ವಿಷಯಕ್ಕೆ ಹೋಗಿ

ಕಪ್ಪುಹಣದ ಚೆಂಡು ಸುಪ್ರೀಂ ಅಂಗಳದಲ್ಲಿ



'ವಿದೇಶಿ ಬ್ಯಾಂಕ್‌ಗಳಲ್ಲಿ ಕಪ್ಪು ಹಣ ಇರಿಸಿದವರ ಎಲ್ಲಾ ಹೆಸರುಗಳನ್ನು ತನಗೊಪ್ಪಿಸುವಂತೆಯೂ, ತಾನೇ ತನಿಖೆ ನಡೆಸಿ ಕಪ್ಪು ಹಣವಿದ್ದರೆ ವಾಪಸ್ಸು ತರುವುದಾಗಿಯೂ, ಕೇಂದ್ರ ಸರ್ಕಾರದ ಮೇಲೆ ಯಾವುದೇ ನಂಬಿಕೆ ಉಳಿದಿಲ್ಲ ಎಂಬುದಾಗಿಯೂ' ನಿನ್ನೆ ಸುಪ್ರೀಂ ಕೋರ್ಟ್‌ ಆದೇಶಿಸುವುದರೊಂದಿಗೆ ಕಪ್ಪು ಹಣವನ್ನು ತಂದು ಮತ ಹಾಕಿದವರಿಗೆ ನ್ಯಾಯ ಒದಗಿಸಿ, ವಿರೋಧಿಸಿದವರ ಬಾಯನ್ನೂ ಮುಚ್ಚಿಸಬಹುದಾಗಿದ್ದ ಸುವರ್ಣಾವಕಾಶವನ್ನು ಬಿಜೆಪಿ (ಮುಖ್ಯವಾಗಿ ಮೋದಿ) ಕಳೆದುಕೊಂಡರು. ಲಪಡಾ ಬಾಬಾನೊಬ್ಬ ನಗೆಪಾಟಲಿಗೂ ಈಡಾದುದು ಈಗ ಇತಿಹಾಸ.

ಯುಪಿಎ ಸಹ ಕಪ್ಪು ಹಣ ತರುವ ಪ್ರಯತ್ನವನ್ನು (ಪ್ರಾಮಾಣಿಕ ಅನ್ನಲಾಗದಿದ್ದರೂ) ಶುರು ಮಾಡಿತ್ತು. ಆದರೆ ಎನ್‌ಡಿಎ ಕೂಡಾ ಯುಪಿಎ ಗಿಂತ ಹೆಚ್ಚಿನದನ್ನಾಗಲೀ ಭಿನ್ನವಾಗಿಯಾಗಲೀ ಮಾಡಲಿಲ್ಲ. ಇದರಿಂದಾಗಿ ಪ್ರಜೆಗಳಂತೆಯೇ ನ್ಯಾಯಾಲಯ ಸಹ ಮುನಿಸುಗೊಂಡಿರುವುದು ಸ್ಪಷ್ಟ. ಇಂದಿನಿಂದ ಕಪ್ಪು ಹಣದ ಚೆಂಡು ನ್ಯಾಯಾಲಯದ ಅಂಗಳದಲ್ಲಿರಲಿದೆ. ಇನ್ಮುಂದೆ ಕಪ್ಪು ಹಣ ಬರುವುದಾಗಲೀ, ಬಾರದಿರುವುದಾಗಲೀ ನಡೆದರೆ ಅದಕ್ಕೆ ಕಾರಣ ನ್ಯಾಯಾಲಯವಾಗಿರುತ್ತದೆಯೇ ಹೊರತೂ ಮೋದಿ/ಬಿಜೆಪಿ ಅಲ್ಲ. ಒಂದು ವೇಳೆ ನ್ಯಾಯಾಲಯವು ತನಿಖೆ ನಡೆಸಿ ಕಪ್ಪುಹಣ ತಂದುಬಿಟ್ಟರೆ ಮೋದಿ ಭಕ್ತರು ಯಥಾ ಪ್ರಕಾರ ಮೋದಿಯ ಗುಣಗಾನ (ಸುಳ್ಳು) ಮಾಡಿ ಮುಗ್ದರನ್ನು 'ಇದು ಮೋದಿಯೇ ತಂದಿದ್ದು' ಎಂದು ನಂಬಿಸಲೂಬಹುದು. ಆದರೆ ಪ್ರಜ್ಞಾವಂತರೆಲ್ಲರಿಗೂ (ಇಷ್ಟು ದಿನ ಮೋದಿಯನ್ನು ನಂಬಿದ್ದವರಿಗೂ) ತಿಳಿದು ಹೋಯ್ತು ಇವರ ಬಂಡವಾಳ!

ಇಂದು ಕಪ್ಪು ಹಣ ಇರಿಸಿದವರ ಪೂರ್ತಿ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಲಿದೆ. ನೋಡೋಣ, ಅದರಲ್ಲಿ ಯಾವ ಯಾವ ರಾಜಕಾರಣಿಗಳ, ಯಾವ ಉದ್ಯಮಿಗಳ ಹೆಸರುಗಳಿವೆ ಅಂತ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶಿಕ್ಷಣದ ಬಗೆಗಿನ ನುಡಿಮುತ್ತುಗಳು

* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು . * ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. * ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ . * ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. * ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. * ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. * ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. * ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ. * ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ . * ಶಿಕ್ಷಣವೇ ಜೀವನದ ಬೆಳಕು - ಗೊರೂರು * ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್. * ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. * ವಿದ್ಯೆ ಗುರುಗಳ ಗುರು - ಭ್ರತೃ ಹರಿ. * ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ...

ಈ ಹುಡುಗಿಯರೇ ಹೀಗೆ !

ಬೆಟ್ಟದ ಬದಿಯಿಂದ ಮುಂಜಾನೆಯ ರವಿ ಇಣುಕಿದಂತೆ ಕಿಟಕಿ ಹಿಂದಿನ ಕಂಗಳು, ಕಂಡೂ ಕಾಣದ ಮುಂಗುರುಳು ಗಲಗಲ ಬಳೆಯ ತರಂಗ ಕಿಲಕಿಲ ನಗುವಿನಂತರಂಗ, ಎದುರು ಬರಲಾರರು ಚೆಲುವೆಯರು ಬಂದರೂ ಬಹು ಲಾಸ್ಯ ಲಜ್ಜೆ ಇಡುತಲಿ ಒಂದೊಂದೇ ಹೆಜ್ಜೆ ಮುಗಿಲಿಂದ ಬರಗಾಲದಿ ಮಳೆ ಹನಿ ಬಿಸಿ ನೆಲಕ್ಕೆ ಎಣಿಸಿ ಮುತ್ತಿಕ್ಕಿದಂತೆ ! ಕಿರು ಹಣತೆ ಉರಿಯಂತೆ ತುಟಿ ರಂಗು ಪತಂಗ ಹಾರಿದಂತೆ ತೆಳು ಸೆರಗು ಕಾವ್ಯದೊಡತಿಯರು, ಮೌನವೇ ಮಾತು. ಅರೆಕ್ಷಣದಿ ಸೃಷ್ಟಿಸಿ ಕಲ್ಪಾನಾ ಲೋಕ ನಗ್ನ ಬಿಂಬ ತೋರಿ ತೆರೆವರು ಪ್ರೇಮಲೋಕ ಒಮ್ಮೆ ಧಾರಾಳ ದಮಯಂತಿ ಮಗದೊಮ್ಮೆ ಮುನಿದ ಮಗುವಂತೆ ಅಲ್ಲಿ ಪ್ರೇಮ ಪ್ರೀತಿಯನ್ನರಸುವ ಹುಡುಗನ ನಿರಂತರ ಬೇಟೆ ! ಅರಿವಾಗುವ ಮುನ್ನವೇ ಮಾನಸಿಕ ಪತ್ನಿಯಾಗಿರುತ್ತಾಳೆ, ಛೇಧಿಸಿ ಹೃದಯ ಕೋಟೆ.

ಪಡುವಣಕ್ಕೆ ಹೊರಟ ವಿಮಾನ ಏಕೆ ಬೇಗನೆ ತಲುಪುವುದಿಲ್ಲ ?

ಭೂಮಿ ವೇಗವಾಗಿ ಸುತ್ತುತ್ತಿದೆ ಎಂಬುದನ್ನು ಒಪ್ಪದವರು ಮುಂದಿಡುವ ಒಂದು ಪ್ರಶ್ನೆ ಹೀಗಿದೆ. "ಭೂಮಿ ಅಷ್ಟು ವೇಗವಾಗಿ ತಿರುಗುತ್ತ ಇದ್ದರೆ ಒಂದು ವಿಮಾನವು ಚೀನಾದಿಂದ ಸೌದಿಗೆ ಹೋಗಬೇಕಾದಲ್ಲಿ ಸ್ವಲ್ಪ ಮೇಲೆ ಹೋಗಿ ನಿಂತುಕೊಂಡರೆ ಸಾಕಲ್ಲ, ಭೂಮಿ ತಿರುಗುವುದರಿಂದ ಸೌದಿ ಅರೇಬಿಯಾ ತಾನಾಗಿಯೇ ವಿಮಾನದ ಕೆಳಗೆ ಬರುತ್ತದೆ. ಅಥವಾ ಮೂಡಣ ದಿಕ್ಕಿಗೆ ಹೊರಟ ವಿಮಾನವು ತಡವಾಗಿ ತಲುಪಬೇಕು ಮತ್ತು ಪಡುವಣ ದಿಕ್ಕಿಗೆ ಹೊರಟ ವಿಮಾನವು ಬೇಗನೆ ತಲುಪಬೇಕು" ಎಂಬ ವಾದವನ್ನು ಮುಂದಿಡುತ್ತಾರೆ. ಆದರೆ ಹಾಗೆ ಆಗಲು ಸಾಧ್ಯವಿಲ್ಲ, ಏಕೆಂದರೆ ಭೂಮಿ ಅಂದರೆ ಬರೀ ನೆಲವಷ್ಟೇ ಅಲ್ಲ, ಅದರ ಸುತ್ತಲಿನ ವಾತಾವರನವೂ ಸೇರಿ ಅದರ ಜೊತೆಗೇ ತಿರುಗುತ್ತಾ ಇದೆ. ಹಾಗಾಗಿ ವಿಮಾನವು ಮೇಲೆ ಹೋಗಿ ನಿಂತರೂ ಸಹ ಅದು ಭೂಮಿಯ ಜೊತೆಗೇ ಸಾಗುತ್ತದೆಯಾದ್ದರಿಂದ ಕೆಳಗಿನ ನೆಲ ಮಾತ್ರ ಜರುಗಲು ಸಾಧ್ಯ ಇಲ್ಲ. ಇದನ್ನು ನಾವೇ ಪರಿಶೀಲಿಸಬಹುದು. ಹೇಗೆಂದರೆ.. ವೇಗವಾಗಿ ಹೋಗುತ್ತಿರುವ ರೈಲಿನ ಎಲ್ಲಾ ಕಿಟಕಿಗಳನ್ನೂ ಮುಚ್ಚಿ ಅದರ ಮಾಡಿನ ಹತ್ತಿರದಿಂದ ಒಂದು ಚಿಕ್ಕ ವಸ್ತುವನ್ನು (ಉದಾ : ಗೋಲಿ) ಬಿಟ್ಟರೆ ಅದು ನಾವು ಬಿಟ್ಟಬಿಂದುವಿನ ನೇರಕ್ಕೇ ಬಿಳುತ್ತದೆಯೆ ಹೊರತಾಗಿ ರೈಲು ಓಡುತ್ತಿರುವುದರಿಂದ ಸ್ವಲ್ಪ ಹಿಂದೆ ಬೀಳುವುದಿಲ್ಲ. ಹಾಗೆಯೇ ಗಾಳಿಯಾಡದಂತೆ ಮುಚ್ಚಿದ ರೈಲು ಬೋಗಿಯ ಒಳಗೆ ಒಂದು ತುದಿಯಿಂದ ಇನ್ನೊಂದು ತುದಿಗೆ ಚೆಂಡನ್ನು ಒಂದೇ ಜೋರಿನಲ್ಲಿ ಎಸೆದರೆ ಅದು ಎರಡೂ ದಿಕ್ಕಿಗೂ (ಮುಂದಿನಿ...