ್ಲದಿದ್ದರೆ ಮುಖಪುಟದಲ್ಲಿ ಹೆಸರು ಹಾಕಿ ನಿಧನ ಸುದ್ದಿ ಹಾಕುತ್ತಿರಲಿಲ್ಲ. ಒಳಗಿನ ಯಾವುದೋ ಪುಟದಲ್ಲಿ "ರೇಡಿಯೋ ಕಮೆಂಟೇಟರ‍್ ಡಿಕ್ಕಿ - ವ್ಯಕ್ತಿ ಸಾವು" ಎಂದು ಕೊಟ್ಟಿರುತ್ತಿದ್ದರು. ಆದರೆ ಅವರು ಸತ್ತಿರುವ ರೀತಿ ಸ್ವಲ್ಪ ಗೊಂದಲ ಮೂಡಿಸಿತು. ನನಗೆ ಮೊದಲು ಅನ್ನಿಸಿದ್ದು ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸತ್ತಿದ್ದಾರೆ ಎಂದು. ಸುದ್ದಿಯ ತಲೆಬರಹ ಮುಖಪುಟದಲ್ಲಿ ಇದ್ದು ವಿವರ ೧೫ನೇ ಪುಟದಲ್ಲಿರುವುದಾಗಿ ತೋರಿಸಿದ್ದರು. ಆ ಪುಟಕ್ಕೆ ಹೋಗುವ ಮುನ್ನ ಉಳಿದ ಪ್ರಮುಖ ಸುದ್ದಿಗಳತ್ತ ಕಣ್ಣಾಡಿಸಲೇ ಬೇಕಿತ್ತು. ಆ ಸಮಯದಲ್ಲೇ ರತ್ನಾಗರ‍್ ಸಾವಿನ ಬಗ್ಗೆ ನಾನು ಯೋಚಿಸಿದ್ದು. ರೇಡಿಯೋ ಕಮೆಂಟೇಟರ‍್ ಡಿಕ್ಕಿಯಿಂದಾಗಿ ರತ್ನಾಗರ‍್ ಸಾಯಬೇಕಿದ್ದರೆ ರೇಡಿಯೋ ಕಮೆಂಟೇಟರ‍್ ಬಹುಶಃ ಅತಿ ವೇಗವಾಗಿಯೇ ಬಂದಿರಬೇಕು. ಎಷ್ಟೇ ವೇಗವಾಗಿ ಬಂದರೂ ಒಬ್ಬ ವ್ಯಕ್ತಿ ಇನ್ನೊಬ್ಬರಿಗೆ ಡಿಕ್ಕಿ ಹೊಡೆದರೆ ಸಾವು ಸಂಭವಿಸುವುದು ಅಷ್ಟೊಂದು ಸಲೀಸಲ್ಲ. ಓಡಿ ಬಂದು ಡಿಕ್ಕಿ ಹೊಡೆದಿರಬಹುದೇ ? ಒಂದು ವೇಳೆ ರತ್ನಾಗರ‍್ ವಯಸ್ಸಾದವರಾಗಿದ್ದರೆ ಎದುರಿನ ವ್ಯಕ್ತಿ ಓಡಿ ಬಂದು ಡಿಕ್ಕಿ ಹೊಡೆದರೆ...