ವಿಷಯಕ್ಕೆ ಹೋಗಿ

ಅಣ್ಣನ ಸಾವನ್ನು ಬದಿಗಿಟ್ಟು ಸತ್ಯಾಗ್ರಹದಲ್ಲಿ ತೊಡಗಿದವರು....



ಒಬ್ಬರು ಒಂದು ಪ್ರಬಲ ಹೋರಾಟವನ್ನು ಕೆಲವೇ ಸಮಾನ ಮನಸ್ಕರ ಜೊತೆಗೂಡಿ ಶುರು ಮಾಡುತ್ತಾರೆ. ಅದು ಸರ್ಕಾರಕ್ಕೂ ಬಿಸಿ ಮುಟ್ಟಿಸುವಂತಾ ಹೋರಾಟ. ಧರಣಿ ಸತ್ಯಾಗ್ರಹ ಶುರುವಾಗುತ್ತದೆ. ನಾಲ್ಕೈದು ದಿನ ಕಳೆದರೂ ಸರ್ಕಾರದಿಂದ ಯಾವ ಪ್ರತಿಕ್ರಿಯೆಯೂ ಬರುವುದಿಲ್ಲ. ಹಾಗೆಯೇ ಒಂದು ದಿನ ಬೆಳಗ್ಗೆ ಏಳುವಾಗ ಒಂದು ಸುದ್ದಿ ಬರುತ್ತದೆ... ಅದು ಅವರ ಒಡಹುಟ್ಟಿದ ಅಣ್ಣ ನಿದನರಾಗಿರುವ ಸುದ್ದಿ! 

ಸಾವಿನ ಮನೆಗೆ ಹೋಗುವುದಾದರೆ ತಮ್ಮದೇ ನೇತೃತ್ವದ ಧರಣಿ ಸತ್ಯಾಗ್ರಹಕ್ಕೆ ಗೈರಾಗಬೇಕು. ಏನು ಮಾಡುವುದೆಂದು ಯೋಚಿಸಿದ ಅವರು ಬೇಗನೆ ತಯಾರಾಗಿ ಹೊರಡುತ್ತಾರೆ... ಸತ್ಯಾಗ್ರಹದ ಸ್ಥಳಕ್ಕೆ. 

ತಮ್ಮ ಪತ್ನ ಮಗನನ್ನು ತಮ್ಮ ಅಣ್ಣನ ಮನೆಗೆ ಕಳಿಸಿ ಎಂದಿನಂತೆ ಧರಣಿಯಲ್ಲಿ ಪಾಲ್ಗೊಳ್ಳುತ್ತಾರೆ. ಅಣ್ಣ ಸತ್ತ ವಿಷಯವನ್ನೂ ಸಹ ಉಳಿದವರಿಗ್ಯಾರಿಗೂ ಹೇಳದೇ ದುಃಖ ನುಂಗಿಕೊಂಡು ಸತ್ಯಾಗ್ರಹ ಮುಂದುವರಿಯುತ್ತದೆ... ಸುಮಾರು ನಕವತ್ತು ದಿನಗಳ ವರೆಗೆ!

ಇವರ ನ್ಯಾಯ ನಿಷ್ಠುರ ಶಾಂತಿಯುತ ಹೋರಾಟಕ್ಕೆ ಸರ್ಕಾರ ಮಣಿಯುತ್ತದೆ. ಆಗ ತಮ್ಮೊಂದಿಗೆ ಭಾಗವಹಿಸಿದ ಹೋರಾಟಗಾರರಿಗೆ ತಮ್ಮ ಅಣ್ಣ ಸತ್ತು ಹೋಗಿರುವ ದುಃಖಕರ ವಿಷಯವನ್ನು ತಿಳಿಸುತ್ತಾರೆ!

ನೆನಪಿರಲಿ, ಇದು ಯಾವುದೋ ಹಳೆಯ ಕಾಲದ ಘಟನೆ ಅಲ್ಲ. ನಮ್ಮ ನಿಮ್ಮ ನಡುವೆಯೇ ಇರುವ ನ್ಯಾಯ ನಿಷ್ಟುರ ವ್ಯಕ್ತಿಯೊಬ್ಬರ ವಿಷಯ. ಅವರೇ 'ಭೂಕಬಳಿಕೆ ವಿರೋಧಿ ಹೋರಾಟ'ವನ್ನು ಪ್ರಾರಂಭಿಸಿ, ಸರ್ಕಾರದಿಂದ ಹೊಸ ಕಾನೂನು ಮತ್ತು ಪ್ರತ್ಯೇಕ ನ್ಯಾಯಾಲಯ ಸ್ಥಾಪನೆಯಾಗಲು ಕಾರಣರಾದ ಎ.ಟಿ. ರಾಮಸ್ವಾಮಿ!

ಅವರು ಹೋರಾಟ ಮಾಡಿದ್ದು ತಮ್ಮ ಸ್ವಾರ್ಥಕ್ಕಾಗಿ ಅಲ್ಲ. ಧನಿಕರು ಲೂಟಿ ಮಾಡಿರುವ ಸರ್ಕಾರಿ ಭೂಮಿ ಮತ್ತೆ ಸರ್ಕಾರಕ್ಕೆ ಮರಳಿ ಅದರಿಂದ ಬಡವರಿಗೂ ಅನುಕೂಲವಾಗಲಿ ಎಂದು. ಅವರ ನಿಸ್ವಾರ್ಥ ಹೋರಾಟಕ್ಕೆ ಸ್ವಾತಂತ್ರ‍್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ನಿ. ನ್ಯಾಯಮೂರ್ತಿ ಸಂತೋಷ್ ಹೆಗಡೆ, ಕರವೇಯ ಶಿವರಾಮೇಗೌಡ ಮುಂತಾದ ಪ್ರಾಮಾಣಿಕರು ಬೆಂಬಲ ನೀಡಿದ್ದರು. ಈ ಹೋರಾಟಕ್ಕೆ ಸಿದ್ದರಾಮಯ್ಯನವರ ಸರ್ಕಾರವೂ ಮಣಿದಿದ್ದು ಭೂಕಬಳಿಕೆಯನ್ನು ಮರಳಿ ಪಡೆಯುವ ಸಲುವಾಗಿ ಇಬ್ಬರು ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದೆ. ಮತ್ತು ಪ್ರತ್ಯೇಕ ನ್ಯಾಯಾಲಯಕ್ಕೂ ರಾಷ್ಟ್ರಪತಿಗಳಿಂದ ಅನುಮತಿ ದೊರೆತಿದೆ. 

ಈ ಹೋರಾಟದ ವಿಜೋತ್ಸವ ಇಂದು ಬೆಳಗ್ಗೆ ಬೆಂಗಳೂರಿನ ಪುರಭವನದ ಎದರು ಇದೆ. ಇಂತಹ ಪ್ರಾಮಾಣಿಕರಿಗೆ ನಮ್ಮೆಲ್ಲರ ಬೆಂಬಲವೂ ಇರಬೇಕು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ವರದಾ ಬಸ್ಸಿಗೆ ಬೆಂಕಿ ಬಿತ್ತು !!

ಇದು ನಾನು ಹೈಸ್ಕೂಲು ಓದುತ್ತಿದ್ದಾಗ ನಡೆದ ಘಟನೆ. ಸಾಗರದಲ್ಲಿ ಶ್ರೀ ವರದಾ ಬಸ್‌ನ ಹೆಸರನ್ನು ಕೇಳದವರೇ ಇಲ್ಲ. ನನಗೆ ಬುದ್ದಿ ತಿಳಿದಾಗಿನಿಂದಲೂ ನಮ್ಮೂರಿಗೆ ಬರುತ್ತಿದ್ದುದು ಅದೇ ಬಸ್ಸು. ಅದರ ಮಾಲೀಕರಿಗೆ ಇದ್ದದ್ದು ಅದೊಂದೇ ಬಸ್ಸು. ಹಾಗಂತ ಅದೇನೂ ಐರಾವತ ಥರಾ ಇರಲಿಲ್ಲ. ಸಾಧಾರಣವಾಗೇ ಇತ್ತು. ಸಾಗರದಿಂದ ಚಂದನಹಳ್ಳಿಗೆ ಇರುವ ಹತ್ತು ಕಿಲೋ ಮೀಟರನ್ನು ಕೇವಲ ಒಂದು ಗಂಟೆಯ ಅವಧಿಯಲ್ಲೇ ಕ್ರಮಿಸಿ ದಾಖಲೆ ಮಾಡಿತ್ತು. ಯಾಕೆಂದರೆ ಅದೇ ರಸ್ತೆಯಲ್ಲಿ ಕಾರುಗಳು ಬಂದರೆ ಅವು ಎರಡು ಗಂಟೆ ತೆಗೆದುಕೊಳ್ಳುತ್ತಿದ್ದವು. ರಸ್ತೆ ಹಾಗಿತ್ತು. ಅದಕ್ಕೆ ತಕ್ಕಂತೆ ಬಸ್ಸೂ ಸಹ ಪ್ರತಿ ದಿನ ಬಿಹೆಚ್ ರಸ್ತೆಯ ಒಂದು ಗ್ಯಾರೇಜಿಗೆ ಹೋಗಿ ತಪಾಸಣೆ ಮಾಡಿಸಿಕೊಂಡೇ ಬರುತ್ತಿತ್ತು. ಸಾಗರದಲ್ಲಿ ಗುರುವಾರ ಸಂತೆ. ಗುರುವಾರ ಬಂತೆಂದರೆ ಭಯಂಕರ ರಷ್ಶು. ಅದೊಂದು ಗುರುವಾರ ಸಾಗರದ ಜ್ಯೂನಿಯರ‍್ ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮಧ್ಯಾಹ್ನ ಬಿಹೆಚ್ ರಸ್ತೆಯ ಗ್ಯಾರೇಜಿನಲ್ಲೇ ಇರುತ್ತಿದ್ದ ವರದಾ ಬಸ್ಸನ್ನು ಹತ್ತಿ ಹೇಗೋ ಸೀಟು ಹಿಡಿದು ಕುಳಿತಿದ್ದೆ. ಸೀಟು ಬೇಕಾದವರೆಲ್ಲಾ ಅಲ್ಲೇ ಬಂದು ಬಸ್ ಹತ್ತುತ್ತಿದ್ದರು. ಬಸ್ ಅಂತೂ ಒಂದು ಗಂಟೆಗೆ ಹೊರಟು ಜೋಗ ಬಸ್‌ ನಿಲ್ದಾಣ ಬಂದಾಗ ಯಕ್ಕಾಮಕ್ಕಾ ಜನ ಹತ್ತಿಯೇ ಬಿಟ್ಟರು. ಬಸ್‌ನ ಟಾಪ್‌ನಲ್ಲೂ ಜನರು ಹತ್ತಿ ಕುಳಿತರು. ಒಳಗಡೆಯಂತೂ ಉಸಿರುಗಟ್ಟುವಷ್ಟು ಜನಸಂದಣಿ. ಗಂಡಸರು, ಹೆಂಗಸರು, ಮಕ್ಕಳು ಮದುಕರು, ಮುದುಕಿಯರು, ಹರೆಯದ ಹು...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...